ಬ್ರೇಕಿಂಗ್ ನ್ಯೂಸ್
01-02-21 05:54 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಹಲವು ಯೋಜನೆಗಳಿಗೆ ಅನುದಾನ ಹೆಚ್ಚಿಸಲಾಗಿದೆ. 2021-22ರ ಹಣಕಾಸು ವರ್ಷದಲ್ಲಿ 2,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ 7 ಪ್ರಮುಖ ಬಂದರುಗಳ ಯೋಜನೆಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ನೀಡಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಮಂಡಿಸಿದ್ದಾರೆ.
ಪ್ರಮುಖ ಬಂದರುಗಳು ತಮ್ಮ ಕಾರ್ಯಾಚರಣೆಯ ಸೇವೆಗಳನ್ನು ಸ್ವಯಂ ನಿರ್ವಹಿಸುವ ಬದಲು ಖಾಸಗಿ ಪಾಲುದಾರರು ಅದನ್ನು ನಿರ್ವಹಿಸುವ ಮಾದರಿಯತ್ತ ಸಾಗಲಿದ್ದಾರೆ ಎಂದಿದ್ದಾರೆ. ಭಾರತದಲ್ಲಿ ವ್ಯಾಪಾರಿ ಹಡಗುಗಳ ಪ್ಲಾಗಿಂಗ್ ಉತ್ತೇಜಿಸಲು ಭಾರತೀಯ ಹಡಗು ಕಂಪನಿಗಳಿಗೆ ಸಚಿವಾಲಯಗಳು ಮತ್ತು ಸಿಪಿಎಸ್ಇ ಆರಂಭಿಸುವ ಜಾಗತಿಕ ಟೆಂಡರ್ಗಳಲ್ಲಿ 5 ವರ್ಷಗಳ ಕಾಲ 1,624 ಕೋಟಿ ರೂ. ಸಬ್ಸಿಡಿ ಬೆಂಬಲ ಯೋಜನೆಯನ್ನು ತಮ್ಮ ಬಜೆಟ್ ಭಾಷಣದಲ್ಲಿ ಸೀತಾರಾಮನ್ ಪ್ರಕಟಿಸಿದರು.
ಈ ಉಪಕ್ರಮವು ಭಾರತೀಯ ಹಡಗು ಸಿಬ್ಬಂದಿಗೆ ದೊಡ್ಡ ತರಬೇತಿ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ ಜೊತೆಗೆ ಜಾಗತಿಕ ಹಡಗು ಕ್ಷೇತ್ರದಲ್ಲಿ ಭಾರತೀಯ ಕಂಪನಿಗಳ ಪಾಲನ್ನು ಹೆಚ್ಚಿಸುತ್ತದೆ.
2024ರ ವೇಳೆಗೆ ಹಡಗಿನ ಮರುಬಳಕೆ ಸಾಮರ್ಥ್ಯವನ್ನು ಸುಮಾರು 4.5 ದಶಲಕ್ಷ ಲೈಟ್ ಡಿಸ್ಪ್ಲೇಸ್ಮೆಂಟ್ ಟೋನ್ (ಎಲ್.ಡಿ.ಟಿ)ಗೆ ದ್ವಿಗುಣಗೊಳಿಸಲು ಪ್ರಸ್ತಾಪಿಸಿದರು. ಗುಜರಾತ್ನ ಅಲಾಂಗ್ನಲ್ಲಿ ಸುಮಾರು 90 ಹಡಗು ಮರುಬಳಕೆ ಯಾರ್ಡ್ಗಳು ಈಗಾಗಲೇ ಎಚ್ಕೆಸಿ (ಹಾಂಗ್ ಕಾಂಗ್ ಅಂತಾರಾಷ್ಟ್ರೀಯ ಸಮಾವೇಶ) ಅನುಸರಣೆ ಪ್ರಮಾಣಪತ್ರಗಳನ್ನು ಸಾಧಿಸಿರುವುದರಿಂದ ಯುರೋಪ್ ಮತ್ತು ಜಪಾನ್ನಿಂದ ಭಾರತಕ್ಕೆ ಹೆಚ್ಚಿನ ಹಡಗುಗಳನ್ನು ತರಲು ಪ್ರಯತ್ನಿಸಲಾಗುವುದು ಎಂದಿದ್ದಾರೆ. ಇದರಿಂದ ದೇಶದ ಯುವಕರಿಗೆ ಹೆಚ್ಚುವರಿಯಾಗಿ 1.5 ಲಕ್ಷ ಉದ್ಯೋಗಗಳು ದೊರೆಯುವ ನಿರೀಕ್ಷೆಯಿದೆ ಎಂದು ತಿಳಿಸಿದರು.
Finance Minister Nirmala Sitharaman announced seven port projects worth more than Rs 2,000 crore investment. These projects would be undertaken through public-private partnership (PPP) mode, Sitharaman said in her Budget 2021 speech.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm