ಬ್ರೇಕಿಂಗ್ ನ್ಯೂಸ್
23-05-26 01:59 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 23: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನಿರುದ್ಯೋಗಿ ಜಿರಳೆಗಳು ಹೇಳಿಕೆಯನ್ನು ವಿರೋಧಿಸಿ, ಆನ್ ಲೈನ್ ನಲ್ಲಿ ಅಭಿಯಾನ ನಡೆಸಿ ಅಪಾರ ಸಂಖ್ಯೆಯ ಫಾಲೋವರ್ಸ್ ಗಳಿಸಿದ "ಕಾಕ್ರೋಚ್ ಜನತಾ ಪಾರ್ಟಿಗೆ" ರಾಜ್ಯದಲ್ಲೂ ಆನ್ಲೈನ್ ಮೂಲಕ ಭಾರಿ ಬೆಂಬಲ ವ್ಯಕ್ತವಾಗಿತ್ತು. ಆದರೆ ಅವರು ಮೇ 24 ಭಾನುವಾರದಂದು ಟೌನ್ ಹಾಲ್ ಬಳಿ ಕರೆದ ಶಾಂತಿಯುತ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ಹಿನ್ನಡೆಯಾಗಿದೆ.
ಅನುಮತಿಯಿಲ್ಲದೆ ಟೌನ್ ಹಾಲ್ ಮುಂಭಾಗ ಯಾರೂ ಜನ ಸೇರಿಸುವಂತಿಲ್ಲ. ಪ್ರತಿಭಟನೆ, ಅಥವಾ ರ್ಯಾಲಿಗಳಿಗೆ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಉದ್ದೇಶ.ಜನ ಯಾರೂ ಸೇರಬಾರದು, ಸೇರಿದರೂ ಹೈಕೋರ್ಟ್ ಆದೇಶದ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಪೊಲೀಸ್ ನೋಟಿಸ್ ಹೊರಡಿಸಿದ್ದಾರೆ.
ಬೆಲೆ ಏರಿಕೆ, ನಿರುದ್ಯೋಗ, ನೀಟ್ ಪರೀಕ್ಷೆ ಅಕ್ರಮ, ಪ್ರಧಾನಿ ಮೋದಿ ವಿದೇಶ ಪ್ರವಾಸ ವಿಷಯಗಳನ್ನು ವಿರೋಧಿಸಿ, ಪಕ್ಷದ ಎಲ್ಲಾ ಅಭಿಮಾನಿಗಳು, ಬನ್ನಿ ಶಕ್ತಿ ಪ್ರದರ್ಶಿಸೋಣ, ಆನ್ ನೈನಲ್ಲಿ ಮಾತ್ರವಲ್ಲದೆ ಬೀದಿಯಲ್ಲಿ ಶಕ್ತಿ ತೋರಿಸುವ ಸಮಯ ಇದು. ಆತ್ಮವಂಚಕ ಆಡಳಿತಕ್ಕೆ ಸಂದೇಶ ರವಾನಿಸಬೇಕು. ಹೀಗಾಗಿ ಭಾನುವಾರ ಬೆಳಗ್ಗೆ 11 ಕ್ಕೆ ಟೌನ್ ಹಾಲ್ ಮುಂಭಾಗ ಶಾಂತಿಯುತ ಮಾನವ ಸರಪಳಿ ನಿರ್ಮಾಣಕ್ಕೆ ಎಲ್ಲರೂ ಬನ್ನಿ ಎಂದು ಆನ್ ಲೈನ್ ಮೂಲಕ ಆಹ್ವಾನ ಇಟ್ಟಿತ್ತು. ಅಲ್ಲದೆ ಇಲ್ಲಿ ನಾಯಕರು ಇಲ್ಲ. ನಮಗೆ ನಾವೇ ನಾಯಕರು. ಇಲ್ಲಿ ಸಂಘಟನೆಯೂ ಇಲ್ಲ. ಪ್ರಜೆಗಳು ಕೈಜೋಡಿಸುವುದೇ ಸಂಘಟನೆ ಎಂದು ಹೇಳಿದ್ದರು. ..
ಈ ಕಾರ್ಯಕ್ರಮದ ಬಗ್ಗೆ ಮೇ 22 ರಂದು ಬೆಂಗಳೂರು ನಗರದ ಪೊಲೀಸ್ ಆಯುಕ್ತರ ಕಚೇರಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿರುವ ಕಾಕ್ರೋಚ್ ಜನತಾ ಪಾರ್ಟಿಯ ಬೃಹತ್ ಮಾನವ ಸರಪಳಿ ನಡೆಸಲು, ಯಾವುದೇ ವ್ಯಕ್ತಿ, ಸಂಘಟನೆ ಅಥವಾ ರಾಜಕೀಯ ಪಕ್ಷ ಟೌನ್ ಹಾಲ್ ನಲ್ಲಿ ನಡೆಸಲು ಅನುಮತಿ ಕೇಳ್ಳಿಲ್ಲ. ಜಿಬಿಎ ನಿಂದಲೂ ಅನುಮತಿ ಪಡೆದಿಲ್ಲ. ಹೈಕೋರ್ಟ್ ನಿಯಮವೂ ಪ್ರತಿಭಟನೆ ,ಧರಣಿ, ರ್ಯಾಲಿಗಳಿದ್ದರೆ ಫ್ರೀಡಂ ಪಾರ್ಕ್ ಮಾತ್ರ ಅನುಮತಿ ಇದೆ ಎಂದಿದೆ.
ಹೀಗಾಗಿ ಜನರು, ಗೊತ್ತಿದ್ದೂ ಅಥವಾ ಗೊತ್ತಿಲ್ಲದೆ ಕಾಕ್ರೋಚ್ ಪಾರ್ಟಿಯ ಆಹ್ವಾನವನ್ನು ವಾಟ್ಸಾಪ್,ಫೇಸ್ ಬುಕ್, ಟ್ವಿಟರ್, ಇನ್ ಸ್ಟಾಗ್ರಾಂ ನಲ್ಲಿ ಶೇರ್ ಮಾಡಬಾರದು, ಹಾಗೂ ಟೌನ್ ಹಾಲ್ ಬಳಿ ಸೇರಬಾರದು ಎಂದು ನೋಟಿಸ್ ನಲ್ಲಿ ತಿಳಿಸಿದೆ. ಜನರಿಗೆ ಕಾನೂನಿನ ಅರಿವು ಮೂಡಿಸಲು ಈ ನೋಟಿಸ್ ಮಾಡಲಾಗಿದೆ ಎಂದೂ ಪೊಲೀಸ್ ಇಲಾಖೆ ತಿಳಿಸಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm