ಬ್ರೇಕಿಂಗ್ ನ್ಯೂಸ್
01-08-26 05:17 pm HK News Staffer ದೇಶ - ವಿದೇಶ
ನವದೆಹಲಿ, ಆಗಸ್ಟ್ 1: ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಕ್ಯಾನ್ಸರ್ಗೆ ಕಾರಣವಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಅಮೆರಿಕದಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿ ಕಂಪನಿಯು ಸುಮಾರು 53 ಸಾವಿರ ಕೋಟಿ ರೂ. (5.5 ಬಿಲಿಯನ್ ಡಾಲರ್) ಪರಿಹಾರ ನೀಡಲು ಒಪ್ಪಿಕೊಂಡಿದೆ. ಈ ಉತ್ಪನ್ನಗಳಿಂದಾಗಿ ಅಮೆರಿಕ ಒಂದರಲ್ಲೇ 76 ಸಾವಿರ ಮಕ್ಕಳು ಮತ್ತು ವಯಸ್ಕರು ಕ್ಯಾನ್ಸರ್ಗೆ ತುತ್ತಾಗಿದ್ದಾಗಿ ಪ್ರಕರಣ ದಾಖಲಾಗಿದ್ದು ಸುದೀರ್ಘ ವ್ಯಾಜ್ಯದ ಬಳಿಕ ಕಂಪನಿ ಸಂತ್ರಸ್ತರಿಗೆ ಪರಿಹಾರ ನೀಡಲು ಮುಂದಾಗಿದೆ.
ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಟಾಲ್ಕಂ ಪೌಡರ್ ಚಿಕ್ಕ ಮಕ್ಕಳಿಗೆ ಬಳಸುವುದಕ್ಕೆ ಇಡೀ ಜಗತ್ತಿನಲ್ಲಿ ಪ್ರಸಿದ್ಧಿ ಪಡೆದಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಈ ಕಂಪನಿಯ ಪೌಡರ್ ಬಗ್ಗೆ ಆರೋಪ ಕೇಳಿಬಂದಿದ್ದು ಕ್ಯಾನ್ಸರ್ ಗೆ ಕಾರಣವಾಗುತ್ತಿದೆ ಎನ್ನುವ ಗಂಭೀರ ಆರೋಪ ಅಮೆರಿಕದಲ್ಲಿ ಕೋರ್ಟ್ ಮೆಟ್ಟಿಲೇರಿತ್ತು. ಹಲವು ವರ್ಷಗಳ ವ್ಯಾಜ್ಯದ ಬಳಿಕ ಕಂಪನಿಯು ತನ್ನ ಮೇಲಿನ ಆರೋಪ ನಿರಾಕರಿಸುತ್ತಲೇ ಪರಿಹಾರಕ್ಕಾಗಿ ದೂರು ಸಲ್ಲಿಸಿರುವವರಿಗೆ ಪರಿಹಾರದ ಮೊತ್ತ ನೀಡಲು ಒಪ್ಪಿಗೆ ನೀಡಿರುವುದು ಮತ್ತೆ ಚರ್ಚೆಗೆ ಗ್ರಾಸವಾಗಿದೆ.
5.5 ಬಿಲಿಯನ್ ಡಾಲರ್ ಮೊತ್ತವನ್ನು 76 ಸಾವಿರ ಪ್ರಕರಣದಲ್ಲಿ ಸಂತ್ರಸ್ತರಿಗೆ ಹಂಚುವಂತೆ ಕಂಪನಿಯು ಕೋರ್ಟಿನಲ್ಲಿ ಕೇಳಿಕೊಂಡಿದೆ. ಆದಾಗ್ಯೂ ಕಂಪನಿಯ ಉಪಾಧ್ಯಕ್ಷ ಎರಿಕ್ ಹಾಸ್, ಆರೋಪಗಳೆಲ್ಲ ಆಧಾರ ರಹಿತ. ದೀರ್ಘ ಕಾಲದ ವ್ಯಾಜ್ಯವನ್ನು ಮುಗಿಸುವುದಕ್ಕಾಗಿ ಪರಿಹಾರ ಮೊತ್ತವನ್ನು ನೀಡಲು ಬಯಸಿದ್ದೇವೆ ಎಂದಿದ್ದಾರೆ. ಅಲ್ಲದೆ, ಇನ್ನೆರಡು ವರ್ಷದಲ್ಲಿ ಅಂದರೆ 2028ರ ಒಳಗೆ ಇನ್ನೂ ಮೂರು ಬಿಲಿಯನ್ ಡಾಲರ್ ನೀಡುವ ಮೂಲಕ ಎಲ್ಲ ವ್ಯಾಜ್ಯವನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಜಾನ್ಸನ್ ಬೇಬಿ ಪೌಡರ್ ವಿರುದ್ಧ 2009ರಿಂದ ಹಲವು ಕಡೆ ದೂರುಗಳು ದಾಖಲಾಗತೊಡಗಿದ್ದು 2022ರ ವೇಳೆಗೆ ಅಮೆರಿಕ ಸೇರಿದಂತೆ ಜಾಗತಿಕವಾಗಿ ಮಾರಾಟ ಮತ್ತು ಉತ್ಪಾದನೆಯನ್ನು ಸ್ಥಗಿತಗೊಳಿಸುವುದಾಗಿ ಹೇಳಿತ್ತು. ಒವೇರಿಯನ್ ಕ್ಯಾನ್ಸರ್ ಗೆ ಕಾರಣವಾಗುತ್ತಿರುವ ಬಗ್ಗೆ ಪ್ರಬಲ ಆಕ್ಷೇಪ ಕೇಳಿಬಂದ ಹಿನ್ನೆಲೆಯಲ್ಲಿ 2022ರಲ್ಲಿ ಕಂಪನಿಯ ವಿರುದ್ಧ ಕೋರ್ಟ್ ಚಾಟಿ ಬೀಸಿತ್ತು. ಇದಾಗಿ ಎರಡು ವರ್ಷಗಳ ಬಳಿಕ ದೊಡ್ಡ ಮೊತ್ತದ ಪರಿಹಾರ ನೀಡಿ ಆರೋಪದಿಂದ ಬಚಾವಾಗಲು ಮುಂದಾಗಿದೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm