ಬ್ರೇಕಿಂಗ್ ನ್ಯೂಸ್
14-06-26 01:08 pm HK News Staffer ದೇಶ - ವಿದೇಶ
ತಿರುವನಂತಪುರಂ, ಜೂನ್ 14: ಕೇರಳದಲ್ಲಿ ಕೆಎಸ್ಆರ್ಟಿಸಿ 'ಸಾಮಾನ್ಯ' ಬಸ್ಗಳಲ್ಲಿ ಮಹಿಳೆಯರಿಗಾಗಿ 'ಪ್ರಿಯದರ್ಶಿನಿ' ಉಚಿತ ಪ್ರಯಾಣ ಯೋಜನೆ ಜಾರಿಗೆ ಬಂದಿದ್ದು ಜೂನ್ 15ರಂದು ಮುಖ್ಯಮಂತ್ರಿ ವಿಡಿ ಸತೀಶನ್ ಚಾಲನೆ ನೀಡಲಿದ್ದಾರೆ.
ವಿಶೇಷ ಅಂದರೆ, ಕೇರಳದಲ್ಲಿ ಈ ಸೌಲಭ್ಯವು ಎಲ್ಲಾ ಮಹಿಳೆಯರಿಗೂ ಅನ್ವಯವಾಗಲಿದೆ. ಕೇರಳದವರು ಮತ್ತು ಹೊರಗಿನಿಂದ ಭೇಟಿ ನೀಡುವವರಿಗೂ ಈ ಸೌಲಭ್ಯ ದೊರಕಲಿದೆ. ಲಿಂಗತ್ವ ಅಲ್ಪಸಂಖ್ಯಾತ ಪ್ರಯಾಣಿಕರಿಗೂ ಈ ಯೋಜನೆ ಲಾಭ ಸಿಗಲಿದೆ. ಇದಕ್ಕಾಗಿ ಪ್ರತ್ಯೇಕ ಗುರುತಿನ ಚೀಟಿ ತೋರಿಸುವ ಅಗತ್ಯವಿಲ್ಲ. ಬದಲಾಗಿ, ಅವರಿಗೆ "ಶೂನ್ಯ ದರ" (zero-fare) ಟಿಕೆಟ್ಗಳನ್ನು ನೀಡಲಾಗುತ್ತದೆ. ಇದರಿಂದ ಸರ್ಕಾರಕ್ಕೆ ಈ ಯೋಜನೆ ಲಾಭ ಪಡೆದವರ ಸಂಖ್ಯೆ ಸಿಗಲಿದ್ದು ಆರ್ಥಿಕ ಪರಿಣಾಮವನ್ನು ಅಂದಾಜು ಮಾಡಲು ಸಹಾಯವಾಗಲಿದೆ.
ರಾಜ್ಯದಾದ್ಯಂತ ಕಾರ್ಯಾಚರಿಸುತ್ತಿರುವ 3,125 ಕೆಎಸ್ಆರ್ಟಿಸಿ 'ಸಾಮಾನ್ಯ' ಬಸ್ಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಅತಿ ಹೆಚ್ಚು ಅಂದರೆ 687 ಬಸ್ಗಳು ತಿರುವನಂತಪುರಂ ಜಿಲ್ಲೆಯಲ್ಲಿವೆ. ಈ ಬಗ್ಗೆ ಸಾರಿಗೆ ಸಚಿವ ಸಿ.ಪಿ. ಜಾನ್ ಮಾಹಿತಿ ನೀಡಿದ್ದು, ಈ ಯೋಜನೆಯಿಂದ ಅನೇಕ ಮಹಿಳೆಯರಿಗೆ ದೈನಂದಿನ ಪ್ರಯಾಣದ ವೆಚ್ಚದಲ್ಲಿ ಉಳಿತಾಯ ಆಗಲಿದ್ದು ಅವರ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡಲಿದೆ ಎಂದರು. ಈ ಯೋಜನೆಗಾಗಿ ರಾಜ್ಯ ಸರ್ಕಾರಕ್ಕೆ 800 ಕೋಟಿಯಷ್ಟು ನಷ್ಟ ಎದುರಾಗಲಿದೆ.
ಯಾವೆಲ್ಲಾ ಬಸ್ ಗಳಲ್ಲಿ ಸೌಲಭ್ಯ ?
ಸಾಮಾನ್ಯ ಮತ್ತು ಪ್ರಮುಖ ನಗರ ಸಾರಿಗೆ ಬಸ್ ಗಳಲ್ಲಿ ಮಾತ್ರ ಈ ಫ್ರೀ ಯೋಜನೆ ಇರಲಿದೆ. ಲಿಮಿಟೆಡ್ ಸ್ಟಾಪ್ ಇರುವ ಸಾಮಾನ್ಯ ಸಾರಿಗೆ ಬಸ್ ಗಳಲ್ಲಿಯೂ ಉಚಿತ ಸಂಚಾರ ಇರಲಿದ್ದು ಈ ಸೌಲಭ್ಯ ಇರುವ ಬಸ್ ಗಳಲ್ಲಿ ಪ್ರತ್ಯೇಕ ಬೋರ್ಡ್ ಅಳವಡಿಸಲು ಸಾರಿಗೆ ಸಚಿವರು ಸೂಚಿಸಿದ್ದಾರೆ. ಕೆಎಸ್ಸಾರ್ಟಿಸಿ ಬಿಡುಗಡೆಗೊಳಿಸಿದ ಪಟ್ಟಿ ಪ್ರಕಾರ, ಏಳು ವಿಭಾಗಗಳಲ್ಲಿ ಉಚಿತ ಸಾರಿಗೆ ಸೌಲಭ್ಯ ಇರಲಿದೆ. ಸಾಮಾನ್ಯ ಬಸ್, ನಗರ ಸಾರಿಗೆ, ಟೌನ್ ಟು ಟೌನ್ ಸಾರಿಗೆ, ಲಿಮಿಟೆಡ್ ಸ್ಟಾಪ್ ಸಾರಿಗೆ ಬಸ್ ಗಳಲ್ಲಿ ಮಹಿಳೆಯರು ಉಚಿತ ಸಂಚಾರ ಮಾಡಬಹುದು.
ಇದಲ್ಲದೆ, ಗ್ರಾಮೀಣ ಸಂಪರ್ಕವನ್ನು ಸುಧಾರಿಸಲು ಹಿಂದಿನ ಎಲ್ಡಿಎಫ್ ಸರ್ಕಾರವು ಆರಂಭಿಸಿದ್ದ ಗ್ರಾಮೀಣ ಬಸ್ ಸೌಲಭ್ಯ 'ಗ್ರಾಮ ವಂಡಿ' ಯೋಜನೆಯನ್ನು ಸ್ಥಳೀಯ ಸಂಸ್ಥೆಗಳ ಸಹಾಯದೊಂದಿಗೆ 58 ರಿಂದ 500 ಸೇವೆಗಳಿಗೆ ವಿಸ್ತರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಯೋಜಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm