ಬ್ರೇಕಿಂಗ್ ನ್ಯೂಸ್
26-01-21 03:22 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.26 : ಗಣರಾಜ್ಯ ದಿನವೇ ಶಕ್ತಿಪ್ರದರ್ಶನಕ್ಕೆ ಹೊರಟ ರೈತರನ್ನು ತಡೆಯಲು ಪೊಲೀಸರು ಬಲಪ್ರಯೋಗ ಮಾಡಿದ್ದಾರೆ. ಆದರೆ, ರಾಜಧಾನಿಗೆ ಪ್ರವೇಶ ಮಾಡದಂತೆ ಪೊಲೀಸರು ಹಾಕಿದ್ದ ತಡೆಬೇಲಿಯನ್ನು ಲೆಕ್ಕಿಸದೆ ರೈತರು ಮುನ್ನುಗ್ಗಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ಕೆಂಪುಕೋಟೆಗೆ ನುಗ್ಗಿದ ಪ್ರತಿಭಟನಾಕಾರರು ಅಲ್ಲಿ ಸಿಖ್ ಧ್ವಜ ಹಾರಿಸಿದ್ದಾರೆ.
ಇದೇ ವೇಳೆ, ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿಚಾರ್ಜ್, ಜಲಫಿರಂಗಿ ಪ್ರಯೋಗ ಮಾಡಿದ್ದಾರೆ. ಉತ್ತರ ದೆಹಲಿಯಲ್ಲಿ ಅನ್ನದಾತರ ಕಿಚ್ಚು ತೀವ್ರಗೊಂಡಿದ್ದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ.


ಕೇಂದ್ರ ಸರಕಾರ ಜಾರಿಗೆ ತರುತ್ತಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಚಳವಳಿ ನಡೆಯುತ್ತಿದ್ದು ಪಂಜಾಬ್, ಹರಿಯಾಣ, ಉತ್ತರ ಪ್ರದೇಶಗಳಿಂದ ರೈತರು ಟ್ರಾಕ್ಟರ್ ನಲ್ಲಿ ರಾಜಧಾನಿಗೆ ಆಗಮಿಸಿದ್ದಾರೆ. ಒಂದೆಡೆ ರೈತರ ಟ್ರ್ಯಾಕ್ಟರ್ ರ್ಯಾಲಿ ಉದ್ವಿಗ್ನ ಪರಿಸ್ಥಿತಿಯನ್ನು ತಲುಪಿದ್ದು ದೆಹಲಿಯ ವಿವಿಧೆಡೆ ವ್ಯಾಪಕ ಹಿಂಸಾಚಾರ ನಡೆದಿದೆ. ರ್ಯಾಲಿಗೆ ತೆರಳಿದ್ದ ರೈತರ ಮೇಲೆ ಅಶ್ರುವಾಯು ಪ್ರಯೋಗ ಮಾಡಲಾಗಿದೆ. ಕಿಸಾನ್ ಟ್ರ್ಯಾಕ್ಟರ್ ಪರೇಡ್ ಗೆ ತೆರಳಿದ್ದ ರೈತರ ಮೇಲೆ ಪೊಲೀಸರು ಮನಬಂದಂತೆ ಲಾಠಿಚಾರ್ಜ್ ಕೂಡ ಮಾಡಿದ್ದಾರೆ.


ಪೊಲೀಸರು ನದಿಯ ಸೇತುವೆ ಮಧ್ಯೆ ಹಾಕಿದ್ದ ಬ್ಯಾರಿಕೇಡ್ ಗಳನ್ನು ರೈತರು ನದಿಗೆ ಎಸೆದಿದ್ದಾರೆ. ದೆಹಲಿಯ ಸಿಂಘು ಗಡಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್ ಮಾಡಲಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ರೈತರ ಮೇಲೆ ಗುಂಡು ಹಾರಿಸದಂತೆ ಕೇಂದ್ರ ಸರಕಾರ ಸೂಚನೆ ನೀಡಿದೆ. ಹೀಗಾಗಿ ಪ್ರತಿಭಟನಾಕಾರರು ಕೆಂಪುಕೋಟೆ ಮೇಲೆ ಹತ್ತಿ ಧ್ವಜ ಹಾರಿಸಿದರೂ ಪೊಲೀಸರು ಅವರ ಮೇಲೆ ಬಲಪ್ರಯೋಗ ಮಾಡಿಲ್ಲ. ಆದರೂ ಲಾಠಿಚಾರ್ಜ್, ಕಲ್ಲು ತೂರಾಟದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ಸಾವು ಆಗಿರುವ ಬಗ್ಗೆ ಇನ್ನೂ ಖಚಿತಗೊಂಡಿಲ್ಲ. ಟ್ರಾಕ್ಟರ್ ಗಳನ್ನು ತಡೆದ ಪೊಲೀಸರ ಮೇಲೆಯೇ ಟ್ರಾಕ್ಟರ್ ಹರಿಸುವ ಯತ್ನಗಳು ನಡೆದಿವೆ. ಅಲ್ಲದೆ, ಸಾರ್ವಜನಿಕ ಸಾರಿಗೆ ಬಸ್ ಗಳ ಮೇಲೂ ಟ್ರಾಕ್ಟರ್ ಗಳಿಂದ ಡಿಕ್ಕಿ ಹೊಡೆಸಿದ್ದು ವ್ಯಾಪಕ ಹಾನಿಗಳಾಗಿವೆ.
ಕರ್ನಾಟಕದ ಬೆಂಗಳೂರು ಸೇರಿ ದೇಶಾದ್ಯಂತ ಕಾಂಗ್ರೆಸ್ ಬೆಂಬಲದೊಂದಿಗೆ ರೈತರು ಟ್ರಾಕ್ಟರ್ ಚಳವಳಿ ನಡೆಸಲು ಮುಂದಾಗಿದ್ದರು. ಆದರೆ, ಪೊಲೀಸರು ಆಯಾ ಕಡೆಗಳಲ್ಲೇ ತಡೆ ಬೇಲಿ ಹಾಕಿ, ಟ್ರಾಕ್ಟರ್ ರಾಜಧಾನಿಗೆ ಬರದಂತೆ ತಡೆದಿದ್ದಾರೆ.
TIMES NOW's Bhavatosh with live updates from the Red Fort where the Delhi Police is making attempts to clear out the area. pic.twitter.com/mBCT72AsJh
— TIMES NOW (@TimesNow) January 26, 2021
#WATCH: Security personnel resort to lathicharge to push back the protesting farmers, in Nangloi area of Delhi. Tear gas shells also used.#FarmLaws pic.twitter.com/3gNjRvMq61
— ANI (@ANI) January 26, 2021
Farmers protesting against agricultural reforms breached barricades and clashed in Delhi on Tuesday, prompting the police to fire tear gas at them, shortly after a convoy of tractors trundled through the city’s outskirts.
01-03-26 04:51 pm
HK News Desk
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 04:07 pm
HK News Desk
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm