ಬ್ರೇಕಿಂಗ್ ನ್ಯೂಸ್
13-08-20 06:31 am Headline Karnataka News Network ದೇಶ - ವಿದೇಶ
ಮುಂಬಯಿ, ಆಗಸ್ಟ್ 13: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ದಿನ ಹೋದಂತೆ ಜಟಿಲವಾಗುತ್ತಿದೆ. ಅಲ್ಲದೆ, ಇದರಲ್ಲಿ ರಾಜ ಕೀಯವೂ ಬೆರೆತಿರುವುದು ಇನ್ನಷ್ಟು ಗೊಂದಲಗಳನ್ನು ಮೂಡಿಸುತ್ತಿದೆ. ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿರುವ ನಡುವೆಯೇ ಸುಶಾಂತ್ ಕುಟುಂಬವು ಬುಧವಾರ 9 ಪುಟಗಳ ಪತ್ರ ಬಿಡುಗಡೆ ಮಾಡಿದ್ದು, ಸುಶಾಂತ್ರದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದೆ. ಜತೆಗೆ, ಅವರ ಸಾವಿಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದೂ ಕಿಡಿಕಾರಲಾಗಿದೆ.
ಸುಶಾಂತ್ರ ಬಾಲ್ಯದಿಂದ ಹಿಡಿದು ಕನಸಿನ ನಗರಿ ಮುಂಬಯಿಗೆ ತೆರಳಿ, ಬದುಕನ್ನು ಅಂತ್ಯಗೊಳಿಸುವವರೆಗೆ ಎಲ್ಲ ಮಾಹಿತಿಗಳನ್ನೂ ಆ ಪತ್ರದಲ್ಲಿ ವಿವರಿಸಲಾಗಿದೆ. ಜತೆಗೆ, ತಮ್ಮ ಕುಟುಂಬಕ್ಕೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ, ಮುಂಬಯಿ ಪೊಲೀಸರು ತನಿಖೆಯಲ್ಲಿ ವಹಿಸಿದ ನಿರ್ಲಕ್ಷ್ಯದ ಕುರಿತೂ ಉಲ್ಲೇಖೀಸಲಾಗಿದೆ. ಅಲ್ಲದೆ, ರಿಯಾ ಮತ್ತವರ ಕುಟುಂಬ ಸದಸ್ಯರ ವಿರುದ್ಧವೂ ಕಿಡಿಕಾರಲಾಗಿದೆ.
ರಾವತ್ಗೆ ನೋಟಿಸ್ ಜಾರಿ: ಬಿಹಾರ ಶಾಸಕ ನೀರಜ್ ಕುಮಾರ್ ಬಬ್ಲು ಶಿವಸೇನೆ ಸಂಸದ ಸಂಜಯ್ ರಾವತ್ಗೆ ಕಾನೂನು ನೋಟಿಸ್ ಜಾರಿ ಮಾಡಿದ್ದಾರೆ. ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಸಾವಿನ ಕುರಿತು ಬರೆದಿದ್ದ ಲೇಖನದಲ್ಲಿ ರಾವತ್ ಆಕ್ಷೇಪಾರ್ಹವಾಗಿ ಬರೆದಿದ್ದರು ಎಂದು ಆರೋಪಿಸಲಾಗಿದೆ.
ಸಾವಿನ ನಂತರ ಫೇಮಸ್ ಆದರು!
ಸುಶಾಂತ್ ಸಾವಿಗೆ ಸಂಬಂಧಿಸಿ ರಾಜಕಾರಣಿಗಳ ಲೂಸ್ಟಾಕ್ ಮುಂದುವರಿದಿದೆ. ಸುಶಾಂತ್ ಅವರು ಸಾವಿನ ನಂತರ ಫೇಮಸ್ ಆದಷ್ಟು ಸಾವಿಗೂ ಮುನ್ನ ಆಗಿರಲಿಲ್ಲ ಎಂದು ಎನ್ಸಿಪಿ ನಾಯಕ ಮಜೀದ್ ಮೆಮನ್ ಬುಧವಾರ ಹೇಳಿದ್ದಾರೆ. ಈ ಹೇಳಿಕೆ ವಿವಾದಕ್ಕೆ ತಿರುಗುತ್ತಿದ್ದಂತೆ, ಅವರ ಹೇಳಿಕೆಯಿಂದ ಪಕ್ಷ ದೂರ ಉಳಿದಿದೆ. ಇದು ಮೆಮನ್ ಅವರ ವೈಯಕ್ತಿಕ ಹೇಳಿಕೆಯಾ ಗಿದೆಯೇ ವಿನಾ ಪಕ್ಷದ್ದಲ್ಲ ಎಂದು ಎನ್ಸಿಪಿ ಸ್ಪಷ್ಟಪಡಿಸಿದೆ. ಜತೆಗೆ, ಮೆಮನ್ ಅವರೂ ಸ್ಪಷ್ಟನೆ ನೀಡಿ, ಸುಶಾಂತ್ರನ್ನು ಅವಮಾನಿಸುವ ಉದ್ದೇಶ ಇರಲಿಲ್ಲ ಎಂದಿದ್ದಾರೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm