ಬ್ರೇಕಿಂಗ್ ನ್ಯೂಸ್
20-07-26 02:22 pm HK News Staffer ದೇಶ - ವಿದೇಶ
ನವದೆಹಲಿ, ಜುಲೈ 20: ನೀಟ್ ಪರೀಕ್ಷಾ ಅಕ್ರಮ ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿಯಿಂದ ಹಮ್ಮಿಕೊಂಡಿರುವ ಸಂಸದ್ ಚಲೋ ಹೋರಾಟಕ್ಕೆ ಭಾರೀ ಸಂಖ್ಯೆಯಲ್ಲಿ ಜೆನ್ ಜೀ ವಿದ್ಯಾರ್ಥಿಗಳು ಸಾಥ್ ನೀಡಿದ್ದು ದೆಹಲಿಯ ಜಂತರ್ ಮಂತರ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆಗೆ ಜಮಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಂಸತ್ ಚಲೋಗೆ ಮುಂದಾದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಆರಂಭದ ನಡುವೆಯೇ ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ ಪ್ರತಿಭಟನೆ ತೀವ್ರಗೊಂಡಿದ್ದು ವಿಪಕ್ಷ ನಾಯಕರು ಧರಣಿಗೆ ಬೆಂಬಲ ನೀಡಿದ್ದಾರೆ. ಟಿಎಂಸಿ ಸಂಸದೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಹಾಗೂ ಸಂಸದ ಚಂದ್ರಶೇಖರ್ ಆಝಾದ್ ಅವರು ಸ್ಥಳಕ್ಕೆ ಬಂದು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.
ಇದೇ ವೇಳೆ, ಸಿಜೆಪಿ ಪ್ರತಿಭಟನೆ ತೀವ್ರಗೊಳ್ಳುತ್ತಿರುವುದರಿಂದ ಕೇಂದ್ರ ಸರ್ಕಾರ ಕಡೆಗೂ ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಲು ಮುಂದಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಜೆಪಿ ನಡ್ಡಾ ಸಿಜೆಪಿ ಪ್ರತಿನಿಧಿಗಳ ಜೊತೆಗೆ ಮಾತುಕತೆ ನಡೆಸಲಿದ್ದಾರೆಂದು ಸಿಜೆಪಿ ವಕ್ತಾರರು ಮಾಹಿತಿ ನೀಡಿದ್ದಾರೆ. 22 ದಿನಗಳ ನಿರಶನ ಬಳಿಕ ಸಂಸದ್ ಚಲೋಗೆ ಭಾರೀ ಸಂಖ್ಯೆಯಲ್ಲಿ ಯುವ ಜನರು ಬೀದಿಗಿಳಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮೆತ್ತಗಾಗಿದೆ. ಯುವ ಜನರ ಆಕ್ರೋಶ ಇಡೀ ದೇಶ ಹಬ್ಬುವ ಮೊದಲು ಪ್ರತಿಭಟನೆ ಹಿಂಪಡೆಯುವಂತೆ ಮನವೊಲಿಸಲು ಮುಂದಾಗಿದೆ.


ಇದೇ ವೇಳೆ, ಪ್ರತಿಭಟನಾಕಾರರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕುತ್ತಿದ್ದಾರೆ. ದೇಶದ ಪ್ರಮುಖ ಪರೀಕ್ಷಾ ವ್ಯವಸ್ಥೆಯಲ್ಲಾಗಿರುವ ಲೋಪಗಳಿಗೆ ಧರ್ಮೇಂದ್ರ ಪ್ರಧಾನ್ ಅವರೇ ಕಾರಣವೆಂದು ಪ್ರತಿಭಟನೆ ಮೂಲಕ ಬಿಂಬಿತ ಆಗುತ್ತಿರುವುದರಿಂದ ಕೇಂದ್ರ ಸರ್ಕಾರಕ್ಕೆ ಇರಿಸುಮುರಿಸು ಎದುರಾಗಿದೆ. ಸ್ಥಳದಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಜಂತರ್ ಮಂತರ್ನಲ್ಲಿನ ಪ್ರತಿಭಟನಾ ಸ್ಥಳದಲ್ಲಿ ಶಬಾನಾ ಅಜ್ಮಿ ಸೇರಿದಂತೆ ಅನೇಕ ರಾಜಕೀಯ ನಾಯಕರು, ನಟರು, ಹೋರಾಟಗಾರರು ಹಾಗೂ ಸಂಘಟನೆಗಳ ಮುಖಂಡರು ಆಗಮಿಸಿದ್ದಾರೆ.
ಸಂಸತ್ ಚಲೋಗೆ ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು ಆರ್ಪಿಎಫ್ ಸಿಬ್ಬಂದಿ ನಡುವೆ ಸಂಘರ್ಷ ಉಂಟಾಗಿದೆ. ಈ ಸಂದರ್ಭದಲ್ಲಿ ಗುಂಪನ್ನು ನಿಯಂತ್ರಿಸಲು ಆರ್ಪಿಎಫ್ ಸಿಬ್ಬಂದಿ ಮತ್ತು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm