ಬ್ರೇಕಿಂಗ್ ನ್ಯೂಸ್
26-05-26 12:54 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 26: ಮುಂದಿನ ತಿಂಗಳು ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಪೈಪೋಟಿ ಶುರುವಾಗಿದೆ. ಜೂನ್, ಜುಲೈನಲ್ಲಿ ಖಾಲಿಯಾಗುವ 9 ಸ್ಥಾನಗಳಿಗೆ ಆಯ್ಕೆಗೊಳ್ಳಲು ಆಕಾಂಕ್ಷಿಗಳ ಪಟ್ಟಿ ಮೂರು ಡಜನ್ ಗಿಂತಲೂ ಹೆಚ್ಚಿದೆ. ಇದಕ್ಕಾಗಿ ಲಾಬಿ ನಡೆಸಲು ಆಕಾಂಕ್ಷಿಗಳ ತಂಡವೊಂದು ಸೋಮವಾರವೇ ದೆಹಲಿಗೆ ತೆರಳಿದೆ.
ನಾಮನಿರ್ದೇಶನ ಮತ್ತು ವಿಧಾನಸಭೆಯಿಂದ ಆಯ್ಕೆಯಾಗಿರುವ 12 ಸದಸ್ಯರು ನಿವೃತ್ತಿಯಾಗಲಿದ್ದಾರೆ. ಈ ಪೈಕಿ 9 ಸ್ಥಾನಗಳು ಕಾಂಗ್ರೆಸ್ ಪಾಲಾಗಲಿವೆ. ಪರಿಷತ್ ಸ್ಥಾನಗಳು ಖಾಲಿಯಾದ ಮೇಲೆ ಹೊಸ ಆಯ್ಕೆಗೆ ಸರ್ಕಾರ ಅಧಿಸೂಚನೆ ಹೊರಡಿಸಲಿದೆ. ಆ ನಂತರ ಪ್ರಕ್ರಿಯೆ ಶುರುವಾಗಲಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಹಲವರು ಮನವಿ ಸಲ್ಲಿಸಿದ್ದಾರೆ. ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿಗೆ ಮನವಿ ಸಲ್ಲಿಸಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಪರಿಷತ್ತಿಗೆ ನಾಮ ನಿರ್ದೇಶನವಾಗಿದ್ದ ಬಿಜೆಪಿಯ ಎಚ್. ವಿಶ್ವನಾಥ್, ಭಾರತಿ ಶೆಟ್ಟಿ, ಶಾಂತರಾಮ್ ಸಿದ್ಧಿ, ಡಾ.ತಳವಾರ ಸಾಬಣ್ಣ, ಕಾಂಗ್ರೆಸ್ನ ರಮೇಶ್ ಬಾಬು ಜುಲೈನಲ್ಲಿ ನಿವೃತ್ತಿಯಾಗಲಿದ್ದಾರೆ. ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಜೆಡಿಎಸ್ನ ಗೋವಿಂದರಾಜು, ಕಾಂಗ್ರೆಸ್ನ ನಸೀರ್ ಅಹ್ಮದ್, ಬಿಜೆಪಿಯ ಎನ್. ನಾಗರಾಜು (ಎಂಟಿಬಿ), ಕೆ.ಪ್ರತಾಪ್ ಸಿಂಹ ನಾಯಕ್, ಸುನೀಲ್ ವಲ್ಯಾಪುರೆ, ಕಾಂಗ್ರೆಸ್ನ ಬಿ.ಕೆ.ಹರಿಪ್ರಸಾದ್ ಮತ್ತು ತಿಪ್ಪಣ್ಣ ಕಮಕನೂರ ಜೂನ್ನಲ್ಲಿ ನಿವೃತ್ತಿಯಾಗಲಿದ್ದಾರೆ.
ಇದೇ ವೇಳೆ, ಈ ಸ್ಥಾನಗಳಿಗೆ ಆಯ್ಕೆಗೊಳ್ಳಲು ಕಾಂಗ್ರೆಸ್ ಕಡೆಯಿಂದ ಎ.ಎನ್.ನಟರಾಜ್ಗೌಡ, ಬಿ.ಆರ್.ನಾಯ್ಡು, ಅನಿಲ್ ತಡ್ಕಲ್, ಕಾಂತನಾಯಕ್, ನಟರಾಜ್, ರಾಜೇಶ್ವರಿ ಪಾಟೀಲ್, ಪುಷ್ಪಾ ಅಮರನಾಥ್, ತಿಪ್ಪೇಸ್ವಾಮಿ, ಸುನೀಲ್ ಹನುಮಣ್ಣವರ್, ಮೆಹರೋಜ್ ಖಾನ್, ನಿಜಾಮ್ ಫೈಜಾಕ್, ಎಂ.ವೆಂಕಟೇಶ್ ಮುಂಚೂಣಿಯಲ್ಲಿ ಲಾಬಿ ನಡೆಸುತ್ತಿದ್ದಾರೆ. ನಿವೃತ್ತಿ ಬಳಿಕ ಮರು ಆಯ್ಕೆ ಬಯಸುವವರ ಪಟ್ಟಿಯಲ್ಲಿ ರಮೇಶ್ ಬಾಬು, ಬಿ.ಕೆ ಹರಿಪ್ರಸಾದ್ ಮುಂದಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm