ಬ್ರೇಕಿಂಗ್ ನ್ಯೂಸ್
29-05-26 06:17 pm HK News Staffer ದೇಶ - ವಿದೇಶ
ಕೋಯಿಕ್ಕೋಡ್, ಮೇ 29: ಮರಣದಂಡನೆ ಶಿಕ್ಷೆಗೆ ಗುರಿಯಾಗಿ ಕಳೆದ 20 ವರ್ಷಗಳಿಂದ ಸೌದಿ ಅರೇಬಿಯಾದ ಜೈಲಿನಲ್ಲಿ ಬಂಧಿಯಾಗಿದ್ದ ಕೇರಳದ ಅಬ್ದುಲ್ ರಹೀಂ ಕೊನೆಗೂ ತಾಯ್ನಾಡಿಗೆ ಮರಳಿದ್ದಾರೆ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಕುಟುಂಬದವರನ್ನು ಸೇರಿಕೊಂಡಿರುವ ರಹೀಂ ಅವರ ಮರಳುವಿಕೆ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಿದೆ.
2006ರಲ್ಲಿ ಉದ್ಯೋಗ ಅರಸಿ ಸೌದಿ ಅರೇಬಿಯಾದ ರಾಜಧಾನಿ ರಿಯಾದ್ಗೆ ತೆರಳಿದ್ದ ರಹೀಂ, ಅಲ್ಲಿ ತಮ್ಮ ಮಾಲೀಕನ 17 ವರ್ಷದ ಪುತ್ರನ ಆರೈಕೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಆ ಬಾಲಕ ಕೃತಕ ಉಸಿರಾಟ ವ್ಯವಸ್ಥೆಯ ನೆರವಿನಿಂದ ಬದುಕುತ್ತಿದ್ದ. ಒಂದು ದಿನ ವಾಹನದಲ್ಲಿ ಕರೆದೊಯ್ಯುವಾಗ ಉಸಿರಾಟದ ಉಪಕರಣ ಕಳಚಿಬಿದ್ದ ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ರಹೀಂ ಅವರನ್ನು ಬಂಧಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ 2011ರಲ್ಲಿ ರಹೀಂ ಅವರಿಗೆ ಮರಣದಂಡನೆ ವಿಧಿಸಿತ್ತು. ಬಳಿಕ ಮೃತ ಬಾಲಕನ ಕುಟುಂಬವು 2024ರಲ್ಲಿ ₹34 ಕೋಟಿ ಬ್ಲಡ್ಮನಿ ನೀಡಿದರೆ ಕ್ಷಮಿಸಲು ಒಪ್ಪಿಗೆ ಸೂಚಿಸಿತು. ಆದರೆ ಅಷ್ಟೊಂದು ದೊಡ್ಡ ಮೊತ್ತವನ್ನು ಪಾವತಿಸುವ ಸಾಮರ್ಥ್ಯ ರಹೀಂ ಅವರ ಕುಟುಂಬಕ್ಕಿರಲಿಲ್ಲ.



ಈ ಹಿನ್ನೆಲೆಯಲ್ಲಿ ಕುಟುಂಬ ಸಾರ್ವಜನಿಕರ ನೆರವಿಗಾಗಿ ಮನವಿ ಮಾಡಿತ್ತು. ಜನರು, ಸಾಮಾಜಿಕ ಸಂಘಟನೆಗಳು ಹಾಗೂ ದಾನಿಗಳ ಸಹಕಾರದಿಂದ ಸುಮಾರು ₹47 ಕೋಟಿ ಸಂಗ್ರಹವಾಗಿದ್ದು, ಅದರಲ್ಲಿ ₹34 ಕೋಟಿಯನ್ನು ಮೃತ ಬಾಲಕನ ಕುಟುಂಬಕ್ಕೆ ಬ್ಲಡ್ಮನಿಯಾಗಿ ಪಾವತಿಸಲಾಯಿತು. ಉಳಿದ ಹಣವನ್ನು ಕಾನೂನು ಮತ್ತು ಇತರೆ ವೆಚ್ಚಗಳಿಗೆ ಬಳಸಲಾಗಿದೆ ಎಂದು ವರದಿಯಾಗಿದೆ.
20 ವರ್ಷಗಳ ಸುದೀರ್ಘ ಸೆರೆವಾಸದ ಬಳಿಕ ರಹೀಂ ಮೇ 20ರಂದು ಜೈಲಿನಿಂದ ಬಿಡುಗಡೆಯಾಗಿದ್ದು, ಗುರುವಾರ ಬೆಳಗ್ಗೆ ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಬೆಂಬಲಿಗರು ಭಾವಪೂರ್ಣ ಸ್ವಾಗತ ಕೋರಿದರು.
ತಾವು ಜೀವಂತವಾಗಿ ತಾಯ್ನಾಡಿಗೆ ಮರಳಲು ನೆರವಾದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದ ರಹೀಂ, "ಈ ಬೆಂಬಲ ಮತ್ತು ಪ್ರಾರ್ಥನೆಗಳನ್ನು ಜೀವನಪೂರ್ತಿ ಮರೆಯುವುದಿಲ್ಲ" ಎಂದು ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm