ಬ್ರೇಕಿಂಗ್ ನ್ಯೂಸ್
17-08-20 06:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 17: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಪಕ್ಷದ ಮುಖಂಡರ ದ್ವೇಷ ಭಾಷಣಗಳ ವಿಚಾರದಲ್ಲಿ ಫೇಸ್ಬುಕ್ ಮೌನ ವಹಿಸಿದೆ ಎಂಬ ಅಮೆರಿಕದ ವಾಲ್ಸ್ಟ್ರೀಟ್ ಜರ್ನಲ್ ಪತ್ರಿಕೆಯ ವರದಿಯ ಹಿನ್ನೆಲೆಯಲ್ಲಿ ತಮಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಫೇಸ್ಬುಕ್ ಇಂಡಿಯಾದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿ ನವದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಫೇಸ್ಬುಕ್ನ ಇಂಡಿಯಾದ ಉನ್ನತ ಅಧಿಕಾರಿಯಾಗಿರುವ ಅಂಕಿ ದಾಸ್ ಅವರು ದೆಹಲಿ ಪೊಲೀಸರಿಗೆ ಸೋಮವಾರ ದೂರು ನೀಡಿದ್ದು, ‘ಆನ್ಲೈನ್ನಲ್ಲಿ ಕೆಲವರು ತಮ್ಮ ರಾಜಕೀಯ ಸಂಬಂಧಗಳ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯ ಒಬ್ಬ ಮುಖಂಡ ಮತ್ತು ಇತರ ಮೂವರ ದ್ವೇಷ ಭಾಷಣದ ಬಗ್ಗೆ ‘ಫೇಸ್ಬುಕ್ ಇಂಡಿಯಾ’ ಮೌನ ವಹಿಸಿದೆ. ತನ್ನ ವ್ಯಾಪಾರಕ್ಕೆ ಯಾವುದೇ ಹಾನಿ ಆಗದಿರಲಿ ಎಂಬುದೇ ಇದಕ್ಕೆ ಕಾರಣ. ಫೇಸ್ಬುಕ್ ಭಾರತದ ಸಾರ್ವಜನಿಕ ನೀತಿ, ನಿರ್ದೇಶಕಿ ಅಂಕಿ ದಾಸ್ ಅವರು ಈ ವಿಚಾರವಾಗಿ ತಮ್ಮ ಸಿಬ್ಬಂದಿಯ ಮೇಲೆ ಒತ್ತಡ ಹೇರುತ್ತಿದ್ದರು ಎಂದು ಅಮೆರಿಕದ ‘ವಾಲ್ಸ್ಟ್ರೀಟ್ ಜರ್ನಲ್’ ಭಾನುವಾರ ಮುಖಪುಟದಲ್ಲಿ ವರದಿ ಮಾಡಿತ್ತು. ಇದೇ ವಿಚಾರವಾಗಿ ತಮಗೆ ಬೆದರಿಕೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ನಿರಂತರವಾದ ಬೆದರಿಕೆ, ಕಿರುಕುಳದಿಂದಾಗಿ ತೊಂದರೆಗೀಡಾಗಿದ್ದೇನೆ ಎಂದು ದಾಸ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾರತದ ಹಿಂದೂ ಪತ್ರಿಕೆ ವರದಿ ಮಾಡಿದೆ. ಆದರೆ, ಪೊಲೀಸ್ ದೂರಿನ ಬಗ್ಗೆ ಮಾತನಾಡಲು ಫೇಸ್ಬುಕ್ ಆಗಲಿ, ಅಂಕಿ ದಾಸ್ ಆಗಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am