ಬ್ರೇಕಿಂಗ್ ನ್ಯೂಸ್
14-06-26 04:49 pm HK News Staffer ದೇಶ - ವಿದೇಶ
ಗುವಾಹಟಿ, ಜೂನ್ 14: ಅಕ್ರಮ ವಲಸಿಗರು ಆಧಾರ್ ಕಾರ್ಡ್ ಪಡೆಯುವುದನ್ನು ತಡೆಯುವ ಉದ್ದೇಶದಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ್ ನೀಡುವುದನ್ನು ಸ್ಥಗಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ್ ನೀಡಲು ಅವಕಾಶ ಇರಲಿದೆ ಎಂದರು. ಅಂತಹ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳು ಅನುಮತಿಗಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಅರ್ಜಿದಾರರು ಆಧಾರ್ ಪಡೆಯಲು ಅರ್ಹರೇ ಎಂಬುದನ್ನು ಪರಿಶೀಲಿಸಿ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಆಧಾರ್ ನೋಂದಣಿ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ. ಕೆಲವು ಜಿಲ್ಲೆಗಳಲ್ಲಿ ಆಧಾರ್ ನೋಂದಣಿ ವ್ಯಾಪ್ತಿ ಶೇ.100ಕ್ಕಿಂತಲೂ ಹೆಚ್ಚಾಗಿದೆ ಎಂದು ಶರ್ಮಾ ತಿಳಿಸಿದರು. ನಿಗದಿತ ಜನಸಂಖ್ಯೆಗಿಂತ (ಶೇ.100ಕ್ಕಿಂತ) ಹೆಚ್ಚು ಆಧಾರ್ ಕಾರ್ಡ್ಗಳು ಹೇಗೆ ವಿತರಿಸಲ್ಪಟ್ಟಿವೆ ಮತ್ತು ಹೆಚ್ಚುವರಿ ಕಾರ್ಡ್ಗಳನ್ನು ಪಡೆಯುತ್ತಿರುವವರು ಯಾರು ಎಂಬುದನ್ನು ಪರಿಶೀಲಿಸಬೇಕಿದೆ. ಯಾವುದೇ ಅಕ್ರಮ ಬಾಂಗ್ಲಾದೇಶಿ ವಲಸಿಗರು ಆಧಾರ್ ಕಾರ್ಡ್ ಪಡೆಯದಂತೆ ನೋಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಅವರು ಹೇಳಿದರು.
ಆದರೂ, ಚಹಾ ತೋಟದ ಕಾರ್ಮಿಕ ಸಮುದಾಯ ಹಾಗೂ ಪರಿಶಿಷ್ಟ ಪಂಗಡಗಳ ಜನರಿಗೆ ಆಧಾರ್ ಕಾರ್ಡ್ ವಿತರಣೆಯನ್ನು ಮುಂದುವರಿಸಲಾಗುವುದು. ಈ ಸಮುದಾಯಗಳ ಅನೇಕ ಮಂದಿಗೆ ಇನ್ನೂ ಆಧಾರ್ ಕಾರ್ಡ್ ದೊರೆತಿಲ್ಲ ಎಂದು ಅವರು ಹೇಳಿದರು. ಇದರ ವಿನಾಯಿತಿ ಎಪ್ರಿಲ್ 1, 2027ರ ವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಆ ದಿನಾಂಕದ ನಂತರ ಈ ಸಮುದಾಯಗಳಿಗೆ ಸೇರಿದ 18 ವರ್ಷ ಮೇಲ್ಪಟ್ಟವರಿಗೂ ಆಧಾರ್ ಕಾರ್ಡ್ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಆಧಾರ್ ಕಾರ್ಡ್ ವಿತರಣೆಯಲ್ಲಿ ರಾಜ್ಯ ಸರ್ಕಾರ ‘ಅತ್ಯಂತ ಕಟ್ಟುನಿಟ್ಟಿನ’ ನಿಲುವು ಅನುಸರಿಸಲಿದೆ. ಅಸ್ಸಾಂನಲ್ಲಿ ಆಧಾರ್ ಕಾರ್ಡ್ ಪಡೆಯುವುದು ಸುಲಭವಾಗುವುದಿಲ್ಲ ಎಂದು ಶರ್ಮಾ ಈ ಹಿಂದೆಯೇ ಹೇಳಿದ್ದರು.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 04:49 pm
HK News Staffer
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
14-06-26 02:37 pm
HK News Staffer
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
14-06-26 05:08 pm
HK News Staffer
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am