ಬ್ರೇಕಿಂಗ್ ನ್ಯೂಸ್
23-06-26 10:47 pm HK News Staffer ದೇಶ - ವಿದೇಶ
ಮುಂಬೈ, ಜೂನ್ 23: ಮಹಾರಾಷ್ಟ್ರ ಸರಕಾರ ಮಾಹಿತಿ ಹಕ್ಕು ನಿಯಮಗಳಿಗೆ ಮಾಡಿರುವ ಐದು ತಿದ್ದುಪಡಿಗಳನ್ನು ಹಿಂಪಡೆಯದಿದ್ದರೆ, ಜುಲೈ 5ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ 89ರ ಹರೆಯದ ಸಾಮಾಜಿಕ ಹೋರಾಟಗಾರ ಅಣ್ಣಾ ಹಝಾರೆ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಈ ಸಂಬಂಧ ಪತ್ರ ಬರೆದಿರುವ ಅಣ್ಣಾ ಹಝಾರೆ, “ಜೂನ್ 12ರಂದು ಮಾಡಲಾಗಿರುವ ತಿದ್ದುಪಡಿಗಳು ಮಾಹಿತಿ ಹಕ್ಕು ಕಾಯ್ದೆಯ ಆಶಯಗಳನ್ನು ಉಲ್ಲಂಘಿಸುತ್ತದೆ ಹಾಗೂ ಪಾರದರ್ಶಕತೆಯನ್ನು ಇಲ್ಲವಾಗಿಸುತ್ತದೆ” ಎಂದು ಆಕ್ಷೇಪಿಸಿದ್ದಾರೆ. ಮಾಹಿತಿ ಹಕ್ಕು ಅರ್ಜಿಯನ್ನು ಸಲ್ಲಿಸಲು ಏರಿಕೆ ಮಾಡಲಾಗಿರುವ ಶುಲ್ಕವನ್ನೂ ಆಕ್ಷೇಪಿಸಿದ್ದು ಈ ಏರಿಕೆಗೆ ಯಾವುದೇ ತಾರ್ಕಿಕ ಸಮರ್ಥನೆಯಾಗಲಿ ಅಥವಾ ಆರ್ಥಿಕ ವಿಶ್ಲೇಷಣೆಯನ್ನಾಗಲಿ ಒದಗಿಸಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.
“ಮಾಹಿತಿ ಹಕ್ಕು ಕಾಯ್ದೆ ಆದಾಯವನ್ನು ಸೃಷ್ಟಿಸುವ ಕಾನೂನಲ್ಲ. 20 ವರ್ಷಗಳ ಬಳಿಕ ಮಾಹಿತಿ ಹಕ್ಕು ಅರ್ಜಿಯ ಶುಲ್ಕವನ್ನು ಏರಿಕೆ ಮಾಡಿರುವುದಾದರೆ, ಮಾಹಿತಿ ನಿರಾಕರಿಸುವ ಅಧಿಕಾರಿಗಳ ಮೇಲಿನ ದಂಡವನ್ನೇಕೆ ಹೆಚ್ಚಳ ಮಾಡಬಾರದು?” ಎಂದೂ ಅವರು ಪ್ರಶ್ನಿಸಿದ್ದಾರೆ. ಮಾಹಿತಿ ಪಡೆಯಲು ಗುರುತಿನ ಚೀಟಿಯನ್ನು ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿರುವ ಅಣ್ಣಾ ಹಝಾರೆ, ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 6(2)ರ ಅನ್ವಯ ಅರ್ಜಿದಾರರು ಮಾಹಿತಿಯನ್ನು ಪಡೆಯಲು ತಮ್ಮ ವೈಯಕ್ತಿಕ ವಿವರಗಳನ್ನಾಗಲಿ ಅಥವಾ ಕಾರಣಗಳನ್ನಾಗಲಿ ಬಹಿರಂಗಗೊಳಿಸಬೇಕಾದ ಅಗತ್ಯವಿಲ್ಲ. ಇಂತಹ ಷರತ್ತುಗಳು ಮಾಹಿತಿ ಬಯಸುವವರಿಗೆ ಅಪಾಯ ತಂದೊಡ್ಡುತ್ತವೆ” ಎಂದು ಅವರು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm