ಬ್ರೇಕಿಂಗ್ ನ್ಯೂಸ್
06-06-26 10:42 pm HK News Desk ದೇಶ - ವಿದೇಶ
ಕಾಸರಗೋಡು, ಜೂನ್ 6: ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಕಲ್ಲಿನ ತಡೆಗೋಡೆ ಕುಸಿದು ಬಿದ್ದು ಇಬ್ಬರು ಸಣ್ಣ ಬಾಲಕರು ಮೃತಪಟ್ಟ ಘಟನೆ ದೇಲಂಪಾಡಿ ಪಂಚಾಯತ್ ವ್ಯಾಪ್ತಿಯ ಅಡೂರಿನಲ್ಲಿ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ಅಬುಬಕರ್ ಮತ್ತು ಸೌಧಾ ದಂಪತಿಯ ಮಕ್ಕಳಾದ ಮುನ್ಸೀರ್ (9) ಮತ್ತು ಮುಸಮ್ಮಿಲ್ (14) ಎಂದು ಗುರುತಿಸಲಾಗಿದೆ. ಇವರು ಅಡೂರಿನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಾಗಿದ್ದರು. ಮುಸಮ್ಮಿಲ್ ಎಂಟನೇ ತರಗತಿಯಲ್ಲಿದ್ದರೆ, ಮುನ್ಸೀರ್ ಐದನೇ ತರಗತಿಯಲ್ಲಿ ಓದುತ್ತಿದ್ದ. ಶಾಲಾ ರಜೆಯ ಸಮಯದಲ್ಲಿ ಬಸ್ ಕಾಯುವ ನಿಲ್ದಾಣದ ಬಳಿ ಇವರು ಸಣ್ಣ ಪಾಪ್-ಅಪ್ ತಿಂಡಿ ಅಂಗಡಿಯನ್ನು ಇಟ್ಟುಕೊಂಡಿದ್ದರು. ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಇವರ ಸ್ನೇಹಿತ ಹಾಗೂ ನೆರೆಮನೆಯ ನಿವಾಸಿಯಾದ ವಹಾಶ್ (14) ಆಲೂಗೆಡ್ಡೆ ಚಿಪ್ಸ್ ಖರೀದಿಸಲು ಅಂಗಡಿಗೆ ಬಂದಿದ್ದ.

ಈ ವೇಳೆ ಅಂಗಡಿಯ ಹಿಂಭಾಗದಲ್ಲಿದ್ದ, ಇತ್ತೀಚೆಗಷ್ಟೇ ನಿರ್ಮಿಸಲಾಗಿದ್ದ ಭಾರಿ ಗಾತ್ರದ ಕಲ್ಲಿನ ತಡೆಗೋಡೆ ಇದ್ದಕ್ಕಿದ್ದಂತೆ ಇವರ ಮೇಲೆಯೇ ಕುಸಿದು ಬಿದ್ದಿದೆ. ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದ ಮಕ್ಕಳನ್ನು ಸ್ಥಳೀಯರು ತಕ್ಷಣ ಹೊರತೆಗೆದು ಚೆರ್ಕಳದ ಆಸ್ಪತ್ರೆಗೆ ಸಾಗಿಸಿದರೂ, ಸಹೋದರರಿಬ್ಬರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ತೀವ್ರ ಗಾಯಗೊಂಡ ವಹಾಶ್ ಸದ್ಯ ಕಾಸರಗೋಡಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದಾನೆ.
ಕಾಸರಗೋಡು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಹವಾಮಾನ ಇಲಾಖೆ “ರೆಡ್ ಅಲರ್ಟ್” ಘೋಷಿಸಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 204 ಮಿಲಿಮೀಟರ್ಗಿಂತಲೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm