ಬ್ರೇಕಿಂಗ್ ನ್ಯೂಸ್
26-05-26 12:54 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 26: ಮುಂದಿನ ತಿಂಗಳು ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಪೈಪೋಟಿ ಶುರುವಾಗಿದೆ. ಜೂನ್, ಜುಲೈನಲ್ಲಿ ಖಾಲಿಯಾಗುವ 9 ಸ್ಥಾನಗಳಿಗೆ ಆಯ್ಕೆಗೊಳ್ಳಲು ಆಕಾಂಕ್ಷಿಗಳ ಪಟ್ಟಿ ಮೂರು ಡಜನ್ ಗಿಂತಲೂ ಹೆಚ್ಚಿದೆ. ಇದಕ್ಕಾಗಿ ಲಾಬಿ ನಡೆಸಲು ಆಕಾಂಕ್ಷಿಗಳ ತಂಡವೊಂದು ಸೋಮವಾರವೇ ದೆಹಲಿಗೆ ತೆರಳಿದೆ.
ನಾಮನಿರ್ದೇಶನ ಮತ್ತು ವಿಧಾನಸಭೆಯಿಂದ ಆಯ್ಕೆಯಾಗಿರುವ 12 ಸದಸ್ಯರು ನಿವೃತ್ತಿಯಾಗಲಿದ್ದಾರೆ. ಈ ಪೈಕಿ 9 ಸ್ಥಾನಗಳು ಕಾಂಗ್ರೆಸ್ ಪಾಲಾಗಲಿವೆ. ಪರಿಷತ್ ಸ್ಥಾನಗಳು ಖಾಲಿಯಾದ ಮೇಲೆ ಹೊಸ ಆಯ್ಕೆಗೆ ಸರ್ಕಾರ ಅಧಿಸೂಚನೆ ಹೊರಡಿಸಲಿದೆ. ಆ ನಂತರ ಪ್ರಕ್ರಿಯೆ ಶುರುವಾಗಲಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಹಲವರು ಮನವಿ ಸಲ್ಲಿಸಿದ್ದಾರೆ. ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿಗೆ ಮನವಿ ಸಲ್ಲಿಸಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಪರಿಷತ್ತಿಗೆ ನಾಮ ನಿರ್ದೇಶನವಾಗಿದ್ದ ಬಿಜೆಪಿಯ ಎಚ್. ವಿಶ್ವನಾಥ್, ಭಾರತಿ ಶೆಟ್ಟಿ, ಶಾಂತರಾಮ್ ಸಿದ್ಧಿ, ಡಾ.ತಳವಾರ ಸಾಬಣ್ಣ, ಕಾಂಗ್ರೆಸ್ನ ರಮೇಶ್ ಬಾಬು ಜುಲೈನಲ್ಲಿ ನಿವೃತ್ತಿಯಾಗಲಿದ್ದಾರೆ. ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಜೆಡಿಎಸ್ನ ಗೋವಿಂದರಾಜು, ಕಾಂಗ್ರೆಸ್ನ ನಸೀರ್ ಅಹ್ಮದ್, ಬಿಜೆಪಿಯ ಎನ್. ನಾಗರಾಜು (ಎಂಟಿಬಿ), ಕೆ.ಪ್ರತಾಪ್ ಸಿಂಹ ನಾಯಕ್, ಸುನೀಲ್ ವಲ್ಯಾಪುರೆ, ಕಾಂಗ್ರೆಸ್ನ ಬಿ.ಕೆ.ಹರಿಪ್ರಸಾದ್ ಮತ್ತು ತಿಪ್ಪಣ್ಣ ಕಮಕನೂರ ಜೂನ್ನಲ್ಲಿ ನಿವೃತ್ತಿಯಾಗಲಿದ್ದಾರೆ.
ಇದೇ ವೇಳೆ, ಈ ಸ್ಥಾನಗಳಿಗೆ ಆಯ್ಕೆಗೊಳ್ಳಲು ಕಾಂಗ್ರೆಸ್ ಕಡೆಯಿಂದ ಎ.ಎನ್.ನಟರಾಜ್ಗೌಡ, ಬಿ.ಆರ್.ನಾಯ್ಡು, ಅನಿಲ್ ತಡ್ಕಲ್, ಕಾಂತನಾಯಕ್, ನಟರಾಜ್, ರಾಜೇಶ್ವರಿ ಪಾಟೀಲ್, ಪುಷ್ಪಾ ಅಮರನಾಥ್, ತಿಪ್ಪೇಸ್ವಾಮಿ, ಸುನೀಲ್ ಹನುಮಣ್ಣವರ್, ಮೆಹರೋಜ್ ಖಾನ್, ನಿಜಾಮ್ ಫೈಜಾಕ್, ಎಂ.ವೆಂಕಟೇಶ್ ಮುಂಚೂಣಿಯಲ್ಲಿ ಲಾಬಿ ನಡೆಸುತ್ತಿದ್ದಾರೆ. ನಿವೃತ್ತಿ ಬಳಿಕ ಮರು ಆಯ್ಕೆ ಬಯಸುವವರ ಪಟ್ಟಿಯಲ್ಲಿ ರಮೇಶ್ ಬಾಬು, ಬಿ.ಕೆ ಹರಿಪ್ರಸಾದ್ ಮುಂದಿದ್ದಾರೆ.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm