ಬ್ರೇಕಿಂಗ್ ನ್ಯೂಸ್
08-01-21 05:12 pm Headline Karnataka News Network ದೇಶ - ವಿದೇಶ
ದುಬೈ, ಜ.8 : ಕುಂದಾಪುರ ಮೂಲದ ದುಬೈ ಉದ್ಯಮಿ, ಫಾರ್ಚೂನ್ ಗ್ರೂಪ್ ಆಫ್ ಹೊಟೇಲ್ಸ್ ಮಾಲೀಕ ವಕ್ವಾಡಿ ಪ್ರವೀಣ್ ಶೆಟ್ಟಿ ಅವರಿಗೆ ದುಬೈನಲ್ಲಿ ಕೊರೊನಾ ಸಂದರ್ಭದಲ್ಲಿ ಸಲ್ಲಿಸಿರುವ ಅಪೂರ್ವ ಸೇವೆಗಾಗಿ ಅಲ್ಲಿನ ಸರಕಾರ ಹತ್ತು ವರ್ಷಗಳ ಅವಧಿಗೆ ಗೋಲ್ಡನ್ ವೀಸಾ ನೀಡಿ ಗೌರವಿಸಿದೆ.
ದುಬೈನಲ್ಲಿ ಫಾರ್ಚೂನ್ ಸಮೂಹದ ಏಳು ಹೊಟೇಲ್ ಗಳು ಕಾರ್ಯಾಚರಿಸುತ್ತಿದೆ. ಈ ನಡುವೆ, ಕಳೆದ ಅಕ್ಟೋಬರ್ ತಿಂಗಳಲ್ಲಿ ಮತ್ತೊಂದು ಫೋರ್ ಸ್ಟಾರ್ ಹೊಟೇಲ್ ಒಂದನ್ನು ಆರಂಭಿಸಲಾಗಿದೆ. ಈ ಹೊಟೇಲಿಗೆ ದುಬೈ ಸರಕಾರದ ಟೂರಿಸಂ ಇಲಾಖೆಯ (ಡೈರೆಕ್ಟರ್ ಜರ್ನಲ್ ಆಫ್ ಡಿಟಿಸಿಎಂ) ಡಿಜಿಎಂ ಹೆಲಾಲ್ ಸಯೀದ್ ಅಲ್ ಮರ್ರಿ ಭೇಟಿ ನೀಡಿದ್ದು, ಹೊಟೇಲ್ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಭಾರತೀಯ ಮೂಲದವರ ಸ್ಟಾರ್ ಹೊಟೇಲ್ ಗಳಿಗೆ ಅಲ್ಲಿನ ಶೇಖ್ ಗಳು ಭೇಟಿಗೆ ಬರುವುದಿಲ್ಲ. ಆದರೆ, ಕೊರೊನಾ ಬಿಕ್ಕಟ್ಟಿನ ಮಧ್ಯೆ ಸ್ಟಾರ್ ಹೊಟೇಲ್ ಆರಂಭಿಸಿ, ಸಾವಿರಾರು ಜನರಿಗೆ ಉದ್ಯೋಗ ನೀಡಿದ ವಿಚಾರದಲ್ಲಿ ಅಲ್ಲಿನ ಸರಕಾರದಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಇದಕ್ಕಾಗಿ ಹೊಟೇಲಿಗೆ ಆಗಮಿಸಿ, ಎಲ್ಲ ವ್ಯವಸ್ಥೆಗಳನ್ನು ನೋಡಿದ್ದಲ್ಲದೆ, ಮಾಲೀಕ ಪ್ರವೀಣ್ ಶೆಟ್ಟಿ ಅವರಿಗೆ ಅಪೂರ್ವ ಉಡುಗೊರೆ ನೀಡಿದ್ದಾರೆ.
ಕೊರೊನಾದಂತಹ ಸವಾಲಿನ ನಡುವೆಯೇ ಇಂತಹದ್ದೊಂದು ಭವ್ಯವಾದ ಹೊಟೇಲ್ ನಿರ್ಮಾಣ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಸಯೀದ್ ಅಲ್ ಮರ್ರಿ, ದುಬೈಯಲ್ಲಿ ಯಾವುದೇ ಸಹಕಾರ ಬೇಕಾದರೂ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಇದರ ಜೊತೆಗೆ ಫಾರ್ಚೂನ್ ಗ್ರೂಪ್ ಸಂಸ್ಥೆಯ ಪ್ರತಿಯೊಬ್ಬರಿಗೂ ಉಚಿತ ಕೋವಿಡ್ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅವರ ಸಹಕಾರಕ್ಕೆ ಆಭಾರಿಯಾಗಿದ್ದೇವೆ ಎಂಬುದಾಗಿ ದುಬೈನಲ್ಲಿರುವ ಫಾರ್ಚೂನ್ ಫ್ಲಾಜಾ ಹೊಟೇಲ್ ಮ್ಯಾನೇಜರ್ ಹರೀಶ್ ಶೆಟ್ಟಿ 'ಹೆಡ್ ಲೈನ್ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.
NRI entrepreneur Praveen Kumar Shetty of Fortune Groups of hotel receives 10-year golden visa from Dubai govt by his Excellency Helal Saeed Al Marri the Director-General of DTCM, Dubai
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm