ಬ್ರೇಕಿಂಗ್ ನ್ಯೂಸ್
15-02-21 11:30 am Headline Karnataka News Network ದೇಶ - ವಿದೇಶ
ಪಾಲಕ್ಕಾಡ್, ಫೆ.15: ಜಿಲ್ಲೆಯ ಕುಣಿಶ್ಶೇರಿ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಹೋದರರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ಕುದಿರೆಪ್ಪಾರ ನಿವಾಸಿ ಜಸೀರ್ ಎಂಬವರ 3, 7 ಮತ್ತು 12 ವರ್ಷದ ಮಕ್ಕಳು ಮೃತಪಟ್ಟವರಾಗಿದ್ದು, ಶನಿವಾರ ಆಟವಾಡುವ ವೇಳೆ ಕಾಲು ಜಾರಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಕುಣಿಶ್ಶೇರಿಯ ಕುದಿರೆಪ್ಪಾರ ಎಂಬಲ್ಲಿ ತೋಟದ ಮಧ್ಯೆ ಇರುವ ಕೊಳದಲ್ಲಿ ಘಟನೆ ಸಂಭವಿಸಿದೆ. ಮಾವಿನ ಹಣ್ಣು ತೊಳೆಯಲು 7 ವರ್ಷ ಪ್ರಾಯದ ರಿಂಶಾದ್ ಕೊಳಕ್ಕೆ ಇಳಿದಾಗ ಕಾಲು ಜಾರಿ ಬಿದ್ದಿದ್ದು, ಇದನ್ನು ನೋಡಿದ 3 ವರ್ಷ ಪ್ರಾಯದ ರಿಫಾಝ್ ಕೂಡಾ ಕೊಳಕ್ಕೆ ಇಳಿದಿದ್ದಾರೆ. ಇಬ್ಬರನ್ನೂ ರಕ್ಷಿಸಲು 12ರ ಹರೆಯದ ಜಿಂಶಾದ್ ಕೊಳಕ್ಕೆ ಹಾರಿದ್ದು, ಮೂವರೂ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಇವರೊಂದಿಗೆ ಆಟವಾಡುತ್ತಿದ್ದ 8 ವರ್ಷದ ಶೃತಿ ಎಂಬ ಬಾಲಕಿ ಈ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾಳೆ.

ಜಸೀರ್- ರಮ್ಲಾ ದಂಪತಿಗೆ ಇದ್ದ ಈ ಮೂವರು ಮಕ್ಕಳೂ ಮೃತಪಟ್ಟಿದ್ದು, ಮೃತರನ್ನು ಆಲತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ನಂತರ ಮೃತದೇಹಗಳನ್ನು ಆಲತ್ತೂರಿನ ತಾಲೂಕು ಆಸ್ಪತ್ರೆಗೆ ಸಾಗಿಸಲಾಯಿತು. ಕೃಷಿ ಸಚಿವ ವಿ.ಎಸ್ ಸುನೀಲ್ ಕುಮಾರ್, ಆಲತ್ತೂರು ಶಾಸಕ ಕೆ.ಡಿ ಪ್ರಸನ್ನನ್ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
In a tragic incident, three children drowned in a pond barely 100m away from their house at Kuthirapara, Kunissery near Alathur on Sunday.
01-03-26 05:16 pm
HK News Desk
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 04:07 pm
HK News Desk
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm