ಬ್ರೇಕಿಂಗ್ ನ್ಯೂಸ್
09-07-26 03:40 pm HK News Staffer ದೇಶ - ವಿದೇಶ
ಟೆಹ್ರಾನ್, ಜುಲೈ 9: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಜೂನ್ 17 ರಂದು ಮಾಡಿಕೊಂಡಿದ್ದ ಕದನ ವಿರಾಮ ಒಪ್ಪಂದ ಮುರಿದು ಬಿದ್ದಿದೆ. ಇರಾನ್ ತನ್ನ ಮಾತು ಕೇಳುತ್ತಿಲ್ಲ ಎಂದು ಅಮೆರಿಕದ ಪಡೆಗಳು ಮತ್ತೆ ವೈಮಾನಿಕ ದಾಳಿ ನಡೆಸಲಾರಂಭಿಸಿದೆ. ಇದಕ್ಕೆದುರಾಗಿ ಇರಾನ್ ಪಡೆಗಳು ಬಹ್ರೇನ್, ಕುವೈತ್ ಹಾಗೂ ಕತಾರ್ನಲ್ಲಿರುವ ಅಮೆರಿಕದ ಸೇನಾನೆಲೆ ಗುರಿಯಾಗಿಸಿ ಕ್ಷಿಪಣಿಗಳನ್ನು ಉಡಾಯಿಸಿದೆ.
ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ಇರಾನ್ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಅಮೆರಿಕದ ಪಡೆಗಳು ವೈಮಾನಿಕ ದಾಳಿಗೆ ಮುಂದಾಗಿದ್ದವು. ಇದರ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್, ತಾತ್ಕಾಲಿಕ ಕದನ ವಿರಾಮ ಮುಕ್ತಾಯವಾಗಿದೆ ಎಂದು ಘೋಷಿಸಿದ್ದರು. ಅಮೆರಿಕ ಸೇನೆಯ ಪ್ರಕಾರ, ಹಾರ್ಮುಜ್ ಜಲಸಂಧಿಯಲ್ಲಿ ನೌಕಾಯಾನಕ್ಕೆ ಬೆದರಿಕೆ ಒಡ್ಡುವ ಇರಾನ್ ಸಾಮರ್ಥ್ಯವನ್ನು ಮತ್ತಷ್ಟು ಕುಗ್ಗಿಸುವ ಉದ್ದೇಶದಿಂದ ಈ ದಾಳಿಗಳನ್ನು ನಡೆಸಲಾಗಿದೆ. ವಿಶ್ವದ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲ ಸಾಗಣೆಯ ಸುಮಾರು 20 ಪ್ರತಿಶತ ಇದೇ ಜಲಸಂಧಿಯ ಮೂಲಕ ನಡೆಯುವುದರಿಂದ, ಈ ಪ್ರದೇಶದ ಉದ್ವಿಗ್ನತೆ ಜಾಗತಿಕ ಇಂಧನ ಮಾರುಕಟ್ಟೆ ಮೇಲೆ ನೇರ ಪರಿಣಾಮ ಬೀರುತ್ತದೆ.
ಈ ನಡುವೆ ಇರಾನ್ ಸರ್ಕಾರಿ ಮಾಧ್ಯಮಗಳು, ಬುಶೆಹರ್ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಸ್ಫೋಟಗಳು ಸಂಭವಿಸಿವೆ. ಅಲ್ಲದೆ, ಪರಮಾಣು ವಿದ್ಯುತ್ ಸ್ಥಾವರ ಹೊಂದಿರುವ ಬುಶೆಹರ್ ನಗರ, ದಕ್ಷಿಣದ ಚಬಹಾರ್, ಕೊನಾರಕ್, ಬಂದರ್ ಅಬ್ಬಾಸ್ ಮತ್ತು ಸಿರಿಕ್ ಬಂದರು ನಗರಗಳಲ್ಲಿ ಸ್ಫೋಟ ಉಂಟಾಗಿದೆ ಎಂದು ತಿಳಿಸಿವೆ. ವಿವಿಧ ನಗರ ಪ್ರದೇಶಗಳ ಮೇಲಿನ ದಾಳಿಯಲ್ಲಿ ಇರಾನ್ ಕಡೆಯ 14 ಜನರು ಸಾವಿಗೀಡಾಗಿದ್ದು 78 ಜನರು ಗಾಯಗೊಂಡಿದ್ದಾರೆಂದು ಅಲ್ ಜಜೀರಾ ವರದಿ ಮಾಡಿದೆ.
ಇತ್ತ ಬಹ್ರೇನ್, ಕುವೈತ್ ಮತ್ತು ಕತಾರ್ ಕಡೆಗೆ ಇರಾನ್ ಉಡಾಯಿಸಿದ ಕ್ಷಿಪಣಿಗಳು ಹಾಗೂ ಡ್ರೋನ್ಗಳ ಪರಿಣಾಮದ ಕುರಿತು ಆರಂಭಿಕ ಮಾಹಿತಿ ಲಭ್ಯವಾಗಿಲ್ಲ. ಆದರೆ, ಕುವೈತ್ ಸೇನೆ ತನ್ನ ವಾಯು ರಕ್ಷಣಾ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಿ, ಹಲವು ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಮಧ್ಯದಲ್ಲೇ ಹೊಡೆದುರುಳಿಸಲಾಗಿದೆ ಎಂದು ತಿಳಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm