ಬ್ರೇಕಿಂಗ್ ನ್ಯೂಸ್
14-06-26 04:49 pm HK News Staffer ದೇಶ - ವಿದೇಶ
ಗುವಾಹಟಿ, ಜೂನ್ 14: ಅಕ್ರಮ ವಲಸಿಗರು ಆಧಾರ್ ಕಾರ್ಡ್ ಪಡೆಯುವುದನ್ನು ತಡೆಯುವ ಉದ್ದೇಶದಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ್ ನೀಡುವುದನ್ನು ಸ್ಥಗಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ್ ನೀಡಲು ಅವಕಾಶ ಇರಲಿದೆ ಎಂದರು. ಅಂತಹ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳು ಅನುಮತಿಗಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಅರ್ಜಿದಾರರು ಆಧಾರ್ ಪಡೆಯಲು ಅರ್ಹರೇ ಎಂಬುದನ್ನು ಪರಿಶೀಲಿಸಿ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಆಧಾರ್ ನೋಂದಣಿ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ. ಕೆಲವು ಜಿಲ್ಲೆಗಳಲ್ಲಿ ಆಧಾರ್ ನೋಂದಣಿ ವ್ಯಾಪ್ತಿ ಶೇ.100ಕ್ಕಿಂತಲೂ ಹೆಚ್ಚಾಗಿದೆ ಎಂದು ಶರ್ಮಾ ತಿಳಿಸಿದರು. ನಿಗದಿತ ಜನಸಂಖ್ಯೆಗಿಂತ (ಶೇ.100ಕ್ಕಿಂತ) ಹೆಚ್ಚು ಆಧಾರ್ ಕಾರ್ಡ್ಗಳು ಹೇಗೆ ವಿತರಿಸಲ್ಪಟ್ಟಿವೆ ಮತ್ತು ಹೆಚ್ಚುವರಿ ಕಾರ್ಡ್ಗಳನ್ನು ಪಡೆಯುತ್ತಿರುವವರು ಯಾರು ಎಂಬುದನ್ನು ಪರಿಶೀಲಿಸಬೇಕಿದೆ. ಯಾವುದೇ ಅಕ್ರಮ ಬಾಂಗ್ಲಾದೇಶಿ ವಲಸಿಗರು ಆಧಾರ್ ಕಾರ್ಡ್ ಪಡೆಯದಂತೆ ನೋಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಅವರು ಹೇಳಿದರು.
ಆದರೂ, ಚಹಾ ತೋಟದ ಕಾರ್ಮಿಕ ಸಮುದಾಯ ಹಾಗೂ ಪರಿಶಿಷ್ಟ ಪಂಗಡಗಳ ಜನರಿಗೆ ಆಧಾರ್ ಕಾರ್ಡ್ ವಿತರಣೆಯನ್ನು ಮುಂದುವರಿಸಲಾಗುವುದು. ಈ ಸಮುದಾಯಗಳ ಅನೇಕ ಮಂದಿಗೆ ಇನ್ನೂ ಆಧಾರ್ ಕಾರ್ಡ್ ದೊರೆತಿಲ್ಲ ಎಂದು ಅವರು ಹೇಳಿದರು. ಇದರ ವಿನಾಯಿತಿ ಎಪ್ರಿಲ್ 1, 2027ರ ವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಆ ದಿನಾಂಕದ ನಂತರ ಈ ಸಮುದಾಯಗಳಿಗೆ ಸೇರಿದ 18 ವರ್ಷ ಮೇಲ್ಪಟ್ಟವರಿಗೂ ಆಧಾರ್ ಕಾರ್ಡ್ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಆಧಾರ್ ಕಾರ್ಡ್ ವಿತರಣೆಯಲ್ಲಿ ರಾಜ್ಯ ಸರ್ಕಾರ ‘ಅತ್ಯಂತ ಕಟ್ಟುನಿಟ್ಟಿನ’ ನಿಲುವು ಅನುಸರಿಸಲಿದೆ. ಅಸ್ಸಾಂನಲ್ಲಿ ಆಧಾರ್ ಕಾರ್ಡ್ ಪಡೆಯುವುದು ಸುಲಭವಾಗುವುದಿಲ್ಲ ಎಂದು ಶರ್ಮಾ ಈ ಹಿಂದೆಯೇ ಹೇಳಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm