ಬ್ರೇಕಿಂಗ್ ನ್ಯೂಸ್
01-02-21 01:55 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆಬ್ರವರಿ 1: ಆದಾಯ ತೆರಿಗೆ ಪಾವತಿಸುವ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ನೆಮ್ಮದಿಯ ಸುದ್ದಿ ನೀಡಿದೆ. ಇನ್ನು ಮುಂದೆ 75 ವರ್ಷ ದಾಟಿದ ಹಿರಿಯ ನಾಗರಿಕರು ಹಾಗೂ ಕೇವಲ ಪಿಂಚಣಿ ಮತ್ತು ಬಡ್ಡಿ ಮೂಲಕ ಆದಾಯ ಪಡೆದುಕೊಳ್ಳುವ ವ್ಯಕ್ತಿಗಳು ಇನ್ನು ಮುಂದೆ ಆದಾಯ ತೆರಿಗೆ ರಿಟರ್ನ್ಸ್ ಪಾವತಿ ಮಾಡುವ ಅಗತ್ಯವಿಲ್ಲ ಎಂದು ಸೋಮವಾರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದರಿಂದ ಹಿರಿಯ ನಾಗರಿಕರಿಗೆ ವಿನಾಯಿತಿ ನೀಡಲಾಗಿದೆ. ಆದರೆ ಅವರ ಬದಲು ಇನ್ನು ಮುಂದೆ ಸಂಬಂಧಿತ ಬ್ಯಾಂಕ್ಗಳು ಐಟಿಆರ್ ಸಲ್ಲಿಕೆ ಮಾಡಲಿವೆ.
ಹಾಗೆನೇ ಅನಿವಾಸಿ ಭಾರತೀಯರಿಗೆ ಬಜೆಟ್ನಲ್ಲಿ ಮತ್ತಷ್ಟು ಉತ್ತೇಜನ ನೀಡಲಾಗಿದೆ. ಅನಿವಾಸಿ ಭಾರತೀಯರ ವಿದೇಶಿ ನಿವೃತ್ತಿ ಫಂಡ್ನಲ್ಲಿನ ದುಪ್ಪಟ್ಟು ತೆರಿಗೆಯನ್ನು ತೆಗೆದುಹಾಕಲು ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದು ನಿರ್ಮಲಾ ತಿಳಿಸಿದ್ದಾರೆ.

ಟ್ಯಾಕ್ಸ್ ರಿಟರ್ನ್ಸ್ ಅನ್ನು ಮರು ತೆರೆಯಲು ಇದ್ದ ಸಮಯದ ಮಿತಿಯನ್ನು ಮೂರು ವರ್ಷಗಳಿಗೆ ಇಳಿಸಲಾಗಿದೆ. ಪ್ರಸ್ತುತ ಅದು ಆರು ವರ್ಷಗಳವರೆಗೆ ಇತ್ತು. ಗಂಭೀರ ವಂಚನೆಗಳಲ್ಲಿಯೂ 50 ಲಕ್ಷಕ್ಕೂ ಅಧಿಕ ಮೊತ್ತದ ತೆರಿಗೆಯ ಸಾಧ್ಯತೆ ಇದ್ದರೆ ಮಾತ್ರ ಈ ಮಿತಿಯನ್ನು ಹೆಚ್ಚುವರಿಯಾಗಿ ನೀಡಬಹುದು.
ಆದಾರ ತೆರಿಗೆ ರಿಟರ್ನ್ಸ್ ಸಲ್ಲಿಸುವವರ ಸಂಖ್ಯೆ 2014ರಲ್ಲಿ 3.31 ಕೋಟಿ ಇದ್ದರೆ, ಅದು 2020ರ ವೇಳೆಗೆ 6.48 ಕೋಟಿಗೆ ಏರಿಕೆಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. ನಮ್ಮ ತೆರಿಗೆ ವ್ಯವಸ್ಥೆಯು ಪಾರದರ್ಶಕವಾಗಬೇಕು. ನೇರ ತೆರಿಗೆ ವ್ಯವಸ್ಥೆಯಲ್ಲಿ ಸರ್ಕಾರವು ಸರಣಿ ಸುಧಾರಣೆಗಳನ್ನು ಆರಂಭಿಸಿದೆ. ತೆರಿಗೆ ದಕ್ಷತೆಯನ್ನು ಸುಧಾರಿಸಲು ನೇರ ತೆರಿಗೆ ಆಡಳಿತದಲ್ಲಿ ಮುಖರಹಿತ ಮೌಲ್ಯನಿರ್ಣಯ ಪದ್ಧತಿಯನ್ನು ಜಾರಿಗೊಳಿಸಲಾಗಿದೆ. ಸಣ್ಣ ತೆರಿಗೆದಾರರಿಗಾಗಿ ಖುದ್ದು ಹಾಜರಾಗುವ ಅಗತ್ಯವಿಲ್ಲದ ವಾಜ್ಯ ಪರಿಹಾರ ಪದ್ಧತಿ ಜಾರಿಗೆ ತರಲಾಗುತ್ತದೆ.
ಮಧ್ಯಮ ಮತ್ತು ಸಣ್ಣ ಉದ್ಯಮಗಳಲ್ಲಿನ ತೆರಿಗೆ ಲೆಕ್ಕಪರಿಶೋಧನೆ ಮಿತಿಯನ್ನು 5 ಕೋಟಿ ರೂಪಾಯಿಯಿಂದ 10 ಕೋಟಿ ರೂಗೆ ಹೆಚ್ಚಿಸಲಾಗಿದೆ.
Among several key announcements made by Union Finance Minister Nirmala Sitharaman in the Union Budget 2021-22, the senior citizens above 75 years with only pension income have now been exempted from filing the Income Tax returns.
01-03-26 04:56 pm
HK News Desk
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 04:07 pm
HK News Desk
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm