ಬ್ರೇಕಿಂಗ್ ನ್ಯೂಸ್
25-01-21 11:26 pm Mangaluru Correspondent ದೇಶ - ವಿದೇಶ
ನವದೆಹಲಿ, ಜ.25: ಖ್ಯಾತ ಹೃದಯ ತಜ್ಞ , ಲೇಖಕ ಡಾ. ಬಿ.ಎಂ. ಹೆಗ್ಡೆ ಅವರನ್ನು ಭಾರತದ ಎರಡನೇ ಅತ್ಯುನ್ನತ ಪ್ರಶಸ್ತಿ ಪದ್ಮವಿಭೂಷಣಕ್ಕೆ ಕೇಂದ್ರ ಸರಕಾರ ಆಯ್ಕೆ ಮಾಡಿದೆ.
ವೈದ್ಯಕೀಯ ಕ್ಷೇತ್ರದಲ್ಲಿ ಹಲವಾರು ಪುಸ್ತಕಗಳನ್ನು ಬರೆದಿರುವ ಬಿ.ಎಂ. ಹೆಗ್ಡೆ ಅವರಿಗೆ 2010 ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಲಾಗಿತ್ತು. ಅದಕ್ಕೂ ಹಿಂದೆ 1999ರಲ್ಲಿ ಪ್ರತಿಷ್ಠಿತ ಡಾ.ಬಿ.ಸಿ. ರಾಯ್ ಪ್ರಶಸ್ತಿಗೆ ಪಾತ್ರರಾಗಿದ್ದರು.
ಸಾರ್ವಜನಿಕ ಸೇವೆ ವಿಭಾಗದಲ್ಲಿ ಜಪಾನ್ ಮಾಜಿ ಪ್ರಧಾನಿ ಶಿನ್ ಜೋ ಅಬೆ ಅವರಿಗೂ ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇತ್ತೀಚೆಗೆ ನಿಧನರಾದ ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರ ನೆಲೆಯಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ.
ಭಾರತ ಮೂಲದ ಅಮೆರಿಕದ ವಿಜ್ಞಾನಿ ನರೀಂದರ್ ಸಿಂಗ್, ಭಾರತದ ಇಸ್ಲಾಂ ಧಾರ್ಮಿಕ ಗುರು, ಶಾಂತಿ ಪ್ರತಿಪಾದಕ ಮೌಲಾನಾ ವಹೀಯುದ್ದೀನ್ ಖಾನ್, ಪ್ರಾಚ್ಯವಸ್ತು ಸಂಶೋಧಕ, ಇತಿಹಾಸಕಾರ ಬಿ.ಬಿ.ಲಾಲ್, ಸಾಹಿತಿ ಸುದರ್ಶನ ಸಾಹೂ ಅವರನ್ನೂ ಸೇರಿಸಿ ಏಳು ಮಂದಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ.
ಇದೇ ವೇಳೆ, ಕನ್ನಡ ಸಾಹಿತಿ ಚಂದ್ರಶೇಖರ ಕಂಬಾರ, ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೋಯ್, ಮಾಜಿ ಕೇಂದ್ರ ಸಚಿವ ರಾಮವಿಲಾಸ್ ಪಾಸ್ವಾನ್, ಗುಜರಾತಿನ ಮಾಜಿ ಸಿಎಂ ಕೇಶುಭಾಯ್ ಪಟೇಲ್, ಭಾರತದ ಇಸ್ಲಾಮಿಕ್ ಸಾಹಿತಿ ಕಲ್ಬೆ ಸಾದಿಕ್, ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಸೇರಿ ಹತ್ತು ಮಂದಿ ಸಾಧಕರಿಗೆ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಇದಲ್ಲದೆ, ಈ ಬಾರಿ 102 ಮಂದಿಯನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕದ ಮೂರು ಮಂದಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ ಪ್ರಕಟಿಸಲಾಗುವ ಈ ಪ್ರಶಸ್ತಿಗಳನ್ನು ಪ್ರತಿವರ್ಷ ಎಪ್ರಿಲ್ ತಿಂಗಳಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.
We are proud of all those who have been conferred the Padma Awards. India cherishes their contribution to the nation and humanity at large. These exceptional individuals from different walks of life have brought qualitative changes in the lives of others. https://t.co/wYOU3wxavE
— Narendra Modi (@narendramodi) January 25, 2021
Famous cardiologist, professional educator and author Dr Belle Monappa (BM) Hegde from Mangalore has been conferred with the Padma Vibhushan, India's second-highest civilian award.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm