ಬ್ರೇಕಿಂಗ್ ನ್ಯೂಸ್
01-02-21 01:55 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆಬ್ರವರಿ 1: ಆದಾಯ ತೆರಿಗೆ ಪಾವತಿಸುವ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ನೆಮ್ಮದಿಯ ಸುದ್ದಿ ನೀಡಿದೆ. ಇನ್ನು ಮುಂದೆ 75 ವರ್ಷ ದಾಟಿದ ಹಿರಿಯ ನಾಗರಿಕರು ಹಾಗೂ ಕೇವಲ ಪಿಂಚಣಿ ಮತ್ತು ಬಡ್ಡಿ ಮೂಲಕ ಆದಾಯ ಪಡೆದುಕೊಳ್ಳುವ ವ್ಯಕ್ತಿಗಳು ಇನ್ನು ಮುಂದೆ ಆದಾಯ ತೆರಿಗೆ ರಿಟರ್ನ್ಸ್ ಪಾವತಿ ಮಾಡುವ ಅಗತ್ಯವಿಲ್ಲ ಎಂದು ಸೋಮವಾರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದರಿಂದ ಹಿರಿಯ ನಾಗರಿಕರಿಗೆ ವಿನಾಯಿತಿ ನೀಡಲಾಗಿದೆ. ಆದರೆ ಅವರ ಬದಲು ಇನ್ನು ಮುಂದೆ ಸಂಬಂಧಿತ ಬ್ಯಾಂಕ್ಗಳು ಐಟಿಆರ್ ಸಲ್ಲಿಕೆ ಮಾಡಲಿವೆ.
ಹಾಗೆನೇ ಅನಿವಾಸಿ ಭಾರತೀಯರಿಗೆ ಬಜೆಟ್ನಲ್ಲಿ ಮತ್ತಷ್ಟು ಉತ್ತೇಜನ ನೀಡಲಾಗಿದೆ. ಅನಿವಾಸಿ ಭಾರತೀಯರ ವಿದೇಶಿ ನಿವೃತ್ತಿ ಫಂಡ್ನಲ್ಲಿನ ದುಪ್ಪಟ್ಟು ತೆರಿಗೆಯನ್ನು ತೆಗೆದುಹಾಕಲು ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದು ನಿರ್ಮಲಾ ತಿಳಿಸಿದ್ದಾರೆ.
ಟ್ಯಾಕ್ಸ್ ರಿಟರ್ನ್ಸ್ ಅನ್ನು ಮರು ತೆರೆಯಲು ಇದ್ದ ಸಮಯದ ಮಿತಿಯನ್ನು ಮೂರು ವರ್ಷಗಳಿಗೆ ಇಳಿಸಲಾಗಿದೆ. ಪ್ರಸ್ತುತ ಅದು ಆರು ವರ್ಷಗಳವರೆಗೆ ಇತ್ತು. ಗಂಭೀರ ವಂಚನೆಗಳಲ್ಲಿಯೂ 50 ಲಕ್ಷಕ್ಕೂ ಅಧಿಕ ಮೊತ್ತದ ತೆರಿಗೆಯ ಸಾಧ್ಯತೆ ಇದ್ದರೆ ಮಾತ್ರ ಈ ಮಿತಿಯನ್ನು ಹೆಚ್ಚುವರಿಯಾಗಿ ನೀಡಬಹುದು.
ಆದಾರ ತೆರಿಗೆ ರಿಟರ್ನ್ಸ್ ಸಲ್ಲಿಸುವವರ ಸಂಖ್ಯೆ 2014ರಲ್ಲಿ 3.31 ಕೋಟಿ ಇದ್ದರೆ, ಅದು 2020ರ ವೇಳೆಗೆ 6.48 ಕೋಟಿಗೆ ಏರಿಕೆಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. ನಮ್ಮ ತೆರಿಗೆ ವ್ಯವಸ್ಥೆಯು ಪಾರದರ್ಶಕವಾಗಬೇಕು. ನೇರ ತೆರಿಗೆ ವ್ಯವಸ್ಥೆಯಲ್ಲಿ ಸರ್ಕಾರವು ಸರಣಿ ಸುಧಾರಣೆಗಳನ್ನು ಆರಂಭಿಸಿದೆ. ತೆರಿಗೆ ದಕ್ಷತೆಯನ್ನು ಸುಧಾರಿಸಲು ನೇರ ತೆರಿಗೆ ಆಡಳಿತದಲ್ಲಿ ಮುಖರಹಿತ ಮೌಲ್ಯನಿರ್ಣಯ ಪದ್ಧತಿಯನ್ನು ಜಾರಿಗೊಳಿಸಲಾಗಿದೆ. ಸಣ್ಣ ತೆರಿಗೆದಾರರಿಗಾಗಿ ಖುದ್ದು ಹಾಜರಾಗುವ ಅಗತ್ಯವಿಲ್ಲದ ವಾಜ್ಯ ಪರಿಹಾರ ಪದ್ಧತಿ ಜಾರಿಗೆ ತರಲಾಗುತ್ತದೆ.
ಮಧ್ಯಮ ಮತ್ತು ಸಣ್ಣ ಉದ್ಯಮಗಳಲ್ಲಿನ ತೆರಿಗೆ ಲೆಕ್ಕಪರಿಶೋಧನೆ ಮಿತಿಯನ್ನು 5 ಕೋಟಿ ರೂಪಾಯಿಯಿಂದ 10 ಕೋಟಿ ರೂಗೆ ಹೆಚ್ಚಿಸಲಾಗಿದೆ.
Among several key announcements made by Union Finance Minister Nirmala Sitharaman in the Union Budget 2021-22, the senior citizens above 75 years with only pension income have now been exempted from filing the Income Tax returns.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm