ಬ್ರೇಕಿಂಗ್ ನ್ಯೂಸ್
08-01-21 04:24 pm Headline Karnataka News Network ದೇಶ - ವಿದೇಶ
ಕರಾಚಿ, ಜ.8: 26-11ರ ಮುಂಬೈ ದಾಳಿಯ ಮುಖ್ಯ ಸಂಚುಕೋರ, ಲಷ್ಕರ್ ಇ- ತೊಯ್ಬಾದ ಉಗ್ರವಾದಿ ಸಂಘಟನೆಯ ಮುಖ್ಯಸ್ಥ ಜಕೀವುರ್ ರೆಹ್ಮಾನ್ ಲಖ್ವಿಗೆ ಪಾಕಿಸ್ತಾನದ ಭಯೋತ್ಪಾದಕ ವಿರೋಧಿ ನ್ಯಾಯಾಲಯ 15 ವರ್ಷಗಳ ಶಿಕ್ಷೆ ಘೋಷಿಸಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
2015ರಲ್ಲಿ ಬಂಧಿತನಾಗಿ ಜಾಮೀನು ಮೇಲೆ ಹೊರಗಡೆ ತಿರುಗಾಡಿಕೊಂಡಿದ್ದ ಲಖ್ವಿಯನ್ನು ಆರು ದಿನಗಳ ಹಿಂದೆ ಪಂಜಾಬ್ ಪ್ರಾಂತದ ಭಯೋತ್ಪಾದನಾ ವಿರೋಧಿ ಘಟಕ (ಸಿಟಿಡಿ) ಬಂಧಿಸಿತ್ತು. ಭಯೋತ್ಪಾದನಾ ಸಂಘಟನೆಗಳಿಗೆ ಹಣದ ನೆರವು ನೀಡುತ್ತಿದ್ದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದರು.

2015ರಲ್ಲಿ ರಾವಲ್ಪಿಂಡಿ ಜೈಲಿನಿಂದ ಬಿಡುಗಡೆಯಾದ ಬಳಿಕ ಲಖ್ವಿ ಲಷ್ಕರ್ ಇ- ತೊಯ್ಬಾ ಸಂಖಘಟನೆ ಪ್ರಮುಖನಾಗಿ ಗುರುತಿಸಿಕೊಂಡಿದ್ದ. ಅಲ್ಲದೆ, ಫಂಡ್ ರೈಸಿಂಗ್ ಮಾಡುವುದಕ್ಕಾಗಿ ತನ್ನ ಸಹಚರರ ಮೂಲಕ ಡಿಸ್ಪೆನ್ಸರಿ ನಡೆಸುತ್ತಿದ್ದ. ಡಿಸ್ಪೆನ್ಸರಿ ಹೆಸರಲ್ಲಿ ಹಣ ಸಂಗ್ರಹಿಸುತ್ತಿದ್ದು, ಅಲ್ಲಿಂದಲೇ ಲಷ್ಕರ್ ಸಂಘಟನೆಯ ಕೆಲಸಗಳಿಗೆ ಬಳಸುತ್ತಿದ್ದ ಎಂದು ಕಳೆದ ವಾರದ ಬಂಧಿಸಿದ ವೇಳೆ ಕೌಂಟರ್ ಟೆರರಿಸಮ್ ಡಿಪಾರ್ಟ್ಮೆಂಟ್ ಪೊಲೀಸರು ಹೇಳಿಕೆ ನೀಡಿದ್ದರು.
2008ರಲ್ಲಿ ವಿಶ್ವಸಂಸ್ಥೆ ಕೂಡ ಲಖ್ವಿಯನ್ನು ಗ್ಲೋಬಲ್ ಟೆರರಿಸ್ಟ್ ಎಂದು ಘೋಷಣೆ ಮಾಡಿತ್ತು. ಅಲ್ ಖೈದಾ ಮತ್ತು ಲಷ್ಕರ್ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಬಗ್ಗೆ ಉಲ್ಲೇಖಿಸಿದ್ದಲ್ಲದೆ, ಬೇನಾಮಿ ಹೆಸರಲ್ಲಿ ಹಣಕಾಸು ವ್ಯವಸ್ಥೆ, ವಿಧ್ವಂಸಕ ಕೃತ್ಯಗಳಿಗೆ ಯೋಜನೆ ರೂಪಿಸುವುದು, ಸೌಲಭ್ಯ ಒದಗಿಸುವುದು, ಸಂಚು ರೂಪಿಸುತ್ತಿದ್ದ ಎಂಬುದನ್ನು ಆಗಲೇ ಪತ್ತೆ ಮಾಡಿತ್ತು.
A Pakistan court has sentenced Zaki-ur-Rehman Lakhvi, the operational commander of the Lashkar-e-Tayiba to 15 years in jail and also ordered him to pay a fine.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am