ಬ್ರೇಕಿಂಗ್ ನ್ಯೂಸ್
31-07-20 11:49 am Headline Karnataka News Network ದೇಶ - ವಿದೇಶ
ನವದೆಹಲಿ(ಜು.30): ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋನಿಯಾ ಗಾಂಧಿಯವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಿ.ಎಸ್.ರಾಣಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಇಂದು ಸಂಜೆ 7 ಗಂಟೆ ಸಮಯದಲ್ಲಿ ಸೋನಿಯಾ ಗಾಂಧಿ ಅಸ್ವಸ್ಥರಾಗಿದ್ದು, ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗಾಗಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸುದ್ದಿ ಸಂಸ್ಥೆಗಳ ಪ್ರಕಾರ, ರೊಟೀನ್ ಚೆಕ್-ಅಪ್ಗಾಗಿ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಸೋನಿಯಾ ಅವರಿಗೆ ಕೆಲವು ತಪಾಸಣೆಗಳನ್ನು ಮಾಡಬೇಕಿದ್ದು, ಈ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಅಂದರೆ ಫೆಬ್ರವರಿ ತಿಂಗಳಿನಲ್ಲಿಯೂ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಆಗಲೂ ಸಹ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಮಂಡನೆಯಾಗಿದ್ದ ಕೇಂದ್ರ ಬಜೆಟ್ಗೂ ಸೋನಿಯಾ ಗಾಂಧಿ ಗೈರಾಗಿದ್ದರು.
ಕಳೆದ ವರ್ಷ ಸೋನಿಯಾ ಗಾಂಧಿ ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದರು. 2017 ಫೆಬ್ರವರಿಯಲ್ಲಿ ಕಲುಷಿತ ಆಹಾರ ಸೇವನೆ ಮತ್ತು 2018ರಲ್ಲಿ ಉಸಿರಾಟದ ಸಮಸ್ಯೆ ಕಾರಣಕ್ಕೆ ಸೋನಿಯಾ ಗಾಂಧಿ ಅವರನ್ನು ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ. ಡಿ.ಎಸ್. ರಾಣಾ ಅವರು ಆ ವೇಳೆ ತಪಾಸಣೆ ನಡೆಸಿ ಸೋನಿಯಾ ಅವರು ಅಸ್ತಮಾದಿಂದ ಬಳಲುತ್ತಿದ್ದಾರೆ ಎಂದಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm