ಬ್ರೇಕಿಂಗ್ ನ್ಯೂಸ್
19-07-26 09:37 pm HK News Staffer ದೇಶ - ವಿದೇಶ
ತಿರುವನಂತಪುರಂ, ಜುಲೈ 19: ಫಿಫಾ ಫುಟ್ಬಾಲ್ ವಿಶ್ವಕಪ್ ಫೈನಲ್ ಕ್ರೇಜ್ ಕೇರಳದಲ್ಲಿ ಉತ್ತುಂಗಕ್ಕೇರಿದೆ. ಮಧ್ಯರಾತ್ರಿ 12.30ಕ್ಕೆ ಸ್ಪೇನ್ - ಅರ್ಜೆಂಟೀನಾ ಫೈನಲ್ ಪಂದ್ಯ ನಡೆಯುವುದರಿಂದ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಕೇರಳ ಸರ್ಕಾರ ಸೋಮವಾರ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ. ಮಧ್ಯರಾತ್ರಿ ಫುಟ್ಬಾಲ್ ಸಂಭ್ರಮಾಚರಣೆಗೆ ಅನುವಾಗುವಂತೆ ಸಿಎಂ ವಿಡಿ ಸತೀಶನ್ ಶಾಲೆ, ಕಾಲೇಜುಗಳಿಗೆ ರಜೆ ನೀಡಿದ್ದಾರೆ.
2026ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಭಾರೀ ಸಿದ್ಧತೆ ನಡೆದಿದ್ದು ಹಲವು ಕಡೆಗಳಲ್ಲಿ ದೊಡ್ಡ ಸ್ಕ್ರೀನ್ ಹಾಕಲಾಗಿದೆ. ಅರ್ಜೆಂಟೀನಾ ಮತ್ತು ಸ್ಪೇನ್ ನಡುವಿನ ಮಧ್ಯರಾತ್ರಿಯ ಫೈನಲ್ ಪಂದ್ಯವನ್ನು ವಿದ್ಯಾರ್ಥಿಗಳು ನೆಮ್ಮದಿಯಿಂದ ವೀಕ್ಷಿಸಲು ಸೋಮವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಭಾರತೀಯ ಕಾಲಮಾನ ನಡುರಾತ್ರಿ 12:30ಕ್ಕೆ ಪಂದ್ಯ ಆರಂಭವಾಗಲಿದ್ದು, ರಾತ್ರಿ ತಡವಾಗಿ ಪಂದ್ಯ ವೀಕ್ಷಿಸಿದ ಬಳಿಕ ಬೆಳಗ್ಗೆ ಶಾಲೆಗೆ ಹಾಜರಾಗುವುದು ಕಷ್ಟವಾಗುತ್ತದೆ ಎಂದು ವಿದ್ಯಾರ್ಥಿಗಳು ಸರ್ಕಾರಕ್ಕೆ ರಜೆ ನೀಡುವಂತೆ ಜಾಲತಾಣದಲ್ಲಿ ಮನವಿ ಮಾಡಿದ್ದರು. ಈ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಶಿಕ್ಷಣ ಸಚಿವ ಎನ್. ಶಂಸುದ್ದೀನ್ ಸೋಷಿಯಲ್ ಮೀಡಿಯಾದಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ರಜೆ ನೀಡುವ ನಿರ್ಧಾರಕ್ಕೆ ರಾಜಕೀಯ ವಲಯದಿಂದಲೂ ಬೆಂಬಲ ವ್ಯಕ್ತವಾಗಿದೆ. ಮಾಜಿ ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ಕೂಡ ವಿದ್ಯಾರ್ಥಿಗಳ ಮನವಿಗೆ ಬೆಂಬಲ ಸೂಚಿಸಿ, ಕಳೆದುಹೋಗುವ ಶೈಕ್ಷಣಿಕ ದಿನವನ್ನು ಮತ್ತೊಂದು ದಿನ ಕೆಲಸದ ದಿನವನ್ನಾಗಿ ಮಾಡಿ ಸರಿದೂಗಿಸಬಹುದು ಎಂದು ಸಲಹೆ ನೀಡಿದ್ದಾರೆ. ವಿರೋಧ ಪಕ್ಷದ ಎಲ್ ಡಿಎಫ್ ನಾಯಕರು ಕೂಡ ರಜೆ ಘೋಷಣೆಯನ್ನು ಬೆಂಬಲಿಸಿದ್ದಾರೆ.
ಕೇರಳ ರಾಜ್ಯವಷ್ಟೇ ಅಲ್ಲದೆ ಮೇಘಾಲಯ ಸರ್ಕಾರ ಕೂಡ ಫಿಫಾ ವಿಶ್ವಕಪ್ ಫೈನಲ್ಗಾಗಿ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ನೀಡಿದೆ. ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಅವರು ಜುಲೈ 20ರಂದು ರಾಜ್ಯದ ಎಲ್ಲಾ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಮಧ್ಯರಾತ್ರಿ ನಡೆಯಲಿರುವ ಫೈನಲ್ ಪಂದ್ಯವನ್ನು ವಿದ್ಯಾರ್ಥಿಗಳು ಯಾವುದೇ ಒತ್ತಡವಿಲ್ಲದೆ ವೀಕ್ಷಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
20-07-26 04:41 pm
HK News Staffer
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm