ಬ್ರೇಕಿಂಗ್ ನ್ಯೂಸ್
29-06-26 12:41 pm HK News Staffer ದೇಶ - ವಿದೇಶ
ಚೆನ್ನೈ, ಜೂ.27: ತಮಿಳುನಾಡಿನ ರಾಜಕೀಯದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸುವಂತಹ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್, ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದ ಭವಿಷ್ಯದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಮೈತ್ರಿ ಪಕ್ಷಗಳ ಬೆಂಬಲದ ಮೇಲೆ ನಿಂತಿರುವ ಈ ಸರ್ಕಾರ ಐದು ವರ್ಷ ಪೂರ್ಣಗೊಳಿಸುವುದಿಲ್ಲ. ಮುಂದಿನ 3 ರಿಂದ 6 ತಿಂಗಳೊಳಗೆ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಡಿಎಂಕೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸ್ಟಾಲಿನ್, ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ವಿಶ್ಲೇಷಣೆ ನಡೆಸುತ್ತಾ ಟಿವಿಕೆ ಸರ್ಕಾರದ ಸ್ಥಿರತೆಯ ಬಗ್ಗೆ ಗಂಭೀರ ಅನುಮಾನ ವ್ಯಕ್ತಪಡಿಸಿದರು. ಜನರು ನೀಡಿರುವ ಜನಾದೇಶದ ಬಲದಿಂದ ಈ ಸರ್ಕಾರ ಅಧಿಕಾರದಲ್ಲಿಲ್ಲ. ಮೈತ್ರಿ ಪಕ್ಷಗಳ ಆಸರೆಯಿಂದ ಮಾತ್ರ ಸರ್ಕಾರ ಉಳಿದಿದೆ ಎಂದು ಆರೋಪಿಸಿದರು.
ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ವಿಧಾನಸಭೆಯಲ್ಲಿ ಸ್ವತಂತ್ರವಾಗಿ ಆಡಳಿತ ನಡೆಸಲು ಅಗತ್ಯವಿರುವ ಸ್ಪಷ್ಟ ಬಹುಮತ ಇಲ್ಲ. ಸರ್ಕಾರ ರಚಿಸಲು ಬೇಕಾದ 118 ಸ್ಥಾನಗಳ ಪೈಕಿ ಟಿವಿಕೆ ಕೇವಲ 108 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಹೀಗಾಗಿ ಮೈತ್ರಿ ಪಕ್ಷಗಳ ಬೆಂಬಲವೇ ಸರ್ಕಾರದ ಜೀವಾಳವಾಗಿದೆ ಎಂದು ಸ್ಟಾಲಿನ್ ಹೇಳಿದರು.
ಈ ಚುನಾವಣೆಯಲ್ಲಿ ಜನರು ಡಿಎಂಕೆ ಸರ್ಕಾರವೇ ಅಧಿಕಾರಕ್ಕೆ ಬರಬೇಕು ಎಂಬ ಆಶಯದಿಂದ ಮತ ಚಲಾಯಿಸಿದ್ದರು. ಆದರೆ ಮೈತ್ರಿಕೂಟದ ಭಾಗವಾಗಿದ್ದ ಕೆಲವು ಪಕ್ಷಗಳ ರಾಜಕೀಯ ತಂತ್ರ, ಹೊಂದಾಣಿಕೆ ಹಾಗೂ ನಂತರದ ಬೆಳವಣಿಗೆಗಳಿಂದ ಟಿವಿಕೆ ಸರ್ಕಾರ ರಚನೆಯಾಗಲು ಅವಕಾಶ ಸಿಕ್ಕಿತು ಎಂದು ಅವರು ಆರೋಪಿಸಿದರು.
ಟಿವಿಕೆ ಸರ್ಕಾರವನ್ನು ಟೀಕಿಸಿದ ಸ್ಟಾಲಿನ್, "ಇದು ಅಲುಗಾಡುತ್ತಿರುವ ಸರ್ಕಾರ. ಯಾವ ಕ್ಷಣದಲ್ಲಿ ಸಮತೋಲನ ಕಳೆದುಕೊಂಡು ಕುಸಿಯುತ್ತದೆಯೋ ಹೇಳಲು ಸಾಧ್ಯವಿಲ್ಲ. ಯಾವ ಜಂಕ್ಷನ್ ಅಥವಾ ಯಾವ ತಿರುವಿನಲ್ಲಿ ಈ ವಾಹನ ನಿಲ್ಲುತ್ತದೋ ಗೊತ್ತಿಲ್ಲ" ಎಂದು ವ್ಯಂಗ್ಯವಾಡಿದರು.
ಮುಂದಿನ ದಿನಗಳಲ್ಲಿ ರಾಜಕೀಯ ಪರಿಸ್ಥಿತಿ ಕ್ಷಣಕ್ಷಣಕ್ಕೂ ಬದಲಾಗುವ ಸಾಧ್ಯತೆ ಇದೆ. ಆದ್ದರಿಂದ ಚುನಾವಣೆ ಯಾವಾಗ ಬೇಕಾದರೂ ಎದುರಾಗಬಹುದು. ಐದು ವರ್ಷಗಳ ಕಾಲ ಕಾಯಬೇಕಾದ ಅಗತ್ಯವಿಲ್ಲ ಎಂದು ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದರು.
ಸ್ಟಾಲಿನ್ ಅವರ ಈ ಹೇಳಿಕೆ ತಮಿಳುನಾಡಿನ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಆಡಳಿತಾರೂಢ ಟಿವಿಕೆ ಹಾಗೂ ಪ್ರತಿಪಕ್ಷಗಳ ನಡುವೆ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಸರ್ಕಾರದ ಸ್ಥಿರತೆ, ಮೈತ್ರಿ ರಾಜಕೀಯ ಹಾಗೂ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಇದೀಗ ರಾಜ್ಯ ರಾಜಕೀಯದಲ್ಲಿ ಕುತೂಹಲ ಹೆಚ್ಚಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm