ಬ್ರೇಕಿಂಗ್ ನ್ಯೂಸ್
17-08-20 06:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 17: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಪಕ್ಷದ ಮುಖಂಡರ ದ್ವೇಷ ಭಾಷಣಗಳ ವಿಚಾರದಲ್ಲಿ ಫೇಸ್ಬುಕ್ ಮೌನ ವಹಿಸಿದೆ ಎಂಬ ಅಮೆರಿಕದ ವಾಲ್ಸ್ಟ್ರೀಟ್ ಜರ್ನಲ್ ಪತ್ರಿಕೆಯ ವರದಿಯ ಹಿನ್ನೆಲೆಯಲ್ಲಿ ತಮಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಫೇಸ್ಬುಕ್ ಇಂಡಿಯಾದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿ ನವದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಫೇಸ್ಬುಕ್ನ ಇಂಡಿಯಾದ ಉನ್ನತ ಅಧಿಕಾರಿಯಾಗಿರುವ ಅಂಕಿ ದಾಸ್ ಅವರು ದೆಹಲಿ ಪೊಲೀಸರಿಗೆ ಸೋಮವಾರ ದೂರು ನೀಡಿದ್ದು, ‘ಆನ್ಲೈನ್ನಲ್ಲಿ ಕೆಲವರು ತಮ್ಮ ರಾಜಕೀಯ ಸಂಬಂಧಗಳ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯ ಒಬ್ಬ ಮುಖಂಡ ಮತ್ತು ಇತರ ಮೂವರ ದ್ವೇಷ ಭಾಷಣದ ಬಗ್ಗೆ ‘ಫೇಸ್ಬುಕ್ ಇಂಡಿಯಾ’ ಮೌನ ವಹಿಸಿದೆ. ತನ್ನ ವ್ಯಾಪಾರಕ್ಕೆ ಯಾವುದೇ ಹಾನಿ ಆಗದಿರಲಿ ಎಂಬುದೇ ಇದಕ್ಕೆ ಕಾರಣ. ಫೇಸ್ಬುಕ್ ಭಾರತದ ಸಾರ್ವಜನಿಕ ನೀತಿ, ನಿರ್ದೇಶಕಿ ಅಂಕಿ ದಾಸ್ ಅವರು ಈ ವಿಚಾರವಾಗಿ ತಮ್ಮ ಸಿಬ್ಬಂದಿಯ ಮೇಲೆ ಒತ್ತಡ ಹೇರುತ್ತಿದ್ದರು ಎಂದು ಅಮೆರಿಕದ ‘ವಾಲ್ಸ್ಟ್ರೀಟ್ ಜರ್ನಲ್’ ಭಾನುವಾರ ಮುಖಪುಟದಲ್ಲಿ ವರದಿ ಮಾಡಿತ್ತು. ಇದೇ ವಿಚಾರವಾಗಿ ತಮಗೆ ಬೆದರಿಕೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ನಿರಂತರವಾದ ಬೆದರಿಕೆ, ಕಿರುಕುಳದಿಂದಾಗಿ ತೊಂದರೆಗೀಡಾಗಿದ್ದೇನೆ ಎಂದು ದಾಸ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾರತದ ಹಿಂದೂ ಪತ್ರಿಕೆ ವರದಿ ಮಾಡಿದೆ. ಆದರೆ, ಪೊಲೀಸ್ ದೂರಿನ ಬಗ್ಗೆ ಮಾತನಾಡಲು ಫೇಸ್ಬುಕ್ ಆಗಲಿ, ಅಂಕಿ ದಾಸ್ ಆಗಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm