ಬ್ರೇಕಿಂಗ್ ನ್ಯೂಸ್
19-01-21 03:47 pm Headline Karnataka News Network ದೇಶ - ವಿದೇಶ
ಸೂರತ್, ಜ.19 : ರಸ್ತೆ ಬದಿಯ ಫುಟ್ಪಾತ್ ನಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ 15 ಮಂದಿ ಕಾರ್ಮಿಕರು ದಾರುಣ ಸಾವು ಕಂಡ ಘಟನೆ ಗುಜರಾತ್ನಲ್ಲಿ ನಡೆದಿದೆ.


ಮೃತರು ರಾಜಸ್ಥಾನದಿಂದ ಬಂದಿದ್ದ ವಲಸೆ ಕಾರ್ಮಿಕರಾಗಿದ್ದು ಸೋಮವಾರ ರಾತ್ರಿ ಸೂರತ್ ನಗರದಿಂದ 60 ಕಿಮೀ ದೂರದಲ್ಲಿರುವ ಕೋಸಂಬಾ ಗ್ರಾಮದಲ್ಲಿ ಘಟನೆ ನಡೆದಿದೆ. ಸೂರತ್ - ಮಾಂಡವಿ ರಸ್ತೆಯ ಬದಿ ಫುಟ್ ಪಾತ್ ನಲ್ಲಿ ಕಾರ್ಮಿಕರು ಮಲಗಿದ್ದರು. ಟ್ರ್ಯಾಕ್ಟರ್ಗೆ ಡಿಕ್ಕಿಯಾದ ಟ್ರಕ್, ಚಾಲಕನ ನಿಯಂತ್ರಣಕ್ಕೆ ಸಿಗದೆ ಕಾರ್ಮಿಕರು ಮಲಗಿದ್ದ ಫುಟ್ಪಾತ್ ಮೇಲಿನಿಂದ ಸಾಗಿದೆ. ಅಲ್ಲಿ ಮಲಗಿದ್ದವರ ಪೈಕಿ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೈದು ಮಂದಿ ತೀವ್ರ ಗಾಯಗೊಂಡಿದ್ದಾರೆ.


ಅತಿ ವೇಗದಿಂದ ಟ್ರಕ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಂಬನಿ ಮಿಡಿದಿದ್ದು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಪ್ರಧಾನಿ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡಲು ಆದೇಶ ಮಾಡಿದ್ದಾರೆ. ಗುಜರಾತ್ ಸಿಎಂ ವಿಜಯ್ ರೂಪಾಣಿ ಕೂಡ, ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಪ್ರಕಟಿಸಿದ್ದಾರೆ.
At least 15 people were killed after a truck ran over a total of 18 people sleeping on a footpath at Kim Char Rasta near Surat in Gujarat in the wee hours on Tuesday.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am