ಬ್ರೇಕಿಂಗ್ ನ್ಯೂಸ್
27-05-26 08:36 pm HK News Staffer ದೇಶ - ವಿದೇಶ
ತಿರುವನಂತಪುರ, ಮೇ 27: ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಬೆಳವಣಿಗೆಯಲ್ಲಿ, ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿ 10 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ ಕಂಪನಿಗೆ ಸಂಬಂಧಿಸಿದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಈ ಶೋಧ ಕಾರ್ಯಾಚರಣೆ ನಡೆದಿದ್ದು, ಕೇರಳ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಪ್ರಕರಣದ ಇಡಿ ತನಿಖೆಯನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ದಾಳಿ ನಡೆದಿರುವುದು ವಿಶೇಷ ಗಮನ ಸೆಳೆದಿದೆ.
ಪ್ರಕರಣದಲ್ಲಿ ಮಾಜಿ ಸಿಎಂ ಪುತ್ರಿ ಟಿ. ವೀಣಾ ಅವರ ಹೆಸರಿದ್ದು, ಅವರ ಒಡೆತನದ ‘ಎಕ್ಸಲಾಜಿಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯು ಯಾವುದೇ ಸೇವೆಗಳನ್ನು ನೀಡದೇ ಸಿಎಂಆರ್ಎಲ್ ಕಂಪನಿಯಿಂದ ದೊಡ್ಡ ಮೊತ್ತದ ಹಣ ಪಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದೇ ಆರ್ಥಿಕ ಅಕ್ರಮದ ಕುರಿತಾಗಿ ಇಡಿ ತನಿಖೆ ಚುರುಕುಗೊಂಡಿದೆ.

ಇದರ ಭಾಗವಾಗಿ, ಮಾಜಿ ಸಚಿವ ಹಾಗೂ ಪ್ರಸ್ತುತ ಶಾಸಕರಾಗಿರುವ ಪಿ.ಎ. ಮುಹಮ್ಮದ್ ರಿಯಾಸ್ ಅವರ ನಿವಾಸದ ಮೇಲೂ ಇಡಿ ದಾಳಿ ನಡೆಸಿದೆ. ಅವರು ಟಿ. ವೀಣಾ ಅವರ ಪತಿಯಾಗಿದ್ದಾರೆ.
ಕೈಗಾರಿಕಾ ರಾಸಾಯನಿಕ ಉತ್ಪಾದನಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಎಂಆರ್ಎಲ್ ಕಂಪನಿ, ಲಂಚ ಮತ್ತು ಮನಿ ಲಾಂಡರಿಂಗ್ ಆರೋಪಗಳಿಂದ ಈಗಾಗಲೇ ತನಿಖೆಯ ಕಣ್ಣಿನಡಿಯಲ್ಲಿ ಇದೆ. 2017ರಿಂದ 2020ರ ಅವಧಿಯಲ್ಲಿ ಟಿ. ವೀಣಾ ಅವರ ಸಂಸ್ಥೆಗೆ ಯಾವುದೇ ಸೇವೆ ನೀಡದಿದ್ದರೂ ಸುಮಾರು 1.72 ಕೋಟಿ ರೂಪಾಯಿ ಪಾವತಿಸಲಾಗಿದೆ ಎಂಬ ಆರೋಪ 2023ರಲ್ಲೇ ಬಹಿರಂಗವಾಗಿತ್ತು.
ನಂತರ ಕೇಂದ್ರ ಸರ್ಕಾರದ ಗಂಭೀರ ವಂಚನೆ ತನಿಖಾ ಕಚೇರಿ ನಡೆಸಿದ ಸುದೀರ್ಘ ತನಿಖೆಯಲ್ಲಿ, ಒಟ್ಟು 2.70 ಕೋಟಿ ರೂಪಾಯಿಗಳ ಪಾವತಿ ನಡೆದಿರುವುದು ಪತ್ತೆಯಾಗಿದೆ. ಎಸ್ಎಫ್ಐಒ ತನ್ನ 160 ಪುಟಗಳ ವರದಿಯಲ್ಲಿ ಟಿ. ವೀಣಾ, ಸಿಎಂಆರ್ಎಲ್ ವ್ಯವಸ್ಥಾಪಕ ನಿರ್ದೇಶಕ ಶಶಿಧರನ್ ಕರ್ತಾ ಸೇರಿದಂತೆ 25 ಮಂದಿಯನ್ನು ಪ್ರಮುಖ ಆರೋಪಿಗಳೆಂದು ಉಲ್ಲೇಖಿಸಿದೆ.
ಕಳೆದ ಏಪ್ರಿಲ್ನಲ್ಲಿ ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಟಿ. ವೀಣಾ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮೋದನೆ ನೀಡಿತ್ತು. ಪ್ರಸ್ತುತ ಅವರ ವಿರುದ್ಧ ಕಂಪನಿ ಕಾಯ್ದೆ 2013ರ ಸೆಕ್ಷನ್ 447 ಅಡಿಯಲ್ಲಿ ಕಾರ್ಪೊರೇಟ್ ವಂಚನೆ ಆರೋಪ ದಾಖಲಾಗಿದ್ದು, ಅಪರಾಧ ಸಾಬೀತಾದರೆ ಆರು ತಿಂಗಳಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಭಾರೀ ದಂಡ ವಿಧಿಸುವ ಅವಕಾಶವಿದೆ.
ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹೆಸರನ್ನು ನೇರ ಆರೋಪಿಯಾಗಿ ಉಲ್ಲೇಖಿಸದಿದ್ದರೂ, ಅವರ ಕುಟುಂಬದ ಸದಸ್ಯರು ತನಿಖೆಯ ವ್ಯಾಪ್ತಿಗೆ ಬಂದಿರುವುದು ಕೇರಳ ರಾಜಕಾರಣದಲ್ಲಿ ಭಾರೀ ಚರ್ಚೆ ಹಾಗೂ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm