ಬ್ರೇಕಿಂಗ್ ನ್ಯೂಸ್
03-07-26 09:40 pm HK News Staffer ದೇಶ - ವಿದೇಶ
ನವದೆಹಲಿ, ಜುಲೈ 3: ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವ ಭಾರತದ ರಿಫೈನರಿಗಳು, ಅವನ್ನು ಸಂಸ್ಕರಿಸಿ ಮತ್ತೆ ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿರುವ ವಿಚಾರ ಈಗ ಚರ್ಚೆಗೆ ಗ್ರಾಸವಾಗಿವೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, "ರಷ್ಯಾದಿಂದ ತೈಲ ತಂದು ಮತ್ತೆ ರಷ್ಯಾಕ್ಕೇ ಪೆಟ್ರೋಲ್ ಮಾರಾಟ ಮಾಡಲಾಗುತ್ತಿದೆಯೇ?" ಎಂಬ ಕುತೂಹಲ ಮೂಡಿಸಿದೆ.
ಆದರೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಭಾರತದ ಯಾವುದೇ ಸರ್ಕಾರಿ ಅಥವಾ ಖಾಸಗಿ ತೈಲ ಸಂಸ್ಕರಣಾ ಕಂಪನಿಗಳು (ರಿಫೈನರಿಗಳು) ನೇರವಾಗಿ ರಷ್ಯಾಕ್ಕೆ ಪೆಟ್ರೋಲ್ ಮಾರಾಟ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆದರೆ ಕೆಲವು ಅಂತರಾಷ್ಟ್ರೀಯ ಮಾಧ್ಯಮ ವರದಿಗಳಲ್ಲಿ, ಉಕ್ರೇನ್ ದಾಳಿಯಿಂದಾಗಿ ರಷ್ಯಾದ ತೈಲ ಸಂಸ್ಕರಣಾ ಘಟಕಗಳಿಗೆ ಹಾನಿಯಾಗಿದ್ದು ಅಲ್ಲಿನ ದೇಶೀಯ ಬೇಡಿಕೆ ಪೂರೈಸಲು ಭಾರತದಿಂದ ಸಮುದ್ರ ಮಾರ್ಗದ ಮೂಲಕ ಪೆಟ್ರೋಲ್ ಖರೀದಿಸಲಾಗಿದೆ ಎಂದು ಹೇಳಲಾಗಿದೆ. ಸುಮಾರು 60,000 ಮೆಟ್ರಿಕ್ ಟನ್ ಪೆಟ್ರೋಲ್ ರವಾನೆಯಾಗಿದ್ದು, ಇನ್ನೂ ಎರಡು ಟ್ಯಾಂಕರ್ಗಳಲ್ಲಿ ತಲಾ 30ರಿಂದ 40 ಸಾವಿರ ಟನ್ ಪೆಟ್ರೋಲ್ ಕಳುಹಿಸಲಾಗಿದೆ ಎಂಬ ಮಾಹಿತಿಗಳಿವೆ.
ಈ ಕುರಿತು ಪ್ರತಿಕ್ರಿಯಿಸಿದ ಹರ್ದೀಪ್ ಸಿಂಗ್ ಪುರಿ, "ಭಾರತದ ಯಾವುದೇ ರಿಫೈನರಿ ರಷ್ಯಾಕ್ಕೆ ನೇರವಾಗಿ ಪೆಟ್ರೋಲ್ ರಫ್ತು ಮಾಡುತ್ತಿಲ್ಲ. ಭಾರತೀಯ ಮೂಲದ ಇಂಧನ ರಷ್ಯಾಕ್ಕೆ ತಲುಪಿದ್ದರೆ, ಅದು ಮಧ್ಯವರ್ತಿಗಳ ಮೂಲಕ ಕೈ ಬದಲಾಗಿ ಅಂತಿಮವಾಗಿ ತಲುಪಿರಬಹುದು" ಎಂದು ಹೇಳಿದ್ದಾರೆ. ಕಚ್ಚಾ ತೈಲ ಮತ್ತು ಸಂಸ್ಕರಿಸಿದ ಪೆಟ್ರೋಲಿಯಂ ಉತ್ಪನ್ನಗಳು ಜಾಗತಿಕ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಒಂದು ರಾಷ್ಟ್ರದಿಂದ ಪಡೆದು ಇನ್ನೊಂದು ಕಡೆಗೆ ಮಾರಾಟ ಮಾಡುವುದು ಸಹಜ ಪ್ರಕ್ರಿಯೆ. ಉತ್ಪನ್ನದ ಮೂಲ ದೇಶ ಮತ್ತು ಖರೀದಿಸುವ ದೇಶದ ನಡುವೆ ನೇರ ವ್ಯವಹಾರ ಇರಲೇಬೇಕೆಂದಿಲ್ಲ ಎಂದು ತಿಳಿಸಿದ್ದಾರೆ.
ಇದೇ ವೇಳೆ ಭಾರತದಲ್ಲಿ ತೈಲ ದರ ಕಡಿಮೆಗೊಳಿಸುವ ಕುರಿತಾಗಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಇದೇ ಮಟ್ಟದಲ್ಲಿ ಕೆಲವು ತಿಂಗಳ ವರೆಗೆ ಸ್ಥಿರವಾಗಿದ್ದರೆ, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವ ಬಗ್ಗೆ ಸರ್ಕಾರ ಹಾಗೂ ತೈಲ ಕಂಪನಿಗಳು ಪರಿಶೀಲನೆ ನಡೆಸಬಹುದು ಎಂದು ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm