ಬ್ರೇಕಿಂಗ್ ನ್ಯೂಸ್
13-08-20 06:31 am Headline Karnataka News Network ದೇಶ - ವಿದೇಶ
ಮುಂಬಯಿ, ಆಗಸ್ಟ್ 13: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ದಿನ ಹೋದಂತೆ ಜಟಿಲವಾಗುತ್ತಿದೆ. ಅಲ್ಲದೆ, ಇದರಲ್ಲಿ ರಾಜ ಕೀಯವೂ ಬೆರೆತಿರುವುದು ಇನ್ನಷ್ಟು ಗೊಂದಲಗಳನ್ನು ಮೂಡಿಸುತ್ತಿದೆ. ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿರುವ ನಡುವೆಯೇ ಸುಶಾಂತ್ ಕುಟುಂಬವು ಬುಧವಾರ 9 ಪುಟಗಳ ಪತ್ರ ಬಿಡುಗಡೆ ಮಾಡಿದ್ದು, ಸುಶಾಂತ್ರದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದೆ. ಜತೆಗೆ, ಅವರ ಸಾವಿಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದೂ ಕಿಡಿಕಾರಲಾಗಿದೆ.
ಸುಶಾಂತ್ರ ಬಾಲ್ಯದಿಂದ ಹಿಡಿದು ಕನಸಿನ ನಗರಿ ಮುಂಬಯಿಗೆ ತೆರಳಿ, ಬದುಕನ್ನು ಅಂತ್ಯಗೊಳಿಸುವವರೆಗೆ ಎಲ್ಲ ಮಾಹಿತಿಗಳನ್ನೂ ಆ ಪತ್ರದಲ್ಲಿ ವಿವರಿಸಲಾಗಿದೆ. ಜತೆಗೆ, ತಮ್ಮ ಕುಟುಂಬಕ್ಕೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ, ಮುಂಬಯಿ ಪೊಲೀಸರು ತನಿಖೆಯಲ್ಲಿ ವಹಿಸಿದ ನಿರ್ಲಕ್ಷ್ಯದ ಕುರಿತೂ ಉಲ್ಲೇಖೀಸಲಾಗಿದೆ. ಅಲ್ಲದೆ, ರಿಯಾ ಮತ್ತವರ ಕುಟುಂಬ ಸದಸ್ಯರ ವಿರುದ್ಧವೂ ಕಿಡಿಕಾರಲಾಗಿದೆ.
ರಾವತ್ಗೆ ನೋಟಿಸ್ ಜಾರಿ: ಬಿಹಾರ ಶಾಸಕ ನೀರಜ್ ಕುಮಾರ್ ಬಬ್ಲು ಶಿವಸೇನೆ ಸಂಸದ ಸಂಜಯ್ ರಾವತ್ಗೆ ಕಾನೂನು ನೋಟಿಸ್ ಜಾರಿ ಮಾಡಿದ್ದಾರೆ. ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಸಾವಿನ ಕುರಿತು ಬರೆದಿದ್ದ ಲೇಖನದಲ್ಲಿ ರಾವತ್ ಆಕ್ಷೇಪಾರ್ಹವಾಗಿ ಬರೆದಿದ್ದರು ಎಂದು ಆರೋಪಿಸಲಾಗಿದೆ.
ಸಾವಿನ ನಂತರ ಫೇಮಸ್ ಆದರು!
ಸುಶಾಂತ್ ಸಾವಿಗೆ ಸಂಬಂಧಿಸಿ ರಾಜಕಾರಣಿಗಳ ಲೂಸ್ಟಾಕ್ ಮುಂದುವರಿದಿದೆ. ಸುಶಾಂತ್ ಅವರು ಸಾವಿನ ನಂತರ ಫೇಮಸ್ ಆದಷ್ಟು ಸಾವಿಗೂ ಮುನ್ನ ಆಗಿರಲಿಲ್ಲ ಎಂದು ಎನ್ಸಿಪಿ ನಾಯಕ ಮಜೀದ್ ಮೆಮನ್ ಬುಧವಾರ ಹೇಳಿದ್ದಾರೆ. ಈ ಹೇಳಿಕೆ ವಿವಾದಕ್ಕೆ ತಿರುಗುತ್ತಿದ್ದಂತೆ, ಅವರ ಹೇಳಿಕೆಯಿಂದ ಪಕ್ಷ ದೂರ ಉಳಿದಿದೆ. ಇದು ಮೆಮನ್ ಅವರ ವೈಯಕ್ತಿಕ ಹೇಳಿಕೆಯಾ ಗಿದೆಯೇ ವಿನಾ ಪಕ್ಷದ್ದಲ್ಲ ಎಂದು ಎನ್ಸಿಪಿ ಸ್ಪಷ್ಟಪಡಿಸಿದೆ. ಜತೆಗೆ, ಮೆಮನ್ ಅವರೂ ಸ್ಪಷ್ಟನೆ ನೀಡಿ, ಸುಶಾಂತ್ರನ್ನು ಅವಮಾನಿಸುವ ಉದ್ದೇಶ ಇರಲಿಲ್ಲ ಎಂದಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm