ಬ್ರೇಕಿಂಗ್ ನ್ಯೂಸ್
23-02-21 12:26 pm Headline Karnataka News Network ದೇಶ - ವಿದೇಶ
ಭೋಪಾಲ್, ಫೆ.23: ನಿಂತಿದ್ದ ಟ್ಯಾಂಕರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಇಂದೋರ್ನ ತಲವಾಲಿ ಚಾಂದ್ ಬಳಿ ನಡೆದಿದೆ.
ಬೆಳಗಿನ ಜಾವ 2 ಗಂಟೆ ಸುಮಾರಿಗೆ ಘಟನೆ ನಡೆದಿರುವುದಾಗಿ ಅಂದಾಜಿಸಲಾಗಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರು ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಂತಿದ್ದ ತೈಲ ಸಾಗಣೆ ಟ್ಯಾಂಕರ್ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ 6 ಜನ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತರಾಗಿದ್ದಾರೆ.
ಮೃತ ಯುವಕರೆಲ್ಲರೂ ಇಂದೋರ್ನ ನಿವಾಸಿಗಳಾಗಿದ್ದು, 18 ರಿಂದ 28 ವರ್ಷ ಪ್ರಾಯದವರೆಂದು ತಿಳಿದುಬಂದಿದೆ. ಈ ಯುವಕರ ತಂಡವು ಇಂದೋರ್ನ ಹೊರ ಪ್ರಾಂತ್ಯದಲ್ಲಿರುವ ಮಾಂಗ್ಲಿಯಾದಿಂದ ತಮ್ಮ ನಗರಕ್ಕೆ ಮರಳುತ್ತಿದ್ದರು ಎಂದು ಲಸುದಿಯ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಮೃತರನ್ನು ರಿಶಿ ಪವಾರ್, ಸೂರಜ್, ಚಂದ್ರಭಾನ್ ರಘುವಂಶಿ, ಸೋನು ಜತ್, ಸುಮಿತ್ ಸಿಂಗ್ ಮತ್ತು ದೇವ್ ಎಂದು ಗುರುತಿಸಲಾಗಿದೆ.
ಅಪಘಾತವು ನಸುಕಿನ ವೇಳೆಯಲ್ಲಿ ನಡೆದಿರುವುದರಿಂದ ಚಾಲಕನಿಗೆ ನಿದ್ರೆ ಮಂಪರು ಆವರಿಸಿರುವುದು ಕಾರಣವಾಗಿರಬಹುದು ಎಂದು ಅನುಮಾನಿಸಲಾಗಿದೆ. ಜೊತೆಗೆ, ಅತಿಯಾದ ವೇಗ ಮತ್ತು ಅಜಾಗರೂಕತೆಯೂ ಅಪಘಾತಕ್ಕೆ ದಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿರುವರಾದರೂ ಬದುಕಿ ಬಾಳಬೇಕಿದ್ದ ಆರು ಯುವಕರು ಹೀಗೆ ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿರುವುದು ಅತ್ಯಂತ ಖೇದಕರ ಸಂಗತಿ.
After a Car ramed a parked tanker truck six students in car died on spot in Bhopal, Indore.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am