ಬ್ರೇಕಿಂಗ್ ನ್ಯೂಸ್
09-01-21 11:52 am Headline Karnataka News Network ದೇಶ - ವಿದೇಶ
ಸ್ಯಾನ್ಫ್ರಾನ್ಸಿಸ್ಕೊ, ಜ.8: ಅಮೆರಿಕದ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಟ್ರಂಪ್ ಮತ್ತಷ್ಟು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ಆಗಿ ರದ್ದುಪಡಿಸಿರುವುದಾಗಿ ಟ್ವಿಟ್ಟರ್ ಪ್ರಕಟಿಸಿದೆ.
"@ರಿಯಲ್ಡೊನಾಲ್ಡ್ಟ್ರಂಪ್ ಖಾತೆಯ ಇತ್ತೀಚಿನ ಟ್ವೀಟ್ಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ, ಮತ್ತಷ್ಟು ಹಿಂಸೆಗೆ ಕುಮ್ಮಕ್ಕು ನೀಡುವ ಸಾಧ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ನಾವು ಶಾಶ್ವತವಾಗಿ ಈ ಖಾತೆಯನ್ನು ರದ್ದುಪಡಿಸುತ್ತಿದ್ದೇವೆ" ಎಂದು ಟ್ವಿಟ್ಟರ್ ಹೇಳಿಕೆ ನೀಡಿದೆ.

ಬುಧವಾರ ಅಮೆರಿಕ ಸಂಸತ್ತಿನ ಮೇಲೆ ಟ್ರಂಪ್ ಬೆಂಬಲಿಗರು ದಾಳಿ ನಡೆಸಿದ ಬೆನ್ನಲ್ಲೇ 12 ಗಂಟೆ ಕಾಲ ಟ್ರಂಪ್ ಅವರ ಅತ್ಯಂತ ಪ್ರಿಯವಾದ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿತ್ತು. ಜತೆಗೆ ನಿಯಮಾವಳಿಯನ್ನು ಉಲ್ಲಂಘಿಸಿದರೆ ಶಾಶ್ವತವಾಗಿ ರದ್ದುಪಡಿಸುವು ದಾಗಿ ಎಚ್ಚರಿಸಲಾಗಿತ್ತು.
ಗುರುವಾರ ಮತ್ತೆ ಸಕ್ರಿಯರಾಗಿದ್ದ ಟ್ರಂಪ್, ತಮ್ಮ ಬೆಂಬಲಿಗರಿಂದ ನಡೆದ ದಾಳಿಯ ಬಳಿಕದ ಉದ್ವಿಗ್ನ ಪರಿಸ್ಥಿತಿಯ ಕುರಿತ ವೀಡಿಯೊ ಪೋಸ್ಟ್ ಮಾಡಿದ್ದರು. ತಮ್ಮ ಅಧ್ಯಕ್ಷಾವಧಿ ಮುಕ್ತಾಯವಾಗುತ್ತಿದೆ. ಜೋ ಬೈಡನ್ ಅವರಿಗೆ ಸುಲಲಿತವಾಗಿ ಅಧಿಕಾರ ವರ್ಗಾಯಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದರು. ಆದರೆ ಬೈಡನ್ ಅವರನ್ನು ಅಭಿನಂದಿಸಿಲ್ಲ ಅಥವಾ ಅವರ ಉತ್ತರಾಧಿಕಾರಿಯ ಹೆಸರನ್ನೂ ಎಲ್ಲೂ ಉಲ್ಲೇಖಿಸಿಲ್ಲ.

ಮುಂದಿನ ಕ್ರಮಕ್ಕಾಗಿ ಟ್ರಂಪ್ ಅವರ ಸಾಮಾಜಿಕ ಜಾಲತಾಣ ಚಟುವಟಿಕೆಗಳ ಮೇಲೆ ನಿಗಾ ಇಡಲಾಗುವುದು ಎಂದು ಟ್ವಿಟ್ಟರ್ ಹೇಳಿಕೆ ನೀಡಿದೆ.
Twitter Inc said on Friday that it has permanently suspended US President Donald Trump’s account due to the risk of further incitement of violence following the storming of the US Capitol on Wednesday by hundreds of his supporters.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm