ಬ್ರೇಕಿಂಗ್ ನ್ಯೂಸ್
30-01-21 01:07 pm Headline Karnataka News Network ದೇಶ - ವಿದೇಶ
ಚೆನ್ನೈ,ಜ.30: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಡಿ ಪೊಲೀಸರು ಬಂಧಿಸಲು ಬಂದ ವಿಚಾರ ತಿಳಿದ ಮಹಿಳೆ ತನಗೆ ತಾನೇ ಬೆಂಕಿ ಹಚ್ಚಿಕೊಂಡಿರುವ ಘಟನೆ ತಮಿಳು ನಗರದ ಬೆಸೆಂಟ್ ನಗರದಲ್ಲಿ ನಡೆದಿದೆ. ಮಹಿಳೆಯನ್ನು ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಿಳೆಯನ್ನು ಉಷಾ ಮತ್ತು ಆಕೆಯ ಪತಿಯನ್ನು ರತ್ನಂ ಎಂದು ಗುರುತಿಸಲಾಗಿದೆ. ಅಕ್ರಮ ಮದ್ಯ ಮಾರಾಟ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೂ 12ಕ್ಕೂ ಅಧಿಕ ಪ್ರಕರಣಗಳು ಈಗಾಗಲೇ ದಾಖಲಾಗಿದೆ. ಹಾಗಾಗಿ ಪೊಲೀಸರ ತಂಡ ಉಷಾಳನ್ನು ಬಂಧಿಸಲು ಒಡೈಕುಪ್ಪಂಗೆ ಹೋಗಿದೆ. ಈ ವಿಚಾರ ತಿಳಿದ ಮಹಿಳೆ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ತಾನು ಧರಿಸಿದ್ದ ಉಡುಪನ್ನು ಹರಿದು ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ತಕ್ಷಣ ಆಕೆಯ ಮೇಲೆ ಗೋಣಿ ಚೀಲವನ್ನು ಹೊದಿಸಿ ನೀರು ಸುರಿದಿದ್ದಾರೆ. ಈ ಮೂಲಕ ಬೆಂಕಿ ನಂದಿಸಿದ್ದಾರೆ.
ಇದೀಗ ಆಕೆಗೆ ಕಿಲ್ಪಾಕ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಿಳೆಯ ದೇಹ ಶೇ.50 ರಷ್ಟು ಭಾಗ ಸುಟ್ಟು ಹೋಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜೊತೆಗೆ ಘಟನೆಯಲ್ಲಿ ಪೊಲೀಸ್ ಅಧಿಕಾರಿಯೂ ಗಾಯಗೊಂಡಿದ್ದಾರೆ. ಮಹಿಳೆ ಮನೆಯಲ್ಲಿದ್ದ 37ಕ್ಕೂ ಅಧಿಕ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a woman allegedly set herself on fire when police arrived to arrest her for allegedly selling illicit liquor in Besant Nagar of Tamil Nadu’s Chennai. She is currently undergoing treatment at a government hospital.
01-03-26 04:59 pm
HK News Desk
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 04:07 pm
HK News Desk
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm