ಬ್ರೇಕಿಂಗ್ ನ್ಯೂಸ್
09-07-26 03:40 pm HK News Staffer ದೇಶ - ವಿದೇಶ
ಟೆಹ್ರಾನ್, ಜುಲೈ 9: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಜೂನ್ 17 ರಂದು ಮಾಡಿಕೊಂಡಿದ್ದ ಕದನ ವಿರಾಮ ಒಪ್ಪಂದ ಮುರಿದು ಬಿದ್ದಿದೆ. ಇರಾನ್ ತನ್ನ ಮಾತು ಕೇಳುತ್ತಿಲ್ಲ ಎಂದು ಅಮೆರಿಕದ ಪಡೆಗಳು ಮತ್ತೆ ವೈಮಾನಿಕ ದಾಳಿ ನಡೆಸಲಾರಂಭಿಸಿದೆ. ಇದಕ್ಕೆದುರಾಗಿ ಇರಾನ್ ಪಡೆಗಳು ಬಹ್ರೇನ್, ಕುವೈತ್ ಹಾಗೂ ಕತಾರ್ನಲ್ಲಿರುವ ಅಮೆರಿಕದ ಸೇನಾನೆಲೆ ಗುರಿಯಾಗಿಸಿ ಕ್ಷಿಪಣಿಗಳನ್ನು ಉಡಾಯಿಸಿದೆ.
ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ಇರಾನ್ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಅಮೆರಿಕದ ಪಡೆಗಳು ವೈಮಾನಿಕ ದಾಳಿಗೆ ಮುಂದಾಗಿದ್ದವು. ಇದರ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್, ತಾತ್ಕಾಲಿಕ ಕದನ ವಿರಾಮ ಮುಕ್ತಾಯವಾಗಿದೆ ಎಂದು ಘೋಷಿಸಿದ್ದರು. ಅಮೆರಿಕ ಸೇನೆಯ ಪ್ರಕಾರ, ಹಾರ್ಮುಜ್ ಜಲಸಂಧಿಯಲ್ಲಿ ನೌಕಾಯಾನಕ್ಕೆ ಬೆದರಿಕೆ ಒಡ್ಡುವ ಇರಾನ್ ಸಾಮರ್ಥ್ಯವನ್ನು ಮತ್ತಷ್ಟು ಕುಗ್ಗಿಸುವ ಉದ್ದೇಶದಿಂದ ಈ ದಾಳಿಗಳನ್ನು ನಡೆಸಲಾಗಿದೆ. ವಿಶ್ವದ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲ ಸಾಗಣೆಯ ಸುಮಾರು 20 ಪ್ರತಿಶತ ಇದೇ ಜಲಸಂಧಿಯ ಮೂಲಕ ನಡೆಯುವುದರಿಂದ, ಈ ಪ್ರದೇಶದ ಉದ್ವಿಗ್ನತೆ ಜಾಗತಿಕ ಇಂಧನ ಮಾರುಕಟ್ಟೆ ಮೇಲೆ ನೇರ ಪರಿಣಾಮ ಬೀರುತ್ತದೆ.
ಈ ನಡುವೆ ಇರಾನ್ ಸರ್ಕಾರಿ ಮಾಧ್ಯಮಗಳು, ಬುಶೆಹರ್ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಸ್ಫೋಟಗಳು ಸಂಭವಿಸಿವೆ. ಅಲ್ಲದೆ, ಪರಮಾಣು ವಿದ್ಯುತ್ ಸ್ಥಾವರ ಹೊಂದಿರುವ ಬುಶೆಹರ್ ನಗರ, ದಕ್ಷಿಣದ ಚಬಹಾರ್, ಕೊನಾರಕ್, ಬಂದರ್ ಅಬ್ಬಾಸ್ ಮತ್ತು ಸಿರಿಕ್ ಬಂದರು ನಗರಗಳಲ್ಲಿ ಸ್ಫೋಟ ಉಂಟಾಗಿದೆ ಎಂದು ತಿಳಿಸಿವೆ. ವಿವಿಧ ನಗರ ಪ್ರದೇಶಗಳ ಮೇಲಿನ ದಾಳಿಯಲ್ಲಿ ಇರಾನ್ ಕಡೆಯ 14 ಜನರು ಸಾವಿಗೀಡಾಗಿದ್ದು 78 ಜನರು ಗಾಯಗೊಂಡಿದ್ದಾರೆಂದು ಅಲ್ ಜಜೀರಾ ವರದಿ ಮಾಡಿದೆ.
ಇತ್ತ ಬಹ್ರೇನ್, ಕುವೈತ್ ಮತ್ತು ಕತಾರ್ ಕಡೆಗೆ ಇರಾನ್ ಉಡಾಯಿಸಿದ ಕ್ಷಿಪಣಿಗಳು ಹಾಗೂ ಡ್ರೋನ್ಗಳ ಪರಿಣಾಮದ ಕುರಿತು ಆರಂಭಿಕ ಮಾಹಿತಿ ಲಭ್ಯವಾಗಿಲ್ಲ. ಆದರೆ, ಕುವೈತ್ ಸೇನೆ ತನ್ನ ವಾಯು ರಕ್ಷಣಾ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಿ, ಹಲವು ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಮಧ್ಯದಲ್ಲೇ ಹೊಡೆದುರುಳಿಸಲಾಗಿದೆ ಎಂದು ತಿಳಿಸಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am