ಬ್ರೇಕಿಂಗ್ ನ್ಯೂಸ್
14-02-21 12:10 pm Headline Karnataka News Network ದೇಶ - ವಿದೇಶ
ಕರ್ನೂಲ್, ಫೆ.14: ಇಲ್ಲಿನ ಕರ್ನೂರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು ನಸುಕಿನಲ್ಲಿ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಚಿತ್ತೂರು ಜಿಲ್ಲೆಯ ಮದನಪಲ್ಲೆ ಗ್ರಾಮದಿಂದ ರಾಜಸ್ಥಾನದ ಅಜ್ಮೀರ್ ಗೆ ಯಾತ್ರೆ ಹೊರಟಿದ್ದ ಕುಟುಂಬದ ಮಿನಿ ವ್ಯಾನ್ ಟ್ರಕ್ ಒಂದಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕರ್ನೂಲ್ ಜಿಲ್ಲೆಯ ವೇಲ್ದುರ್ತಿ ತಾಲೂಕು ವ್ಯಾಪ್ತಿಯ ಮಾದಾರಪುರಂ ಗ್ರಾಮದಲ್ಲಿ ನಸುಕಿನ 3.30ರ ಸುಮಾರಿಗೆ ಘಟನೆ ನಡೆದಿದೆ.


ಎಂಟು ಮಹಿಳೆಯರು, ಐದು ಪುರುಷರು ಮತ್ತು ಒಂದು ಮಗು ಮೃತರಲ್ಲಿ ಸೇರಿದ್ದು ಅಪಘಾತದ ತೀವ್ರತೆಗೆ ದೇಹಗಳು ಅಪ್ಪಚ್ಚಿಯಾಗಿದ್ದವು. ಒಂದಕ್ಕೊಂದು ಅಂಟಿಕೊಂಡಿದ್ದ ವಾಹನವನ್ನು ಜೆಸಿಬಿ ತಂದು ಹಗ್ಗ ಕಟ್ಟಿ ಎಳೆದು ಬಿಡಿಸಲಾಯ್ತು. ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.



ಪೊಲೀಸರ ಪ್ರಕಾರ, ಮಿನಿ ವ್ಯಾನ್ ಚಾಲಕ ಅತಿ ವೇಗದಿಂದ ಇದ್ದ ಅಥವಾ ವೇಗದಲ್ಲಿರುವಾಗಲೇ ವ್ಯಾನ್ ಟೈರ್ ಸಿಡಿದು ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಅಪಘಾತದ ಕಾರಣ ಹೆದ್ದಾರಿಯಲ್ಲಿ ಪೂರ್ತಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಘಟನೆ ಬಗ್ಗೆ ಸಿಎಂ ಜಗನ್ಮೋಹನ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ನೀಡುವಂತೆ ಕರ್ನೂಲ್ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಕರ್ನೂಲ್ ಜಿಲ್ಲಾಧಿಕಾರಿ ಪ್ರಕಾರ, ಚಿತ್ತೂರು ಜಿಲ್ಲೆಯಿಂದ ಹೊರಟಿದ್ದ ಮಿನಿ ವ್ಯಾನ್ ನಲ್ಲಿ 18 ಮಂದಿ ಇದ್ದರು. 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Visuals: 14 killed, 4 injured in truck-mini van collision near Madapuram in Veldurthi Mandal of #Kurnool district. pic.twitter.com/WRrWhEwMMh
— TOI Vijaywada (@TOIVijaywada) February 14, 2021
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm