ಬ್ರೇಕಿಂಗ್ ನ್ಯೂಸ್
15-02-21 02:09 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಫೆ.15 : ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ತಂತ್ರಗಾರಿಕೆ ಜೋರಾಗಿ ಸಾಗುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡಿರುವ ಮಮತಾ ಬ್ಯಾನರ್ಜಿ ಸರ್ಕಾರ ಇಂದಿನಿಂದಲೇ ರಾಜ್ಯದ ಜನತೆಗೆ ಐದು ರೂಪಾಯಿಗೆ ಊಟ ನೀಡಲು ಸಿದ್ಧವಾಗಿದೆ. ಈ ಯೋಜನೆಗೆ ‘ಮಾ’ ಎಂದು ಹೆಸರಿಡಲಾಗಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದ (TMC) ‘‘ಮಾ, ಮಾಟಿ, ಮನುಷ್’’ (ತಾಯಿ, ಭೂಮಿ, ಮನುಷ್ಯ) ಎಂಬ ಘೋಷವಾಕ್ಯದಿಂದಲೇ ಯೋಜನೆಯ ಹೆಸರನ್ನು ಆರಿಸಿಕೊಳ್ಳಲಾಗಿದೆ.
ಆರಂಭಿಕ ಹಂತದಲ್ಲಿ ಕೋಲ್ಕತ್ತಾ ನಗರದ 16 ಕಡೆ ‘ಮಾ’ ಯೋಜನೆ ಜಾರಿಯಾಗಲಿದ್ದು, ನಂತರದ ದಿನಗಳಲ್ಲಿ ರಾಜ್ಯದೆಲ್ಲೆಡೆ ವಿಸ್ತರಿಸಲು ನಿರ್ಧರಿಸಲಾಗಿದೆ.
ಮಾ ಯೋಜನೆಯಡಿಯಲ್ಲಿ ಸಿಗುವ ಊಟಕ್ಕೆ ಅನ್ನ, ದಾಲ್, ತರಕಾರಿ ಪದಾರ್ಥ ಮತ್ತು ಮೊಟ್ಟೆಯನ್ನು ನೀಡಲಾಗುವುದು. ಒಂದು ತಟ್ಟೆ ಊಟಕ್ಕೆ ₹5 ಇರಲಿದ್ದು, ನಿಗದಿತ ಸಮಯದಲ್ಲಿ ಊಟ ದೊರೆಯಲಿದೆ ಎಂದು ಯೋಜನೆಯ ಕುರಿತಾಗಿ ಕೋಲ್ಕತ್ತಾ ಮಹಾನಗರ ಪಾಲಿಕೆ ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. ಈ ಯೋಜನೆಗಾಗಿಯೇ ಬಜೆಟ್ನಲ್ಲಿ ಮೊತ್ತವನ್ನು ತೆಗೆದಿರಿಸಲಾಗಿದ್ದು ಕ್ರಮೇಣ ನಗರ, ಸಣ್ಣ ಪಟ್ಟಣ ಹಾಗೂ ಗ್ರಾಮಾಂತರ ಭಾಗಗಳ ಜನರನ್ನೂ ‘ಮಾ’ ತಲುಪಲಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಕೊವಿಡ್ 19 ಸಾಂಕ್ರಾಮಿಕದಿಂದ ಕೆಲಸ ಕಳೆದುಕೊಂಡ ವಲಸೆ ಕಾರ್ಮಿಕರಿಗೆಂದೇ ಟಿಎಂಸಿ ಪಕ್ಷವು ದೀದಿರ್ ರಾನಾಘರ್ (ದೀದಿಯ ಅಡುಗೆಕೋಣೆ) ಎಂಬ ಯೋಜನೆ ಜಾರಿಗೆ ತಂದಿತ್ತು. ಇನ್ನೊಂದೆಡೆ ಇದಕ್ಕೆ ಪ್ರತಿಯಾಗಿ ಸಿಪಿಐ(ಎಂ) ಪಕ್ಷವೂ ‘ಶ್ರಮಜೀವಿ ಕ್ಯಾಂಟಿನ್’ ಆರಂಭಿಸಿತ್ತು. ಜೊತೆಗೆ, ಸುಮಾರು 50 ಆರೋಗ್ಯ ಕೇಂದ್ರ ಆರಂಭಿಸಿ, ಸಂಕಷ್ಟದಲ್ಲಿರುವವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿ ಗಮನ ಸೆಳೆದಿತ್ತು.
ಈ ಬಾರಿಯ ವಿಧಾನಸಭೆ ಚುನಾವಣೆ ಹಿಂದೆಂದಿಗಿಂತಲೂ ಹೆಚ್ಚು ಗಮನ ಸೆಳೆಯುತ್ತಿದ್ದು, 2019ರ ಲೋಕಸಭೆ ಚುನಾವಣೆ ಮೂಲಕ ಪಶ್ಚಿಮ ಬಂಗಾಳದಲ್ಲಿ ಕೊಂಚ ಬಲಪಡೆದಿರುವ ಬಿಜೆಪಿ ಪ್ರಸ್ತುತ ಆಡಳಿತರೂಢ ಟಿಎಂಸಿಗೆ ಅತಿದೊಡ್ಡ ಸವಾಲಾಗಿ ಪರಿಣಮಿಸಿದೆ. 294 ಸ್ಥಾನಗಳಲ್ಲಿ ಕನಿಷ್ಟ 200 ಸ್ಥಾನಗಳನ್ನಾದರೂ ಬಾಚಿಕೊಳ್ಳುವ ಉಮೇದಿಯಲ್ಲಿರುವ ಬಿಜೆಪಿಯನ್ನು ಕಟ್ಟಿಹಾಕಲು ಟಿಎಂಸಿ ಪ್ರಯತ್ನಿಸುತ್ತಲೇ ಇದೆ. ಸದ್ಯ ಈ ಪ್ರಯತ್ನದ ಒಂದು ಭಾಗವೆಂಬಂತೆ ₹5ಕ್ಕೆ ಊಟ ನೀಡುವ ಯೋಜನೆ ಶುರುವಾಗಿದ್ದು, ಬಿಜೆಪಿ ಇದಕ್ಕೆ ಯಾವ ರೀತಿಯಲ್ಲಿ ತಿರುಗೇಟು ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm