ಬ್ರೇಕಿಂಗ್ ನ್ಯೂಸ್
25-05-26 10:19 am HK News Staffer ದೇಶ - ವಿದೇಶ
ನವದೆಹಲಿ, ಮೇ 25: ದೇಶದ ಜನರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಇಂಧನ ಶಾಕ್ ನೀಡಿದ್ದು, ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 11 ದಿನಗಳಲ್ಲೇ ಇದು ನಾಲ್ಕನೇ ಬಾರಿ ಇಂಧನ ದರ ಏರಿಕೆಯಾಗಿದ್ದು, ವಾಹನ ಸವಾರರು ಹಾಗೂ ಸಾಮಾನ್ಯ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಾರಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸುಮಾರು 3 ರೂ.ವರೆಗೆ ಹೆಚ್ಚಳ ಮಾಡಲಾಗಿದೆ.
ಇದರೊಂದಿಗೆ ಸಿಎನ್ಜಿ ದರವನ್ನೂ ಪ್ರತಿ ಕೆಜಿಗೆ 1 ರೂ. ಏರಿಕೆ ಮಾಡಲಾಗಿದ್ದು, ಇತ್ತೀಚಿನ ದಿನಗಳಲ್ಲಿ ಇದು ಮೂರನೇ ಬಾರಿಗೆ ಸಿಎನ್ಜಿ ದರ ಏರಿಕೆಯಾಗಿದೆ. ಒಟ್ಟಾರೆ ಸಿಎನ್ಜಿ ದರದಲ್ಲಿ ಸುಮಾರು 4 ರೂ.ಗಳಷ್ಟು ಹೆಚ್ಚಳ ಕಂಡುಬಂದಿದೆ.
ಹೊಸ ದರ ಪರಿಷ್ಕರಣೆಯ ನಂತರ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 110.89 ರೂ.ಗೆ ಏರಿಕೆಯಾದರೆ, ಡೀಸೆಲ್ ಬೆಲೆ 98.80 ರೂ. ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ 102.12 ರೂ. ಹಾಗೂ ಡೀಸೆಲ್ 95.20 ರೂ. ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 113.51 ರೂ. ಮತ್ತು ಡೀಸೆಲ್ 99.82 ರೂ. ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ 111.21 ರೂ. ಆಗಿದ್ದರೆ, ಡೀಸೆಲ್ 97.83 ರೂ. ತಲುಪಿದೆ. ಚೆನ್ನೈನಲ್ಲಿ ಪೆಟ್ರೋಲ್ 107.77 ರೂ. ಮತ್ತು ಡೀಸೆಲ್ 99.55 ರೂ. ಆಗಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವುದು ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದರಿಂದ ತೈಲ ಆಮದು ವೆಚ್ಚ ಹೆಚ್ಚಾಗಿದೆ. ಇದೇ ಕಾರಣದಿಂದ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಭಾರೀ ನಷ್ಟ ಅನುಭವಿಸುತ್ತಿದ್ದು, ಆ ನಷ್ಟವನ್ನು ತಗ್ಗಿಸಲು ಬೆಲೆ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.
ಮೇ 15ರಂದು ಮೊದಲ ಬಾರಿಗೆ ಏಕಾಏಕಿ ಪ್ರತಿ ಲೀಟರ್ಗೆ ಸುಮಾರು 3 ರೂ.ಗಳಷ್ಟು ಏರಿಕೆ ಮಾಡಲಾಗಿತ್ತು. ಅದಾದ ಬಳಿಕ ಸತತವಾಗಿ ದರ ಏರಿಕೆ ನಡೆಯುತ್ತಿದ್ದು, ಇದರ ಪರಿಣಾಮ ಸಾರಿಗೆ ವೆಚ್ಚ, ಆಹಾರ ಪದಾರ್ಥಗಳ ಬೆಲೆ ಹಾಗೂ ದಿನನಿತ್ಯದ ಬದುಕಿನ ಮೇಲೂ ಬೀಳುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm