ಬ್ರೇಕಿಂಗ್ ನ್ಯೂಸ್
14-06-26 07:17 pm HK News Staffer ದೇಶ - ವಿದೇಶ
ಮುಂಬೈ, ಜೂನ್ 14 : ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಡಳಿತಾತ್ಮಕ ಪಾರದರ್ಶಕತೆ ತರಲು ಮತ್ತು ಅಧಿಕಾರದ ದುರ್ಬಳಕೆಗೆ ಬ್ರೇಕ್ ಹಾಕಲು ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ವದ ಹೆಜ್ಜೆ ಇಟ್ಟಿದೆ. ಸಹಕಾರಿ ಬ್ಯಾಂಕುಗಳ ನಿರ್ದೇಶಕರ ಗರಿಷ್ಠ ಅಧಿಕಾರಾವಧಿಯನ್ನು 10 ವರ್ಷಗಳಿಗೆ ಸೀಮಿತಗೊಳಿಸಿ, ಆ ಬಳಿಕ ಕಡ್ಡಾಯವಾಗಿ 3 ವರ್ಷಗಳ ಬಿಡುವು (Cooling-off period) ಪಡೆಯಲೇಬೇಕು ಎಂದು ಆರ್ಬಿಐ ಖಡಕ್ ಆದೇಶ ಹೊರಡಿಸಿದೆ.
ನಿಯಮ ತರಲು ಕಾರಣವೇನು?
ಬ್ಯಾಂಕಿಂಗ್ ಕಾನೂನುಗಳ (ತಿದ್ದುಪಡಿ) ಕಾಯ್ದೆಯಡಿ ಸಹಕಾರಿ ಬ್ಯಾಂಕ್ ನಿರ್ದೇಶಕರ ನಿರಂತರ ಅಧಿಕಾರಾವಧಿಯನ್ನು ಗರಿಷ್ಠ 10 ವರ್ಷಗಳಿಗೆ ಸೀಮಿತಗೊಳಿಸಲಾಗಿತ್ತು. ಆದರೆ, ಕೆಲವು ಪ್ರಭಾವಿ ನಿರ್ದೇಶಕರು ತಮ್ಮ 10 ವರ್ಷಗಳ ಅವಧಿ ಮುಗಿಯುವ ಕೆಲವೇ ದಿನಗಳ ಮುನ್ನ ರಾಜೀನಾಮೆ ನೀಡಿ, ಕೇವಲ ಒಂದೆರಡು ವಾರಗಳಲ್ಲಿ ಮತ್ತೆ ಮರು ಆಯ್ಕೆಯಾಗುವ ಅಥವಾ ಸಹ-ಸದಸ್ಯರಾಗಿ (Co-opted) ಮಂಡಳಿ ಸೇರುವ ಮೂಲಕ ನಿಯಮವನ್ನು ಗಾಳಿಗೆ ತೂರುತ್ತಿದ್ದರು. ಈ ಹಿನ್ನೆಲೆಯಲ್ಲಿ ಆರ್ಬಿಐ ಈ ಲೂಪ್ಹೋಲ್ ಮುಚ್ಚಲು 'ನಗರ/ಗ್ರಾಮೀಣ ಸಹಕಾರಿ ಬ್ಯಾಂಕುಗಳ ಆಡಳಿತ ತಿದ್ದುಪಡಿ ನಿಯಮಾವಳಿ'ಯನ್ನು ಜಾರಿಗೆ ತಂದಿದೆ. ಹೊಸ ನಿಯಮವನ್ನು 2026 ಮೇ 25ರಂದು ಆರ್ ಬಿಐ ಆದೇಶ ಮಾಡಿದೆ.
ಗರಿಷ್ಠ ಅಧಿಕಾರಾವಧಿ 10 ವರ್ಷ ಮಾತ್ರ !
ಇದರಂತೆ, ಒಬ್ಬ ವ್ಯಕ್ತಿ ಯಾವುದೇ ಸಹಕಾರಿ ಬ್ಯಾಂಕಿನಲ್ಲಿ ಸತತವಾಗಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕನಾಗಿರಲು ಸಾಧ್ಯ. 10 ವರ್ಷಗಳ ಅವಧಿ ಮುಗಿದ ನಂತರ, ಅದೇ ಬ್ಯಾಂಕಿನಲ್ಲಿ ಮತ್ತೆ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು ಅಥವಾ ನಾಮನಿರ್ದೇಶನಗೊಳ್ಳಲು ಕನಿಷ್ಠ 3 ವರ್ಷಗಳ ಕಾಲ ಆಡಳಿತ ಮಂಡಳಿಯಿಂದ ಹೊರಗುಳಿಯಬೇಕು.
ಮೂರು ವರ್ಷಗಳ 'ಕೂಲಿಂಗ್-ಆಫ್' ಅವಧಿಯಲ್ಲಿ ಆ ವ್ಯಕ್ತಿ ಬ್ಯಾಂಕಿನ ಯಾವುದೇ ಆಡಳಿತಾತ್ಮಕ ಅಥವಾ ನಿರ್ವಹಣಾ ನಿರ್ಧಾರಗಳಲ್ಲಿ ಭಾಗವಹಿಸುವಂತಿಲ್ಲ. ಆತ ಕೇವಲ ಒಬ್ಬ ಸಾಮಾನ್ಯ ಗ್ರಾಹಕ ಅಥವಾ ಸದಸ್ಯರಾಗಿ ಮಾತ್ರ ಮುಂದುವರಿಯಬಹುದು. ಇವರು ಸೇವೆ ಸಲ್ಲಿಸಿದ ನಿರ್ದಿಷ್ಟ ಬ್ಯಾಂಕಿನಿಂದ ಮಾತ್ರ 3 ವರ್ಷ ದೂರ ಇಡಲಾಗುತ್ತದೆ. ಆದರೆ, ಅವರು ಇಚ್ಛಿಸಿದರೆ ಅರ್ಹತೆ ಆಧಾರದ ಮೇಲೆ ಬೇರೆ ಯಾವುದೇ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಲು ತಡೆ ಇರುವುದಿಲ್ಲ.


ಅಧಿಕಾರಾವಧಿ ಲೆಕ್ಕಾಚಾರ ಹೇಗೆ?
ಒಬ್ಬ ನಿರ್ದೇಶಕ ರಾಜೀನಾಮೆ ನೀಡಿ, 3 ವರ್ಷ ತುಂಬುವ ಮುನ್ನವೇ ಮತ್ತೆ ಮಂಡಳಿ ಸೇರಿದರೆ, ಅವರ ಹಳೆಯ ಅಧಿಕಾರಾವಧಿಯನ್ನು ಹೊಸ ಅವಧಿಗೆ ಸೇರಿಸಿ ಲೆಕ್ಕ ಹಾಕಲಾಗುತ್ತದೆ. ಹೀಗಾಗಿ ಆರ್ ಬಿಐ ನಿಯಮ ಗಾಳಿಗೆ ತೂರಿದರೆ ಆ ವ್ಯಕ್ತಿಗೆ ಮತ್ತೆ ಸಂಕಷ್ಟ ಎದುರಾಗಲಿದೆ. ನಿರ್ದೇಶಕರೊಬ್ಬರ ಅಧಿಕಾರಾವಧಿ 'ಕ್ಲಾಕ್' ಮತ್ತೆ ಮೊದಲಿನಿಂದ ಆರಂಭವಾಗಬೇಕಾದರೆ, ಅವರು ಕಡ್ಡಾಯವಾಗಿ 3 ವರ್ಷಗಳ ಕಾಲ ಬ್ಯಾಂಕಿನ ಆಡಳಿತ ಮಂಡಳಿಯಿಂದ ಸಂಪೂರ್ಣ ದೂರ ಉಳಿದಿರಲೇಬೇಕು ಎಂದು ಆರ್ ಬಿಐ ಹೊಸ ನಿಯಮ ಹೇಳುತ್ತದೆ.
ನಗರ ಮತ್ತು ಗ್ರಾಮೀಣ ಸಹಕಾರಿ ಬ್ಯಾಂಕುಗಳಿಗೆ ಹಾಗೂ ಕೇಂದ್ರ ಸಹಕಾರಿ ಬ್ಯಾಂಕುಗಳಿಗೆ ಈ ನಿಯಮ ಅನ್ವಯವಾಗಲಿದೆ. ಕರ್ನಾಟಕದಲ್ಲಿ ಬಹುತೇಕ ಎಲ್ಲ ಜಿಲ್ಲೆಗಳ ಡಿಸಿಸಿ ಬ್ಯಾಂಕುಗಳಲ್ಲಿ ನಿರ್ದೇಶಕರು ಸತತವಾಗಿ ಒಂದೇ ಸ್ಥಾನಕ್ಕೆ ಮರು ಆಯ್ಕೆಯಾಗುತ್ತಿದ್ದು ಬ್ಯಾಂಕುಗಳ ಅಧಿಕಾರವನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆ. ಚಕ್ರಾಧಿಪತ್ಯ ಮಾಡಿಕೊಂಡು ಸರ್ವಾಧಿಕಾರ ನಡೆಸುತ್ತಿದ್ದವರು ಈ ನಿಯಮ ಪ್ರಕಾರ ಕೂಡಲೇ ರಾಜಿನಾಮೆ ನೀಡಬೇಕಾಗುತ್ತದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm