ಬ್ರೇಕಿಂಗ್ ನ್ಯೂಸ್
02-07-26 01:56 pm HK News Staffer ದೇಶ - ವಿದೇಶ
ಅಹ್ಮದಾಬಾದ್, ಜುಲೈ 2: ಹಿಂದೂ ಧರ್ಮದ ಅಡಿಯಲ್ಲಿ ವಿವಾಹಕ್ಕೆ ಕೇವಲ ವಿವಾಹ ನೋಂದಣಿ ಪ್ರಮಾಣಪತ್ರ ಇದ್ದರೆ ಸಾಕಾಗುವುದಿಲ್ಲ. ಸಪ್ತಪದಿ ಸೇರಿದಂತೆ ಅಗತ್ಯ ಧಾರ್ಮಿಕ ವಿಧಿ-ವಿಧಾನಗಳು ನಡೆದಿದ್ದರೆ ಮಾತ್ರ ವಿವಾಹಕ್ಕೆ ಕಾನೂನುಬದ್ಧ ಮಾನ್ಯತೆ ಸಿಗುತ್ತದೆ ಎಂದು ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಬ್ರಿಟನ್ನಲ್ಲಿ ನೆಲೆಸಿರುವ ವ್ಯಕ್ತಿಯೊಬ್ಬರು ತಮ್ಮ ಹೆಸರಿನಲ್ಲಿ ನೋಂದಾಯಿಸಲಾದ ವಿವಾಹವನ್ನು ಅಮಾನ್ಯ ಎಂದು ಘೋಷಿಸುವಂತೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ವೋರಾ ಮತ್ತು ನ್ಯಾ.ವಚಾನಿ ಅವರಿದ್ದ ವಿಭಾಗೀಯ ಪೀಠವು ಈ ಆದೇಶ ನೀಡಿದೆ.
ಪ್ರಕರಣದ ವಿಚಾರಣೆ ವೇಳೆ, ಪ್ರತಿವಾದಿ ಮಹಿಳೆಯು ಯಾವುದೇ ವಿವಾಹ ವಿಧಿ ವಿಧಾನಗಳು ನಡೆದಿಲ್ಲ ಎಂದು ಸ್ವತಃ ನ್ಯಾಯಾಲಯದ ಎದುರು ಒಪ್ಪಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕೇವಲ ವಿವಾಹ ನೋಂದಣಿ ಪ್ರಮಾಣಪತ್ರದ ಆಧಾರದ ಮೇಲೆ ವಿವಾಹ ಮಾನ್ಯವಾಗಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ನ್ಯಾಯಾಲಯವು ಹಿಂದೂ ವಿವಾಹ ಕಾಯಿದೆ-1955 ಅನ್ನು ಉಲ್ಲೇಖಿಸಿದ್ದು, ಹಿಂದೂ ವಿವಾಹವು ಆಯಾ ಕುಟುಂಬ ಅಥವಾ ಸಮುದಾಯದ ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಬೇಕು ಎಂದು ಅಭಿಪ್ರಾಯ ಪಟ್ಟಿದೆ. ವಿಶೇಷವಾಗಿ ಸಪ್ತಪದಿ, ಇನ್ನಿತರ ಅಗತ್ಯ ಆಚರಣೆಗಳು ನಡೆದಾಗ ಮಾತ್ರ ವಿವಾಹಕ್ಕೆ ಧಾರ್ಮಿಕ, ಸಾಮಾಜಿಕ ಹಾಗೂ ಕಾನೂನುಬದ್ದ ಮಾನ್ಯತೆ ದೊರೆಯುತ್ತದೆ ಎಂದು ನ್ಯಾಯಪೀಠ ಹೇಳಿದೆ.
"ಹಿಂದು ಪದ್ಧತಿಯಲ್ಲಿ ವಿವಾಹ ಎನ್ನುವುದು ಕೇವಲ ಹಾಡು, ನೃತ್ಯಗಳ ಕಾರ್ಯಕ್ರಮವಲ್ಲ, ಅದು ಪವಿತ್ರ ಸಂಸ್ಕಾರ ಮತ್ತು ಜೀವಮಾನದ ಬಾಂಧವ್ಯವಾಗಿದೆ. ಯುವಜನರು ವಿವಾಹದ ಪಾವಿತ್ರ್ಯ ಹಾಗೂ ಅದರ ಜವಾಬ್ದಾರಿಯನ್ನು ಅರಿತು ವೈವಾಹಿಕ ಜೀವನಕ್ಕೆ ಕಾಲಿಡಬೇಕು,''ಎಂದು ನ್ಯಾಯಪೀಠ ಕಿವಿಮಾತು ತಿಳಿಸಿದೆ. ಲಂಡನ್ ನಲ್ಲಿ ನೆಲೆಸಿರುವ ಕೌಶಲ್ ಸೋನಾರ್ ಎಂಬವರು ತಮ್ಮ ಹೆಸರಿನಲ್ಲಿ ನೋಂದಾಯಿಸಲಾದ ವಿವಾಹವನ್ನು ಅಮಾನ್ಯ ಎಂದು ಘೋಷಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದರು.
ಅಹಮದಾಬಾದ್ನಲ್ಲಿ ವಾಸಿಸುವ ಮಹಿಳೆಯೊಬ್ಬರು ತನ್ನನ್ನು ವಿವಾಹ ಆಗಿರುವ ಬಗ್ಗೆ ಪ್ರಮಾಣ ಪತ್ರದೊಂದಿಗೆ ತಮ್ಮ ಕುಟುಂಬವನ್ನು ಸಂಪರ್ಕಿಸಿದ ಬಳಿಕವೇ ವಿವಾಹದ ಬಗ್ಗೆ ತನಗೆ ತಿಳಿಯಿತು ಎಂದು ಅರ್ಜಿದಾರ ಕೌಶಲ್ ಸೋನಾರ್ ಹೈಕೋರ್ಟ್ ಗಮನಕ್ಕೆ ತಂದಿದ್ದಾರೆ. ಪ್ರತಿವಾದಿ ಮಹಿಳೆಯೂ ವ್ಯಾಜ್ಯ ಕೌಟುಂಬಿಕ ನ್ಯಾಯಾಲಯದಲ್ಲಿದ್ದಾಗ ಯಾವುದೇ ವಿವಾಹ ವಿಧಿ ವಿಧಾನಗಳು ನಡೆದಿಲ್ಲ ಹಾಗೂ ಇಬ್ಬರೂ ಪತಿ-ಪತ್ನಿಯಾಗಿ ಎಂದಿಗೂ ಜೀವನ ನಡೆಸಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದರು. ಇಂತಹ ಒಪ್ಪಿಗೆಯಿದ್ದರೂ ಕೌಟುಂಬಿಕ ನ್ಯಾಯಾಲಯ ಕೌಶಲ್ ಸೋನಾರ್ ಅರ್ಜಿಯನ್ನು ವಜಾಗೊಳಿಸಿತ್ತು. ಕೌಟುಂಬಿಕ ನ್ಯಾಯಾಲಯದ ಈ ನಡೆಯನ್ನು ತಪ್ಪು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
03-07-26 09:40 pm
HK News Staffer
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm