ಬ್ರೇಕಿಂಗ್ ನ್ಯೂಸ್
20-05-26 11:23 pm HK News Desk ದೇಶ - ವಿದೇಶ
ತಿರುವನಂತಪುರಂ, ಮೇ 20 ಕೇರಳದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದ ಯುಡಿಎಫ್ ಸರ್ಕಾರವು ಎರಡು ದಿನದ ಹೊಯ್ದಾಟದ ಬಳಿಕ ಕಡೆಗೂ ಸಚಿವ ಸಂಪುಟದ ಖಾತೆ ಹಂಚಿಕೆಯನ್ನು ಮಾಡಿ ಅಧಿಕೃತವಾಗಿ ಪ್ರಕಟಿಸಿದೆ. ಮುಖ್ಯಮಂತ್ರಿ ವಿ.ಡಿ. ಸತೀಶನ್ ಕಾಂಗ್ರೆಸ್ ಹೈಕಮಾಂಡ್ ಸೂಚನೆಯನ್ನು ಪಾಲಿಸುತ್ತಿಲ್ಲ ಎಂಬ ಆರೋಪ, ಸಚಿವ ಸ್ಥಾನದ ಆಕಾಂಕ್ಷಿಗಳ ಅಸಮಾಧಾನ ನಡುವೆಯೇ ಸಿಎಂ ಸಂಪುಟ ಖಾತೆಗಳನ್ನು ಹಂಚಿಕೆ ಮಾಡಿ ರಾಜ್ಯಪಾಲರಿಂದ ಅನುಮೋದನೆ ಪಡೆದಿದ್ದಾರೆ. ಸಚಿವ ಸಂಪುಟದ ಪ್ರಮುಖ ಖಾತೆಗಳ ವಿವರಗಳು ಹೀಗಿವೆ.
ವಿ.ಡಿ. ಸತೀಶನ್ (ಮುಖ್ಯಮಂತ್ರಿ): ಹಣಕಾಸು, ಕಾನೂನು, ಕೇರಳ ಫೈನಾನ್ಷಿಯಲ್ ಕಾರ್ಪೊರೇಷನ್, ಬಂದರುಗಳು, ಮಾಲಿನ್ಯ ನಿಯಂತ್ರಣ, ವಿಮಾನ ನಿಲ್ದಾಣಗಳು, ಮೆಟ್ರೋ ರೈಲು, ರೈಲ್ವೆ ಮತ್ತು ಇತರೇ ಉಳಿದಿರುವ ಖಾತೆಗಳು
ರಮೇಶ್ ಚೆನ್ನಿತ್ತಲ: ಗೃಹ ಇಲಾಖೆ, ವಿಜಿಲೆನ್ಸ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಕಾರಾಗೃಹಗಳು
ಸನ್ನಿ ಜೋಸೆಫ್ (ಕೆಪಿಸಿಸಿ ಅಧ್ಯಕ್ಷ): ವಿದ್ಯುತ್, ಪರಿಸರ, ಸಂಸದೀಯ ವ್ಯವಹಾರಗಳು ಮತ್ತು ಅನೆರ್ಟ್ (ANERT).
ಕೆ. ಮುರಳೀಧರನ್: ಆರೋಗ್ಯ, ವೈದ್ಯಕೀಯ ಶಿಕ್ಷಣ, ವೈದ್ಯಕೀಯ ವಿಶ್ವವಿದ್ಯಾಲಯ, ಆಯುಷ್, ಡ್ರಗ್ಸ್ ಕಂಟ್ರೋಲ್ ಮತ್ತು ದೇವಸ್ವಂ.
ಎ.ಪಿ. ಅನಿಲ್ ಕುಮಾರ್: ಭೂ ಕಂದಾಯ, ಸಮೀಕ್ಷೆ ಮತ್ತು ಭೂ ದಾಖಲೆಗಳು ಮತ್ತು ಭೂ ಸುಧಾರಣೆಗಳು.
ಪಿ. ಸಿ. ವಿಷ್ಣುನಾಥ್: ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಕೇರಳ ರಾಜ್ಯ ಚಲನಚಿತ್ರ ಅಭಿವೃದ್ಧಿ ನಿಗಮ (KSFDC).
ಎಂ. ಲಿಜು: ಸಹಕಾರ ಮತ್ತು ಅಬಕಾರಿ.
ರೋಜಿ ಎಂ. ಜಾನ್: ಕಾಲೇಜು ಶಿಕ್ಷಣ, ತಾಂತ್ರಿಕ ಶಿಕ್ಷಣ, ವಿಶ್ವವಿದ್ಯಾಲಯಗಳು (ಕೃಷಿ, ಪಶುವೈದ್ಯಕೀಯ, ಮೀನುಗಾರಿಕೆ, ವೈದ್ಯಕೀಯ ಮತ್ತು ಡಿಜಿಟಲ್ ಹೊರತುಪಡಿಸಿ), ಪ್ರವೇಶ ಪರೀಕ್ಷೆ, ಎನ್ಸಿಸಿ (NCC) ಮತ್ತು ಅಸ್ಯಾಪ್ ಕೇರಳ (ASAP Kerala).
ಟಿ. ಸಿದ್ದಿಕಿ: ಕೃಷಿ, ಮಣ್ಣಿನ ಸಮೀಕ್ಷೆ ಮತ್ತು ಮಣ್ಣಿನ ಸಂರಕ್ಷಣೆ, ಕೇರಳ ಕೃಷಿ ವಿಶ್ವವಿದ್ಯಾಲಯ ಮತ್ತು ಉಗ್ರಾಣ ನಿಗಮ.
ಕೆ.ಎ. ತುಳಸಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ.
ಬಿಂದು ಕೃಷ್ಣ: ಕಾರ್ಮಿಕ, ಪಶುಸಂಗೋಪನೆ, ಹಾಲು ಮಾರಾಟ ಸಹಕಾರ ಸಂಘಗಳು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ.
ಒ.ಜೆ. ಜನೀಶ್: ಕ್ರೀಡೆ, ಯುವಜನ ವ್ಯವಹಾರಗಳು, ಪ್ರಾಣಿ ಸಂಗ್ರಹಾಲಯಗಳು ಮತ್ತು ವಸ್ತು ಸಂಗ್ರಹಾಲಯ
ಪಿ.ಕೆ. ಕುಂಞಾಲಿಕುಟ್ಟಿ (ಮುಸ್ಲಿಂ ಲೀಗ್) : ಕೈಗಾರಿಕೆ ಮತ್ತು ವಾಣಿಜ್ಯ, ಮಾಹಿತಿ ತಂತ್ರಜ್ಞಾನ (IT) ಮತ್ತು ಕೃತಕ ಬುದ್ಧಿಮತ್ತೆ (AI).
ಎನ್. ಶಂಸುದ್ದೀನ್(ಲೀಗ್) : ಸಾರ್ವಜನಿಕ ಶಿಕ್ಷಣ, ವಕ್ಫ್, ಹಜ್ ಯಾತ್ರೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ.
ಕೆ.ಎಂ. ಶಾಜಿ (ಲೀಗ್) : ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ.
ಪಿ.ಕೆ. ಬಶೀರ್ ( ಲೀಗ್) : ಸಾರ್ವಜನಿಕ ಲೋಕೋಪಯೋಗಿ ಇಲಾಖೆ (PWD).
ವಿ.ಇ. ಅಬ್ದುಲ್ ಗಫೂರ್ (ಲೀಗ್) : ಮೀನುಗಾರಿಕೆ, ಹಾರ್ಬರ್ ಇಂಜಿನಿಯರಿಂಗ್ ಮತ್ತು ಸಾಮಾಜಿಕ ನ್ಯಾಯ.
ಮೊನ್ಸ್ ಜೋಸೆಫ್ (ಕೇರಳ ಕಾಂಗ್ರೆಸ್): ನೀರಾವರಿ ಇಲಾಖೆ
ಅನೂಪ್ ಜೇಕಬ್ (ಕೇರಳ ಕಾಂಗ್ರೆಸ್ - ಜೇಕಬ್): ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಮತ್ತು ಕಾನೂನು ಮಾಪನ ಶಾಸ್ತ್ರ.
ಶಿಬು ಬೇಬಿ ಜಾನ್ (ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ - RSP): ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ.
ಸಿ.ಪಿ. ಜಾನ್ (ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷ - CMPKSC): ರಸ್ತೆ ಸಾರಿಗೆ, ಮೋಟಾರು ವಾಹನಗಳು ಮತ್ತು ಜಲ ಸಾರಿಗೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm