ಬ್ರೇಕಿಂಗ್ ನ್ಯೂಸ್
15-02-21 02:09 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಫೆ.15 : ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ತಂತ್ರಗಾರಿಕೆ ಜೋರಾಗಿ ಸಾಗುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡಿರುವ ಮಮತಾ ಬ್ಯಾನರ್ಜಿ ಸರ್ಕಾರ ಇಂದಿನಿಂದಲೇ ರಾಜ್ಯದ ಜನತೆಗೆ ಐದು ರೂಪಾಯಿಗೆ ಊಟ ನೀಡಲು ಸಿದ್ಧವಾಗಿದೆ. ಈ ಯೋಜನೆಗೆ ‘ಮಾ’ ಎಂದು ಹೆಸರಿಡಲಾಗಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದ (TMC) ‘‘ಮಾ, ಮಾಟಿ, ಮನುಷ್’’ (ತಾಯಿ, ಭೂಮಿ, ಮನುಷ್ಯ) ಎಂಬ ಘೋಷವಾಕ್ಯದಿಂದಲೇ ಯೋಜನೆಯ ಹೆಸರನ್ನು ಆರಿಸಿಕೊಳ್ಳಲಾಗಿದೆ.
ಆರಂಭಿಕ ಹಂತದಲ್ಲಿ ಕೋಲ್ಕತ್ತಾ ನಗರದ 16 ಕಡೆ ‘ಮಾ’ ಯೋಜನೆ ಜಾರಿಯಾಗಲಿದ್ದು, ನಂತರದ ದಿನಗಳಲ್ಲಿ ರಾಜ್ಯದೆಲ್ಲೆಡೆ ವಿಸ್ತರಿಸಲು ನಿರ್ಧರಿಸಲಾಗಿದೆ.
ಮಾ ಯೋಜನೆಯಡಿಯಲ್ಲಿ ಸಿಗುವ ಊಟಕ್ಕೆ ಅನ್ನ, ದಾಲ್, ತರಕಾರಿ ಪದಾರ್ಥ ಮತ್ತು ಮೊಟ್ಟೆಯನ್ನು ನೀಡಲಾಗುವುದು. ಒಂದು ತಟ್ಟೆ ಊಟಕ್ಕೆ ₹5 ಇರಲಿದ್ದು, ನಿಗದಿತ ಸಮಯದಲ್ಲಿ ಊಟ ದೊರೆಯಲಿದೆ ಎಂದು ಯೋಜನೆಯ ಕುರಿತಾಗಿ ಕೋಲ್ಕತ್ತಾ ಮಹಾನಗರ ಪಾಲಿಕೆ ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. ಈ ಯೋಜನೆಗಾಗಿಯೇ ಬಜೆಟ್ನಲ್ಲಿ ಮೊತ್ತವನ್ನು ತೆಗೆದಿರಿಸಲಾಗಿದ್ದು ಕ್ರಮೇಣ ನಗರ, ಸಣ್ಣ ಪಟ್ಟಣ ಹಾಗೂ ಗ್ರಾಮಾಂತರ ಭಾಗಗಳ ಜನರನ್ನೂ ‘ಮಾ’ ತಲುಪಲಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಕೊವಿಡ್ 19 ಸಾಂಕ್ರಾಮಿಕದಿಂದ ಕೆಲಸ ಕಳೆದುಕೊಂಡ ವಲಸೆ ಕಾರ್ಮಿಕರಿಗೆಂದೇ ಟಿಎಂಸಿ ಪಕ್ಷವು ದೀದಿರ್ ರಾನಾಘರ್ (ದೀದಿಯ ಅಡುಗೆಕೋಣೆ) ಎಂಬ ಯೋಜನೆ ಜಾರಿಗೆ ತಂದಿತ್ತು. ಇನ್ನೊಂದೆಡೆ ಇದಕ್ಕೆ ಪ್ರತಿಯಾಗಿ ಸಿಪಿಐ(ಎಂ) ಪಕ್ಷವೂ ‘ಶ್ರಮಜೀವಿ ಕ್ಯಾಂಟಿನ್’ ಆರಂಭಿಸಿತ್ತು. ಜೊತೆಗೆ, ಸುಮಾರು 50 ಆರೋಗ್ಯ ಕೇಂದ್ರ ಆರಂಭಿಸಿ, ಸಂಕಷ್ಟದಲ್ಲಿರುವವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿ ಗಮನ ಸೆಳೆದಿತ್ತು.
ಈ ಬಾರಿಯ ವಿಧಾನಸಭೆ ಚುನಾವಣೆ ಹಿಂದೆಂದಿಗಿಂತಲೂ ಹೆಚ್ಚು ಗಮನ ಸೆಳೆಯುತ್ತಿದ್ದು, 2019ರ ಲೋಕಸಭೆ ಚುನಾವಣೆ ಮೂಲಕ ಪಶ್ಚಿಮ ಬಂಗಾಳದಲ್ಲಿ ಕೊಂಚ ಬಲಪಡೆದಿರುವ ಬಿಜೆಪಿ ಪ್ರಸ್ತುತ ಆಡಳಿತರೂಢ ಟಿಎಂಸಿಗೆ ಅತಿದೊಡ್ಡ ಸವಾಲಾಗಿ ಪರಿಣಮಿಸಿದೆ. 294 ಸ್ಥಾನಗಳಲ್ಲಿ ಕನಿಷ್ಟ 200 ಸ್ಥಾನಗಳನ್ನಾದರೂ ಬಾಚಿಕೊಳ್ಳುವ ಉಮೇದಿಯಲ್ಲಿರುವ ಬಿಜೆಪಿಯನ್ನು ಕಟ್ಟಿಹಾಕಲು ಟಿಎಂಸಿ ಪ್ರಯತ್ನಿಸುತ್ತಲೇ ಇದೆ. ಸದ್ಯ ಈ ಪ್ರಯತ್ನದ ಒಂದು ಭಾಗವೆಂಬಂತೆ ₹5ಕ್ಕೆ ಊಟ ನೀಡುವ ಯೋಜನೆ ಶುರುವಾಗಿದ್ದು, ಬಿಜೆಪಿ ಇದಕ್ಕೆ ಯಾವ ರೀತಿಯಲ್ಲಿ ತಿರುಗೇಟು ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am