ಬ್ರೇಕಿಂಗ್ ನ್ಯೂಸ್
26-05-26 12:54 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 26: ಮುಂದಿನ ತಿಂಗಳು ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಪೈಪೋಟಿ ಶುರುವಾಗಿದೆ. ಜೂನ್, ಜುಲೈನಲ್ಲಿ ಖಾಲಿಯಾಗುವ 9 ಸ್ಥಾನಗಳಿಗೆ ಆಯ್ಕೆಗೊಳ್ಳಲು ಆಕಾಂಕ್ಷಿಗಳ ಪಟ್ಟಿ ಮೂರು ಡಜನ್ ಗಿಂತಲೂ ಹೆಚ್ಚಿದೆ. ಇದಕ್ಕಾಗಿ ಲಾಬಿ ನಡೆಸಲು ಆಕಾಂಕ್ಷಿಗಳ ತಂಡವೊಂದು ಸೋಮವಾರವೇ ದೆಹಲಿಗೆ ತೆರಳಿದೆ.
ನಾಮನಿರ್ದೇಶನ ಮತ್ತು ವಿಧಾನಸಭೆಯಿಂದ ಆಯ್ಕೆಯಾಗಿರುವ 12 ಸದಸ್ಯರು ನಿವೃತ್ತಿಯಾಗಲಿದ್ದಾರೆ. ಈ ಪೈಕಿ 9 ಸ್ಥಾನಗಳು ಕಾಂಗ್ರೆಸ್ ಪಾಲಾಗಲಿವೆ. ಪರಿಷತ್ ಸ್ಥಾನಗಳು ಖಾಲಿಯಾದ ಮೇಲೆ ಹೊಸ ಆಯ್ಕೆಗೆ ಸರ್ಕಾರ ಅಧಿಸೂಚನೆ ಹೊರಡಿಸಲಿದೆ. ಆ ನಂತರ ಪ್ರಕ್ರಿಯೆ ಶುರುವಾಗಲಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಹಲವರು ಮನವಿ ಸಲ್ಲಿಸಿದ್ದಾರೆ. ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿಗೆ ಮನವಿ ಸಲ್ಲಿಸಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಪರಿಷತ್ತಿಗೆ ನಾಮ ನಿರ್ದೇಶನವಾಗಿದ್ದ ಬಿಜೆಪಿಯ ಎಚ್. ವಿಶ್ವನಾಥ್, ಭಾರತಿ ಶೆಟ್ಟಿ, ಶಾಂತರಾಮ್ ಸಿದ್ಧಿ, ಡಾ.ತಳವಾರ ಸಾಬಣ್ಣ, ಕಾಂಗ್ರೆಸ್ನ ರಮೇಶ್ ಬಾಬು ಜುಲೈನಲ್ಲಿ ನಿವೃತ್ತಿಯಾಗಲಿದ್ದಾರೆ. ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಜೆಡಿಎಸ್ನ ಗೋವಿಂದರಾಜು, ಕಾಂಗ್ರೆಸ್ನ ನಸೀರ್ ಅಹ್ಮದ್, ಬಿಜೆಪಿಯ ಎನ್. ನಾಗರಾಜು (ಎಂಟಿಬಿ), ಕೆ.ಪ್ರತಾಪ್ ಸಿಂಹ ನಾಯಕ್, ಸುನೀಲ್ ವಲ್ಯಾಪುರೆ, ಕಾಂಗ್ರೆಸ್ನ ಬಿ.ಕೆ.ಹರಿಪ್ರಸಾದ್ ಮತ್ತು ತಿಪ್ಪಣ್ಣ ಕಮಕನೂರ ಜೂನ್ನಲ್ಲಿ ನಿವೃತ್ತಿಯಾಗಲಿದ್ದಾರೆ.
ಇದೇ ವೇಳೆ, ಈ ಸ್ಥಾನಗಳಿಗೆ ಆಯ್ಕೆಗೊಳ್ಳಲು ಕಾಂಗ್ರೆಸ್ ಕಡೆಯಿಂದ ಎ.ಎನ್.ನಟರಾಜ್ಗೌಡ, ಬಿ.ಆರ್.ನಾಯ್ಡು, ಅನಿಲ್ ತಡ್ಕಲ್, ಕಾಂತನಾಯಕ್, ನಟರಾಜ್, ರಾಜೇಶ್ವರಿ ಪಾಟೀಲ್, ಪುಷ್ಪಾ ಅಮರನಾಥ್, ತಿಪ್ಪೇಸ್ವಾಮಿ, ಸುನೀಲ್ ಹನುಮಣ್ಣವರ್, ಮೆಹರೋಜ್ ಖಾನ್, ನಿಜಾಮ್ ಫೈಜಾಕ್, ಎಂ.ವೆಂಕಟೇಶ್ ಮುಂಚೂಣಿಯಲ್ಲಿ ಲಾಬಿ ನಡೆಸುತ್ತಿದ್ದಾರೆ. ನಿವೃತ್ತಿ ಬಳಿಕ ಮರು ಆಯ್ಕೆ ಬಯಸುವವರ ಪಟ್ಟಿಯಲ್ಲಿ ರಮೇಶ್ ಬಾಬು, ಬಿ.ಕೆ ಹರಿಪ್ರಸಾದ್ ಮುಂದಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm