ಬ್ರೇಕಿಂಗ್ ನ್ಯೂಸ್
29-05-26 06:17 pm HK News Staffer ದೇಶ - ವಿದೇಶ
ಕೋಯಿಕ್ಕೋಡ್, ಮೇ 29: ಮರಣದಂಡನೆ ಶಿಕ್ಷೆಗೆ ಗುರಿಯಾಗಿ ಕಳೆದ 20 ವರ್ಷಗಳಿಂದ ಸೌದಿ ಅರೇಬಿಯಾದ ಜೈಲಿನಲ್ಲಿ ಬಂಧಿಯಾಗಿದ್ದ ಕೇರಳದ ಅಬ್ದುಲ್ ರಹೀಂ ಕೊನೆಗೂ ತಾಯ್ನಾಡಿಗೆ ಮರಳಿದ್ದಾರೆ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಕುಟುಂಬದವರನ್ನು ಸೇರಿಕೊಂಡಿರುವ ರಹೀಂ ಅವರ ಮರಳುವಿಕೆ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಿದೆ.
2006ರಲ್ಲಿ ಉದ್ಯೋಗ ಅರಸಿ ಸೌದಿ ಅರೇಬಿಯಾದ ರಾಜಧಾನಿ ರಿಯಾದ್ಗೆ ತೆರಳಿದ್ದ ರಹೀಂ, ಅಲ್ಲಿ ತಮ್ಮ ಮಾಲೀಕನ 17 ವರ್ಷದ ಪುತ್ರನ ಆರೈಕೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಆ ಬಾಲಕ ಕೃತಕ ಉಸಿರಾಟ ವ್ಯವಸ್ಥೆಯ ನೆರವಿನಿಂದ ಬದುಕುತ್ತಿದ್ದ. ಒಂದು ದಿನ ವಾಹನದಲ್ಲಿ ಕರೆದೊಯ್ಯುವಾಗ ಉಸಿರಾಟದ ಉಪಕರಣ ಕಳಚಿಬಿದ್ದ ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ರಹೀಂ ಅವರನ್ನು ಬಂಧಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ 2011ರಲ್ಲಿ ರಹೀಂ ಅವರಿಗೆ ಮರಣದಂಡನೆ ವಿಧಿಸಿತ್ತು. ಬಳಿಕ ಮೃತ ಬಾಲಕನ ಕುಟುಂಬವು 2024ರಲ್ಲಿ ₹34 ಕೋಟಿ ಬ್ಲಡ್ಮನಿ ನೀಡಿದರೆ ಕ್ಷಮಿಸಲು ಒಪ್ಪಿಗೆ ಸೂಚಿಸಿತು. ಆದರೆ ಅಷ್ಟೊಂದು ದೊಡ್ಡ ಮೊತ್ತವನ್ನು ಪಾವತಿಸುವ ಸಾಮರ್ಥ್ಯ ರಹೀಂ ಅವರ ಕುಟುಂಬಕ್ಕಿರಲಿಲ್ಲ.



ಈ ಹಿನ್ನೆಲೆಯಲ್ಲಿ ಕುಟುಂಬ ಸಾರ್ವಜನಿಕರ ನೆರವಿಗಾಗಿ ಮನವಿ ಮಾಡಿತ್ತು. ಜನರು, ಸಾಮಾಜಿಕ ಸಂಘಟನೆಗಳು ಹಾಗೂ ದಾನಿಗಳ ಸಹಕಾರದಿಂದ ಸುಮಾರು ₹47 ಕೋಟಿ ಸಂಗ್ರಹವಾಗಿದ್ದು, ಅದರಲ್ಲಿ ₹34 ಕೋಟಿಯನ್ನು ಮೃತ ಬಾಲಕನ ಕುಟುಂಬಕ್ಕೆ ಬ್ಲಡ್ಮನಿಯಾಗಿ ಪಾವತಿಸಲಾಯಿತು. ಉಳಿದ ಹಣವನ್ನು ಕಾನೂನು ಮತ್ತು ಇತರೆ ವೆಚ್ಚಗಳಿಗೆ ಬಳಸಲಾಗಿದೆ ಎಂದು ವರದಿಯಾಗಿದೆ.
20 ವರ್ಷಗಳ ಸುದೀರ್ಘ ಸೆರೆವಾಸದ ಬಳಿಕ ರಹೀಂ ಮೇ 20ರಂದು ಜೈಲಿನಿಂದ ಬಿಡುಗಡೆಯಾಗಿದ್ದು, ಗುರುವಾರ ಬೆಳಗ್ಗೆ ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಬೆಂಬಲಿಗರು ಭಾವಪೂರ್ಣ ಸ್ವಾಗತ ಕೋರಿದರು.
ತಾವು ಜೀವಂತವಾಗಿ ತಾಯ್ನಾಡಿಗೆ ಮರಳಲು ನೆರವಾದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದ ರಹೀಂ, "ಈ ಬೆಂಬಲ ಮತ್ತು ಪ್ರಾರ್ಥನೆಗಳನ್ನು ಜೀವನಪೂರ್ತಿ ಮರೆಯುವುದಿಲ್ಲ" ಎಂದು ಹೇಳಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm