ಬ್ರೇಕಿಂಗ್ ನ್ಯೂಸ್
31-05-26 09:25 pm HK News Staffer ದೇಶ - ವಿದೇಶ
ನವದೆಹಲಿ, ಮೇ 31: ಗಲ್ಫ್ ಯುದ್ಧ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಚಿನ್ನ ಖರೀದಿಯನ್ನು ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಕರೆ ನೀಡಿರುವುದು ಮತ್ತು ಕೇಂದ್ರ ಸರಕಾರ ಚಿನ್ನದ ಮೇಲಿನ ಆಮದು ಸುಂಕವನ್ನು ಶೇ.6ರಿಂದ ಶೇ.15ಕ್ಕೆ ಹೆಚ್ಚಿಸಿದ ಬೆನ್ನಲ್ಲೇ ಚಿನ್ನದ ಬೇಡಿಕೆ ದೇಶದಲ್ಲಿ ಶೇ.70ರಷ್ಟು ಕುಸಿದಿದೆ.
ಆಮದು ಸುಂಕ ಏರಿಕೆಯಾದ ನಂತರದ 14 ದಿನಗಳಲ್ಲಿ ಬೇಡಿಕೆ ಪ್ರಮಾಣ 7.5 ಟನ್ ಗಳಷ್ಟು ಇಳಿಕೆಯಾಗಿದೆ. ಹಿಂದಿನ ವರ್ಷ ಮೇ ತಿಂಗಳ ಇದೇ ಅವಧಿಯಲ್ಲಿ ಅಂದರೆ ಮೇ 13ರಿಂದ 27ರ ಅವಧಿಯಲ್ಲಿ ಚಿನ್ನದ ಬೇಡಿಕೆ ಪ್ರಮಾಣ 25 ಟನ್ ಇತ್ತು. ಈ ಸಲ ಎರಡು ವಾರದಲ್ಲಿ 7.5 ಟನ್ ನಷ್ಟು ಚಿನ್ನದ ಬೇಡಿಕೆ ಕುಸಿದಿದೆ. ದೇಶಾದ್ಯಂತ ಚಿನ್ನಕ್ಕೆ ಬೇಡಿಕೆ ಕಡಿಮೆಯಾಗಿದ್ದು ಚಿನ್ನ ಖರೀದಿಗೆ ಗ್ರಾಹಕರು ಮುಂದಾಗುತ್ತಿಲ್ಲ ಎಂದು ಅಖಿಲ ಭಾರತ ಆಭರಣ ವ್ಯಾಪಾರಿಗಳ ಸಂಘದ ರಾಷ್ಟ್ರೀಯ ಕಾರ್ಯದರ್ಶಿ ಸುರೇಂದ್ರ ಮೆಹ್ತಾ ಹೇಳಿದ್ದಾರೆ.
ಅಮದು ಸುಂಕ ಹೆಚ್ಚಳದ ನಂತರ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸೇರಿದಂತೆ ಚಿನ್ನದ ಮೇಲೆ ತೆರಿಗೆ ಹೊರೆ ಶೇ.9.18 ರಿಂದ ಶೇ.18.45ಕ್ಕೆ ಏರಿದೆ. ರೂಪಾಯಿ ಅಪಮೌಲ್ಯ, ಕಚ್ಚಾ ತೈಲದ ಹೆಚ್ಚಿದ ಬೆಲೆಗಳು, ಭೌಗೋಳಿಕ ರಾಜಕೀಯ ಉದ್ವಿಗ್ನತೆ ಹಿನ್ನೆಲೆಯಲ್ಲಿ ಸರಕಾರ ಸುಂಕಗಳನ್ನು ಹೆಚ್ಚಿಸಿದೆ.
ಪ್ರಧಾನಿ ಮೋದಿಯವರ ಕರೆ ಚಿನ್ನದ ಬೇಡಿಕೆ ಕುಸಿಯಲು ಪ್ರಮುಖ ಕಾರಣ. ''ಒಂದು ವರ್ಷದ ತನಕ ಚಿನ್ನದ ಖರೀದಿಯಿಂದ ದೂರವಿರಿ," ಎಂದು ಮೋದಿ ಕರೆ ನೀಡಿರುವುದು ಚಿನ್ನ ಖರೀದಿ ಮೇಲೆ ದೊಡ್ಡ ಪರಿಣಾಮ ಬೀರಿದೆ. ಇದೇ ವೇಳೆ ಚಿನ್ನದ ಮೇಲಿನ ಹೂಡಿಕೆಯೂ ಕಡಿಮೆಯಾಗಿದೆ. ಜನರು ಕಡಿಮೆ ಕ್ಯಾರೆಟ್ನ ಆಭರಣಗಳ ಕಡೆಗೆ ಮುಖ ಮಾಡುತ್ತಿದ್ದಾರೆ. ಆದರೆ ಹಳೆಯ ಚಿನ್ನದ ಮಾರಾಟವು ಹೆಚ್ಚಾಗಿದೆ. ಗ್ರಾಹಕರು ತಮ್ಮ ಬಜೆಟ್ ಮೀರಿ ಖರ್ಚು ಮಾಡುತ್ತಿಲ್ಲ ಎಂದು ಜಾಗತಿಕ ಚಿನ್ನ ಸಂಶೋಧನಾ ಮಂಡಳಿ ಮುಖ್ಯಸ್ಥೆ ಕವಿತಾ ಚಾಕೋ ತಿಳಿಸಿದ್ದಾರೆ. ಬೇಡಿಕೆ ಕುಸಿದರೂ ಚಿನ್ನದ ದರದಲ್ಲಿ ಹೆಚ್ಚಿನ ವ್ಯತ್ಯಾಸ ಆಗಿಲ್ಲ. ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 16100 ರು. ಆಸುಪಾಸಿನಲ್ಲಿ ಇದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm