ಬ್ರೇಕಿಂಗ್ ನ್ಯೂಸ್
11-07-26 04:31 pm HK News Staffer ದೇಶ - ವಿದೇಶ
ನವದೆಹಲಿ, ಜುಲೈ 11: ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿದ್ದು, 15 ಮಂದಿ ಮೃತಪಟ್ಟ ಘಟನೆ ನಡೆದಿದೆ.
ಜುಲೈ 11ರ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಫುಕೋ ದ್ವೀಪದ ಏರ್ಪೋರ್ಟ್ ಬಳಿಯಿಂದ 32 ಮಂದಿಯಿದ್ದ ಪ್ರವಾಸಿಗರನ್ನು ಬೋಟಿನಲ್ಲಿ ಇನ್ನೊಂದು ದ್ವೀಪದತ್ತ ಒಯ್ಯಲಾಗುತ್ತಿತ್ತು. ಈ ವೇಳೆ, ಸಮುದ್ರದ ಅಬ್ಬರ ಮತ್ತು ಭಾರೀ ಗಾಳಿಗೆ ಬೋಟ್ ಹಠಾತ್ ಪಲ್ಟಿಯಾಗಿ ಮುಳುಗಡೆಯಾಗಿದೆ. ಕೂಡಲೇ ರಕ್ಷಣಾ ತಂಡಗಳು ಧಾವಿಸಿದ್ದರೂ, ಹೆಚ್ಚಿನವರು ನೀರಿನಲ್ಲಿ ಮುಳುಗಿ ಅಸ್ವಸ್ಥರಾಗಿದ್ದಾರೆ.
ಬೋಟ್ ಮಗುಚಿ ಬಿದ್ದಿದ್ದರಿಂದ ಅದರಲ್ಲಿದ್ದ ಪ್ರವಾಸಿಗರು ನೀರಿನಲ್ಲಿ ಮುಳುಗಿದ್ದಾರೆ. ಹಲವರನ್ನು ಗಂಭೀರ ಸ್ಥಿತಿಯಲ್ಲಿ ರಕ್ಷಣೆ ಮಾಡಲಾಗಿದೆ. ಈ ವೇಳೆ, 15 ಮಂದಿಯಷ್ಟು ಪ್ರವಾಸಿಗರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂದರ್ಭದಲ್ಲಿ 4 ಮಂದಿ ಬೋಟ್ ಸಿಬಂದಿ ಇದ್ದರು. ದುರಂತದಲ್ಲಿ ಕೆಲವರಷ್ಟೇ ತೊಂದರೆಯಿಲ್ಲದೆ ಪಾರಾಗಿದ್ದಾರೆ. ಸ್ಥಳದಲ್ಲಿ ಮಳೆ ಇಲ್ಲದಿದ್ದರೂ, ಸಮುದ್ರದ ಅಬ್ಬರ ತೀವ್ರವಾಗಿತ್ತು. ಇತರೇ ಸ್ಪೀಡ್ ಬೋಟ್ ಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು. ಸದ್ಯಕ್ಕೆ ಮೃತರಲ್ಲಿ ಎಲ್ಲಿಯವರು, ಯಾರು ಎನ್ನುವುದು ಗೊತ್ತಾಗಿಲ್ಲ. ಬೋಟಿನಲ್ಲಿ ಭಾರತೀಯರೇ ಹೆಚ್ಚಿದ್ದರು ಅನ್ನುವ ಮಾಹಿತಿ ಇದೆ.
ಫುಕೋ ದ್ವೀಪಕ್ಕೆ ಕಳೆದ ಆರು ತಿಂಗಳಲ್ಲಿ 5.7 ಮಿಲಿಯನ್ ಪ್ರವಾಸಿಗರು ಬಂದಿದ್ದು ದಾಖಲೆಯಾಗಿದೆ. ವಿಯೆಟ್ನಾಂ ದ್ಪೀಪ ರಾಷ್ಟ್ರಗಳಿಗೆ ಪ್ರವಾಸೋದ್ಯಮವೇ ಆಕರ್ಷಣೆಯಾಗಿದ್ದು ಜಗತ್ತಿನ ಬಹುತೇಕ ರಾಷ್ಟ್ರಗಳಿಂದ ಇಲ್ಲಿನ ದ್ವೀಪಗಳಿಗೆ ಜನರು ಪ್ರವಾಸ ಬರುತ್ತಾರೆ. ಕಳೆದ ವರ್ಷ ಜುಲೈ ತಿಂಗಳಲ್ಲೂ ವಿಯೆಟ್ನಾಂನಲ್ಲಿ ಬೋಟ್ ದುರಂತ ನಡೆದು 38 ಮಂದಿ ಸಾವನ್ನಪ್ಪಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm