ಬ್ರೇಕಿಂಗ್ ನ್ಯೂಸ್
25-05-26 10:19 am HK News Staffer ದೇಶ - ವಿದೇಶ
ನವದೆಹಲಿ, ಮೇ 25: ದೇಶದ ಜನರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಇಂಧನ ಶಾಕ್ ನೀಡಿದ್ದು, ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 11 ದಿನಗಳಲ್ಲೇ ಇದು ನಾಲ್ಕನೇ ಬಾರಿ ಇಂಧನ ದರ ಏರಿಕೆಯಾಗಿದ್ದು, ವಾಹನ ಸವಾರರು ಹಾಗೂ ಸಾಮಾನ್ಯ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಾರಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸುಮಾರು 3 ರೂ.ವರೆಗೆ ಹೆಚ್ಚಳ ಮಾಡಲಾಗಿದೆ.
ಇದರೊಂದಿಗೆ ಸಿಎನ್ಜಿ ದರವನ್ನೂ ಪ್ರತಿ ಕೆಜಿಗೆ 1 ರೂ. ಏರಿಕೆ ಮಾಡಲಾಗಿದ್ದು, ಇತ್ತೀಚಿನ ದಿನಗಳಲ್ಲಿ ಇದು ಮೂರನೇ ಬಾರಿಗೆ ಸಿಎನ್ಜಿ ದರ ಏರಿಕೆಯಾಗಿದೆ. ಒಟ್ಟಾರೆ ಸಿಎನ್ಜಿ ದರದಲ್ಲಿ ಸುಮಾರು 4 ರೂ.ಗಳಷ್ಟು ಹೆಚ್ಚಳ ಕಂಡುಬಂದಿದೆ.
ಹೊಸ ದರ ಪರಿಷ್ಕರಣೆಯ ನಂತರ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 110.89 ರೂ.ಗೆ ಏರಿಕೆಯಾದರೆ, ಡೀಸೆಲ್ ಬೆಲೆ 98.80 ರೂ. ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ 102.12 ರೂ. ಹಾಗೂ ಡೀಸೆಲ್ 95.20 ರೂ. ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 113.51 ರೂ. ಮತ್ತು ಡೀಸೆಲ್ 99.82 ರೂ. ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ 111.21 ರೂ. ಆಗಿದ್ದರೆ, ಡೀಸೆಲ್ 97.83 ರೂ. ತಲುಪಿದೆ. ಚೆನ್ನೈನಲ್ಲಿ ಪೆಟ್ರೋಲ್ 107.77 ರೂ. ಮತ್ತು ಡೀಸೆಲ್ 99.55 ರೂ. ಆಗಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವುದು ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದರಿಂದ ತೈಲ ಆಮದು ವೆಚ್ಚ ಹೆಚ್ಚಾಗಿದೆ. ಇದೇ ಕಾರಣದಿಂದ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಭಾರೀ ನಷ್ಟ ಅನುಭವಿಸುತ್ತಿದ್ದು, ಆ ನಷ್ಟವನ್ನು ತಗ್ಗಿಸಲು ಬೆಲೆ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.
ಮೇ 15ರಂದು ಮೊದಲ ಬಾರಿಗೆ ಏಕಾಏಕಿ ಪ್ರತಿ ಲೀಟರ್ಗೆ ಸುಮಾರು 3 ರೂ.ಗಳಷ್ಟು ಏರಿಕೆ ಮಾಡಲಾಗಿತ್ತು. ಅದಾದ ಬಳಿಕ ಸತತವಾಗಿ ದರ ಏರಿಕೆ ನಡೆಯುತ್ತಿದ್ದು, ಇದರ ಪರಿಣಾಮ ಸಾರಿಗೆ ವೆಚ್ಚ, ಆಹಾರ ಪದಾರ್ಥಗಳ ಬೆಲೆ ಹಾಗೂ ದಿನನಿತ್ಯದ ಬದುಕಿನ ಮೇಲೂ ಬೀಳುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm