ಬ್ರೇಕಿಂಗ್ ನ್ಯೂಸ್
23-07-26 06:26 pm HK News Desk ದೇಶ - ವಿದೇಶ
ಮುಂಬೈ, ಜುಲೈ 23: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತೆ ಪ್ರತಿಭಟನೆಯಲ್ಲಿ ಭಾಗವಹಿಸಿದರೆ ಅವರ ವಿರುದ್ಧ ಸುಳ್ಳು ಡ್ರಗ್ಸ್ ಪ್ರಕರಣ ಹೂಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸರು ತನಿಖೆಗೆ ಆದೇಶಿಸಿದ್ದು, ಚಾಲಕನಾಗಿದ್ದ ಪೊಲೀಸ್ ಅಧಿಕಾರಿಯನ್ನು ಹಾಲಿ ಹುದ್ದೆಯಿಂದ ತೆರವುಗೊಳಿಸಿದ್ದಾರೆ.
ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ವೇಳೆ ಪೊಲೀಸ್ ವಾಹನದಲ್ಲಿದ್ದ ವಿದ್ಯಾರ್ಥಿಗಳಿಗೆ, "ಮತ್ತೆ ಪ್ರತಿಭಟನೆಗೆ ಬಂದರೆ ನಿಮ್ಮ ಜೇಬಿನಲ್ಲಿ 50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ದಾಖಲಿಸುತ್ತೇನೆ. ಜೀವನಪೂರ್ತಿ ಜೈಲಲ್ಲೇ ಇರಬೇಕಾಗುತ್ತದೆ, ಜಾಮೀನು ಕೂಡ ಸಿಗುವುದಿಲ್ಲ" ಎಂದು ಬೆದರಿಕೆ ಹಾಕಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು.
ಬೆದರಿಕೆ ಹಾಕಿದ ಪೊಲೀಸ್ ಸಿಬ್ಬಂದಿಯನ್ನು ಪವನ್ ಸಾಂಗ್ಲೆ ಎಂದು ಗುರುತಿಸಲಾಗಿದ್ದು, ಆತ ಮುಂಬೈ ಪೊಲೀಸ್ ಮೋಟಾರ್ ಟ್ರಾನ್ಸ್ಪೋರ್ಟ್ (MT) ವಿಭಾಗದಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಶಿವಾಜಿ ಪಾರ್ಕ್ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿರಿಯ ಅಧಿಕಾರಿಗಳಿಗೆ ಸಹಾಯ ಮಾಡಲು ಅವರನ್ನು ನಿಯೋಜಿಸಲಾಗಿತ್ತು.
ವಿಡಿಯೊ ವೈರಲ್ ಆಗಿ ಸಾರ್ವಜನಿಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ, ಮುಂಬೈ ಪೊಲೀಸರು ಪವನ್ ಸಾಂಗ್ಲೆಯನ್ನ ತಕ್ಷಣದಿಂದಲೇ ಅಮಾನತುಗೊಳಿಸಿದ್ದು, ಪ್ರಕರಣದ ಕುರಿತು ಇಲಾಖಾ ಮಟ್ಟದ ತನಿಖೆ ಆರಂಭಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಅವರನ್ನು ಪೊಲೀಸ್ ಕಂಟ್ರೋಲ್ ರೂಂಗೆ ವರ್ಗಾವಣೆ ಮಾಡಲಾಗಿದೆ.
ಇದಕ್ಕೂ ಮುನ್ನ, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಮುಂಬೈ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ವೇಳೆ ನೂರಾರು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೇ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯ ಬೆದರಿಕೆ ವಿಡಿಯೊ ಹೊರಬಿದ್ದಿದ್ದು, ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am