ಬ್ರೇಕಿಂಗ್ ನ್ಯೂಸ್
15-06-26 11:18 am HK News Staffer ದೇಶ - ವಿದೇಶ
ಮಸ್ಕತ್, ಜೂನ್ 15: ಕೊಲ್ಲಿ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ, ತೈಲ ಹಡಗುಗಳ ಮೇಲಿನ ದಾಳಿ ನಡುವೆಯೇ ತಾಂತ್ರಿಕ ದೋಷದಿಂದ ಭಾರತದ ಧ್ವಜವನ್ನು ಹೊಂದಿದ್ದ ನೌಕೆಯೊಂದು ಒಮಾನ್ ಕರಾವಳಿಯಲ್ಲಿ ಮುಳುಗಡೆಯಾಗಿದೆ. ಅದರಲ್ಲಿದ್ದ ಎಲ್ಲಾ 14 ಸಿಬ್ಬಂದಿಯನ್ನು ಭಾನುವಾರ ರಕ್ಷಿಸಲಾಗಿದೆ ಎಂದು ಮಸ್ಕತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರಾಯಭಾರ ಕಚೇರಿ, ವಾಣಿಜ್ಯ ನೌಕೆಯಾದ ವಿರಾಟ್ 1ರ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ ಸಮುದ್ರದಲ್ಲಿ ಮುಳುಗಡೆಯಾಗುತಿತ್ತು. ಈ ವೇಳೆ, ಒಮಾನ್ ಅಧಿಕಾರಿಗಳ ಸಹಕಾರದೊಂದಿಗೆ ಇತರೇ ಹಡಗುಗಳ ಮೂಲಕ ಅದರಲ್ಲಿದ್ದ ಎಲ್ಲಾ ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ತಿಳಿಸಿದೆ. ಎಲ್ಲಾ 14 ಮಂದಿ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಅವರನ್ನು ಮುಂಬೈಗೆ ಪ್ರಯಾಣಿಸುತ್ತಿದ್ದ 'ಎಂವಿ ಜಬಲ್ ಅಲಿ' ಎಂಬ ಮತ್ತೊಂದು ಸರಕು ಸಾಗಣೆ ನೌಕೆಗೆ ಸ್ಥಳಾಂತರಿಸಲಾಗಿದೆ ಎಂದೂ ಹೇಳಿದೆ. ಕಳೆದ ವಾರ ಒಮಾನ್ ಕರಾವಳಿಯಲ್ಲಿ ಭಾರತೀಯ ಸಿಬ್ಬಂದಿಯನ್ನು ಹೊಂದಿದ್ದ ಮೂರು ಹಡಗುಗಳ ಮೇಲೆ ಅಮೆರಿಕ ಪಡೆಗಳು ದಾಳಿ ನಡೆಸಿದ್ದವು. ಈ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಸಾವನ್ನಪ್ಪಿದ್ದರು.
ಹೊರ್ಮುಜ್ ನಲ್ಲಿ ಸಿಕ್ಕಿಬಿದ್ದ 13 ಹಡಗು, 563 ಸಿಬಂದಿ
ಇರಾನ್ ಭಾಗದಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿರುವುದರಿಂದ ಭಾರತಕ್ಕೆ ಸೇರಿದ 13 ಹಡಗುಗಳು 107 ದಿನಗಳಿಂದ ಸಮುದ್ರದಲ್ಲಿ ಸಿಲುಕಿದ್ದು, 563 ನಾವಿಕರ ಸ್ಥಿತಿ ಅತಂತ್ರವಾಗಿದೆ. ಅನಿಶ್ಚಿತತೆ ಮುಂದುವರಿದಿದ್ದು ಅದರ ಸಿಬಂದಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ. ಫೆ.28ರಂದು ಇರಾನ್ ಮೇಲೆ ಅಮೆರಿಕ ಮೊದಲ ಬಾರಿಗೆ ದಾಳಿ ಮಾಡಿತ್ತು. ಅಲ್ಲಿಂದ ಇಲ್ಲಿಯವರೆಗೆ ಹೊರ್ಮುಜ್ ಜಲಸಂಧಿಯನ್ನು ಆಂಶಿಕವಾಗಿ ಇರಾನ್ ಮುಚ್ಚಿದೆ. ಹಾಗಾಗಿ ಭಾರತದ ಒಟ್ಟು 13 ಹಡಗುಗಳು ಅಲ್ಲಿಂದ ಬರಲಾಗದೇ ಸಿಲುಕಿವೆ. ಹೊರ್ಮುಜ್ ಎಡಬದಿಯ ದಂಡೆಯಲ್ಲಿ ಲಂಗರು ಹಾಕಿರುವ ಹಡಗುಗಳಲ್ಲಿ ಸುಮಾರು 329 ನಾವಿಕರು, ದಕ್ಷಿಣದ ಒಮಾನ್ ಬಲಬದಿಯಲ್ಲಿ ಹಡಗುಗಳಲ್ಲಿ 233 ನಾವಿಕರು, ಕಳೆದ 107 ದಿನಗಳಿಂದ ಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
ಸಿಬಂದಿಗೆ ಮಾನಸಿಕ ಸಮಸ್ಯೆ ಸಾಧ್ಯತೆ
ಜಲಸಂಧಿ ಮುಚ್ಚಿರುವುದರಿಂದ 20000 ಕ್ಕೂ ಹೆಚ್ಚು ಸಿಬಂದಿ ಸಮಸ್ಯೆಗೆ ತುತ್ತಾಗಿದ್ದಾರೆ. ದೀರ್ಘ ಕಾಲದಿಂದ ಇವರೆಲ್ಲರೂ ಸಮುದ್ರದಲ್ಲೇ ಸಿಲುಕಿದ್ದರಿಂದ ಮಾನಸಿಕ ಒತ್ತಡಕ್ಕೆ ತುತ್ತಾಗುವ ಸಾಧ್ಯತೆ ಇದೆ ಎಂದು ವೈದ್ಯರು ಎಚ್ಚರಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm