ಬ್ರೇಕಿಂಗ್ ನ್ಯೂಸ್
05-02-21 12:27 pm Headline Karnataka News Network ದೇಶ - ವಿದೇಶ
ಅಮರಾವತಿ, ಫೆಬ್ರವರಿ 5: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಗುರುವಾರ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದಾರೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಸಂತ್ರಸ್ತರ ಕುಟುಂಬದವರಿಗೆ ಉದ್ಯೋಗ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಿರಿಕುಳಕ್ಕೆ ಒಳಗಾದ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡುವುದನ್ನು ರಾಜ್ಯ ಸರ್ಕಾರ ಮುಂದುವರಿಸಲಿದೆ ಎಂದಿರುವ ಜಗನ್, ಈ ಸಮುದಾಯಗಳ ಸಂತ್ರಸ್ತರಿಗೆ ಭೂಮಿ ಮಂಜೂರು ಮಾಡುವ ಕ್ರಮ ಕೂಡ ತೆಗೆದುಕೊಳ್ಳಬೇಕು. ಭೂಮಿ ಲಭ್ಯವಾಗದ ಸಂದರ್ಭಗಳಲ್ಲಿ ಅದಕ್ಕಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಸಂತ್ರಸ್ತರಗೆ ಹಂಚಿಕೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.
ಉನ್ನತ ಮಟ್ಟದ ಎಸ್ಸಿ ಮತ್ತು ಎಸ್ಟಿ ನಿಗಾ ಹಾಗೂ ಪರಿಶೀಲನಾ ಸಮಿತಿ ಮುಖ್ಯಸ್ಥರಾಗಿರುವ ಜಗನ್, ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳ ಮೇಲಿನ ದೌರ್ಜನ್ಯಗಳ ಬಾಕಿ ಉಳಿದಿರುವ ಪ್ರಕರಣಗಳ ವಿಚಾರಣೆಯನ್ನು ತ್ವರಿತಗೊಳಿಸುವಂತೆ ಸೂಚಿಸಿದರು. 2013ರಿಂದಲೂ ಈ ಸಮಿತಿ ಸಭೆಗಳು ನಡೆದಿರಲಿಲ್ಲ. ಹಿಂದಿನ ಸರ್ಕಾರವು ಕಾನೂನು ಜಾರಿಯಲ್ಲಿ, ಅದರಲ್ಲಿಯೂ ಎಸ್ಸಿ ಮತ್ತು ಎಸ್ಟಿಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಗಮನ ಹರಿಸಿರಲಿಲ್ಲ ಎಂದು ಜಗನ್ ಆರೋಪಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾನೂನು ಜಾರಿಯ ನಿರಂತರ ಪರಾಮರ್ಶನ ನಡೆಯಲಿದೆ. ರಾಜ್ಯ ಮತ್ತು ಜಿಲ್ಲಾ ಮಟ್ಟಗಳಲ್ಲಿ ಎರಡೂ ಕಡೆ ಈ ಸಭೆಗಳು ನಡೆಯಬೇಕು ಎಂದು ನಿರ್ದೇಶಿಸಿದ್ದಾರೆ. ಎಸ್ಸಿ ಮತ್ತು ಎಸ್ಟಿ ಪ್ರಕರಣಗಳಲ್ಲಿ ತಪ್ಪಿತಸ್ಥರೆಂದು ಕಂಡುಬಂದ ಪೊಲೀಸ್ ಅಧಿಕಾರಿಗಳ ವಿರುದ್ಧ ಸಹ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂಬ ಸಂದೇಶ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
Andhra Pradesh Chief Minister YS Jagan Mohan Reddy on Thursday directed officials to provide jobs to the family members of rape and murder victims from the Scheduled Caste and Scheduled Tribe (SC and ST) communities. Jagan said the state
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm