ಬ್ರೇಕಿಂಗ್ ನ್ಯೂಸ್
11-07-26 09:29 pm HK News Staffer ದೇಶ - ವಿದೇಶ
ಮೈಸೂರು, ಜುಲೈ 11: ತಮ್ಮ ಮಾಧುರ್ಯಭರಿತ ಧ್ವನಿಯಿಂದ ಕೋಟ್ಯಂತರ ಸಂಗೀತ ಪ್ರೇಮಿಗಳ ಮನಗೆದ್ದಿದ್ದ ದಕ್ಷಿಣ ಭಾರತದ ದಂತಕಥೆ, ಗಾನಕೋಗಿಲೆ ಎಸ್. ಜಾನಕಿ ಅವರು 88ನೇ ವಯಸ್ಸಿನಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರ ನಿಧನದೊಂದಿಗೆ ಭಾರತೀಯ ಚಿತ್ರಸಂಗೀತದ ಒಂದು ಸುವರ್ಣಯುಗ ಅಂತ್ಯಗೊಂಡಂತಾಗಿದೆ.
1938ರ ಏಪ್ರಿಲ್ 23ರಂದು ಜನಿಸಿದ ಸಿಸ್ತ್ಲಾ ಶ್ರೀರಾಮಮೂರ್ತಿ ಜಾನಕಿ ಅವರು ಕೇವಲ ಹಿನ್ನೆಲೆ ಗಾಯಕಿಯಾಗಿರದೆ, ತಮ್ಮ ಅದ್ಭುತ ಭಾವಾಭಿವ್ಯಕ್ತಿ ಮತ್ತು ಸ್ವರ ಬದಲಾವಣೆಯ ಮೂಲಕ ಆರು ದಶಕಗಳ ಕಾಲ ಭಾರತೀಯ ಸಂಗೀತ ಲೋಕವನ್ನು ಆಳಿದ ಅಪರೂಪದ ಕಲಾವಿದೆಯಾಗಿದ್ದರು. ವಿಶ್ವದಾದ್ಯಂತದ ಅಭಿಮಾನಿಗಳು ಅವರನ್ನು ಪ್ರೀತಿಯಿಂದ ‘ಜಾನಕಿ ಅಮ್ಮ’ ಹಾಗೂ ‘ದಕ್ಷಿಣ ಭಾರತದ ಗಾನಕೋಗಿಲೆ’ ಎಂದು ಕರೆಯುತ್ತಿದ್ದರು.
ಕಾಲು ಜಾರಿ ಬಿದ್ದ ಬಳಿಕ ಆರೋಗ್ಯ ಹದಗೆಟ್ಟಿತ್ತು
ಇತ್ತೀಚೆಗೆ ಕಾಲು ಜಾರಿ ಬಿದ್ದು ಗಾಯಗೊಂಡಿದ್ದ ಎಸ್. ಜಾನಕಿ ಅವರು ವೀಲ್ಚೇರ್ನಲ್ಲೇ ಓಡಾಡುತ್ತಿದ್ದರು. ತಮ್ಮ ವೃತ್ತಿಜೀವನದಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ, ಪಿ.ಬಿ. ಶ್ರೀನಿವಾಸ್, ಡಾ. ರಾಜ್ಕುಮಾರ್ ಹಾಗೂ ಸಂಗೀತ ನಿರ್ದೇಶಕ ಇಳಯರಾಜ ಅವರೊಂದಿಗೆ ಅನೇಕ ಅಮರ ಗೀತೆಗಳನ್ನು ನೀಡಿದ್ದಾರೆ. ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ಡಾ. ರಾಜ್ಕುಮಾರ್ ಅವರ ಬಹುತೇಕ ಚಿತ್ರಗಳಲ್ಲಿ ಜಾನಕಿ ಅವರ ಧ್ವನಿ ಮೊಳಗಿತ್ತು.
20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳು
ಜಾನಕಿ ಅವರ ಕಂಠಕ್ಕೆ ಭಾಷೆಯ ಮಿತಿಯಿರಲಿಲ್ಲ. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಚಿತ್ರಗಳು, ಆಲ್ಬಮ್ಗಳು, ದೂರದರ್ಶನ ಹಾಗೂ ರೇಡಿಯೋ ಸೇರಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಅವರು ಹಾಡಿದ್ದಾರೆ.
ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಸಂಸ್ಕೃತ, ಒಡಿಯಾ, ತುಳು, ಉರ್ದು, ಪಂಜಾಬಿ, ಕೊಂಕಣಿ, ಬೆಂಗಾಲಿ ಸೇರಿದಂತೆ ಭಾರತದ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಹಾಡಿರುವ ಅವರು, ಇಂಗ್ಲಿಷ್, ಜಪಾನೀಸ್, ಜರ್ಮನ್ ಹಾಗೂ ಸಿಂಹಳ ಭಾಷೆಗಳಲ್ಲೂ ತಮ್ಮ ಧ್ವನಿ ನೀಡಿದ್ದಾರೆ.
ಕನ್ನಡದೊಂದಿಗೆ ಅವಿನಾಭಾವ ನಂಟು
ಆಂಧ್ರ ಪ್ರದೇಶ ಮೂಲದವರಾಗಿದ್ದರೂ, ಜಾನಕಿ ಅವರು ಅತಿ ಹೆಚ್ಚು ಹಾಡುಗಳನ್ನು ಹಾಡಿದ್ದು ಕನ್ನಡದಲ್ಲಿ. ಕನ್ನಡದ ಬಳಿಕ ಮಲಯಾಳಂ ಭಾಷೆಯಲ್ಲಿ ಹೆಚ್ಚು ಹಾಡಿದ್ದರು. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕರ್ ನಾಗ್ ಅವರಿಂದ ಹಿಡಿದು ಹೊಸ ತಲೆಮಾರಿನ ನಟಿಯರ ತನಕ ಅನೇಕ ಪಾತ್ರಗಳಿಗೆ ತಮ್ಮ ಧ್ವನಿಯ ಮೂಲಕ ಜೀವ ತುಂಬಿದ್ದರು.
19ನೇ ವಯಸ್ಸಿನಲ್ಲೇ ಆರಂಭವಾದ ಸಂಗೀತ ಪಯಣ
1957ರಲ್ಲಿ ತಮಿಳಿನ ‘ವಿಧಿಯಿನ್ ವಿಲೈಯಾಟ್ಟು’ ಚಿತ್ರದ ಮೂಲಕ ಕೇವಲ 19ನೇ ವಯಸ್ಸಿನಲ್ಲಿ ಹಿನ್ನೆಲೆ ಗಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ ಜಾನಕಿ, ಮೊದಲ ವರ್ಷದಲ್ಲೇ ಆರು ಭಾಷೆಗಳಲ್ಲಿ ಹಾಡುವ ಮೂಲಕ ತಮ್ಮ ಪ್ರತಿಭೆ ಸಾಬೀತುಪಡಿಸಿದ್ದರು. 2016ರಲ್ಲಿ ವೇದಿಕೆ ಕಾರ್ಯಕ್ರಮಗಳು ಮತ್ತು ಚಿತ್ರಗಾನದಿಂದ ನಿವೃತ್ತಿ ಘೋಷಿಸಿದ್ದ ಅವರು, ಅಭಿಮಾನಿಗಳ ಒತ್ತಾಯಕ್ಕೆ ಮಣಿದು 2018ರಲ್ಲಿ ತಮಿಳಿನ ‘ಪನ್ನಾಡಿ’ ಚಿತ್ರಕ್ಕಾಗಿ ಮತ್ತೊಮ್ಮೆ ಹಾಡಿದ್ದರು.
ಅಸಂಖ್ಯಾತ ಪ್ರಶಸ್ತಿಗಳ ಗೌರವ
ಎಸ್. ಜಾನಕಿ ಅವರಿಗೆ 4 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳಿಂದ 33ಕ್ಕೂ ಹೆಚ್ಚು ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಲಭಿಸಿದ್ದವು.
ಮೈಸೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿತ್ತು. ತಮಿಳುನಾಡು ಸರ್ಕಾರದ ‘ಕಲೈಮಾಮಣಿ’ ಹಾಗೂ ಕರ್ನಾಟಕ ಸರ್ಕಾರದ ‘ರಾಜ್ಯೋತ್ಸವ ಪ್ರಶಸ್ತಿ’ ಸೇರಿದಂತೆ ಅನೇಕ ಗೌರವಗಳು ಅವರ ಮುಡಿಗೇರಿದ್ದವು.
ಪದ್ಮಭೂಷಣ ತಿರಸ್ಕರಿಸಿದ್ದ ಸ್ವಾಭಿಮಾನಿ ಕಲಾವಿದೆ
2013ರಲ್ಲಿ ಕೇಂದ್ರ ಸರ್ಕಾರ ಘೋಷಿಸಿದ್ದ ‘ಪದ್ಮಭೂಷಣ’ ಪ್ರಶಸ್ತಿಯನ್ನು ಎಸ್. ಜಾನಕಿ ಅವರು ತಿರಸ್ಕರಿಸಿದ್ದರು. ದಕ್ಷಿಣ ಭಾರತದ ಕಲಾವಿದರಿಗೆ ಸಲ್ಲಬೇಕಾದ ಗೌರವ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಅವರು, ತಮ್ಮ ದೀರ್ಘ ಸಂಗೀತ ಸೇವೆಗೆ ಅತ್ಯುನ್ನತ ಗೌರವ ದೊರೆಯಬೇಕು ಎಂಬ ನಿಲುವು ವ್ಯಕ್ತಪಡಿಸಿದ್ದರು.
ಜಾನಕಿ ಅಮ್ಮ ಅವರು ಭೌತಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರು ಹಾಡಿರುವ ಸಾವಿರಾರು ಮಧುರ ಗೀತೆಗಳು ಸಂಗೀತ ಪ್ರೇಮಿಗಳ ಹೃದಯದಲ್ಲಿ ಎಂದೆಂದಿಗೂ ಜೀವಂತವಾಗಿರಲಿವೆ.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm